ಬೆಂಗಳೂರು: ‘ವಿನಾಯಕ ದಾಮೋದರ್ ಸಾವರ್ಕರ್ ಒಬ್ಬ ಚಿತ್ಪಾವನ ಬ್ರಾಹ್ಮಣ. ಅವರು ಮಾಂಸಾಹಾರ ಸೇವನೆ ಮಾಡುತ್ತಿದ್ದರು. ಅವರು ಗೋಹತ್ಯೆಗೆ ವಿರುದ್ಧವಾಗಿರಲಿಲ್ಲ’ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿರುವುದು ಈಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
ಗಾಂಧಿ ಜಯಂತಿ ಪ್ರಯುಕ್ತ ಬುಧವಾರ ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅವರು, ಸಾವರ್ಕರ್ ಮೂಲಭೂತವಾದಿಯಾಗಿದ್ದರು. ಆದರೆ, ಅವರು ಮಾಡರ್ನ್ ಕೂಡ ಆಗಿದ್ದರು. ಅವರು ಗೋಮಾಂಸ ಸೇವಿಸುತ್ತಿದ್ದರು ಎಂದೂ ಕೆಲವು ಜನ ಹೇಳುತ್ತಿದ್ದಾರೆ ಎಂದಿದ್ದರು.
ಸಾವರ್ಕರ್ ಬ್ರಾಹ್ಮಣ, ಹಾಗೆಂದು ಅವರು ಖಂಡಿತವಾಗಿಯೂ ಮಾಂಸಾಹಾರ ಸೇವನೆ ಮಾಡುತ್ತಿದ್ದರು. ಮೂಲಭೂತವಾದಿಯಾಗಿದ್ದರೂ ಮಾಡರ್ನ್ ಆಗಿದ್ದ ಅವರು ದನದ ಮಾಂಸ ಸೇವನೆ ಮಾಡುತ್ತಿದ್ದರು ಎಂದು ಕೆಲವರು ಹೇಳಿದ್ದಾರೆ. ಸಾವರ್ಕರ್ ಬಹಿರಂಗವಾಗಿಯೇ ಮಾಂಸಾಹಾರ ಸೇವನೆ ಬಗ್ಗೆ ಅರಿವು ಮೂಡಿಸುತ್ತಿದ್ದರು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಹಾಗೆ ನೋಡಲು ಹೋದರೆ ಮಹಾತ್ಮ ಗಾಂಧಿ ಸಸ್ಯಾಹಾರಿ. ಅವರಿಗೆ ಹಿಂದೂ ಸಂಸ್ಕೃತಿ ಬಗ್ಗೆ ಅಪಾರವಾದ ಗೌರವ, ನಂಬಿಕೆ ಇತ್ತು. ಆದರೆ, ಅವರ ಅಭಿಪ್ರಾಯ ಬೇರೆ ರೀತಿಯಲ್ಲತ್ತು. ಅವರು ಡೆಮಾಕ್ರಟಿಕ್ ಆಗಿದ್ದರು ಎಂದು ಗುಂಡೂರಾವ್ ಹೇಳಿದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…