ಬೆಂಗಳೂರು: ರಾಜ್ಯದ ಪ್ರತೀ ಜಿಲ್ಲೆಯಲ್ಲಿ ಡಿಸೆಂಬರ್ ಅಂತ್ಯದೊಳಗೆ ಗೋಶಾಲೆಗಳನ್ನು ಪ್ರಾರಂಭ ಮಾಡಲಾಗುವುದೆಂದು ಹೈಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಸಿರುವ ರಾಜ್ಯ ಸರಕಾರ, ಯಾವ ತಿಂಗ ಳಲ್ಲಿ, ಯಾವ ಜಿಲ್ಲೆಯಲ್ಲಿ ಗೋಶಾಲೆ ಕಾರ್ಯಾರಂಭ ಮಾಡಲಿವೆ ಎನ್ನುವ ಬಗ್ಗೆ ಪಟ್ಟಿಯನ್ನೂ ಸಲ್ಲಿಸಿದೆ.
ಸರಕಾರ ಮಾಡಿಕೊಂಡಿರುವ ಪಟ್ಟಿ ಯಂತೆ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಕಲಬುರಗಿ, ಬೆಳಗಾವಿ ಜಿಲ್ಲೆಗಳಲ್ಲಿ ಡಿಸೆಂಬರ್ ಅಂತ್ಯದೊಳಗೆ ಗೋಶಾಲೆಗಳು ಕಾರ್ಯಾರಂಭ ಮಾಡಲಿವೆ. ಚಿಕ್ಕಮಗಳೂರು, ವಿಜಯ ಪುರ, ಮೈಸೂರು, ಹಾಸನ ಹಾಗೂ ತುಮಕೂರು ಜಿಲ್ಲೆಗಳಲ್ಲಿ 2022ರ ಜುಲೈ 15ರೊಳಗೆ ಗೋಶಾಲೆಗಳು ಕಾರ್ಯಾರಂಭ ಮಾಡ ಲಿವೆ. ಬೀದರ್, ಕೊಪ್ಪಳ, ಚಿತ್ರದುರ್ಗ, ಹಾವೇರಿ, ಉತ್ತರ ಕನ್ನಡ, ದಾವಣಗೆರೆ, ಕೊಡಗು, ಚಾಮರಾಜ ನಗರ, ಕೋಲಾರ ಹಾಗೂ ಬೆಂಗ ಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಆಗಸ್ಟ್ 1ರೊಳಗೆ ಗೋಶಾಲೆಗಳು ಕಾರ್ಯಾ ರಂಭ ಮಾಡಲಿವೆ. ರಾಯ ಚೂರು, ಧಾರವಾಡ, ಮಂಡ್ಯ, ಯಾದಗಿರಿ, ರಾಮನಗರ ಜಿಲ್ಲೆಗಳಲ್ಲಿ ಸೆಪ್ಟಂಬರ್ 1ರೊಳಗೆ, ಗದಗ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಅಕ್ಟೋಬರ್ 1ರೊಳಗೆ ಹೀಗೆ ವರ್ಷದ ಅಂತ್ಯದೊಳಗೆ ಎಲ್ಲ 30 ಗೋಶಾಲೆಗಳ ಸ್ಥಾಪನೆ ಪ್ರಕ್ರಿಯೆ ಮುಗಿಯಲಿದೆ ಎಂದು ಸರಕಾರ ಹೇಳಿದೆ.
ಹೈಕೋರ್ಟ್ ಕಾನೂನು ಸೇವೆಗಳ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸರಕಾರ ಪ್ರಮಾಣಪತ್ರ ಸಲ್ಲಿಸಿದೆ.
ಪಶುಸಂಗೋಪನ ಇಲಾಖೆ 2019ರಲ್ಲಿ ನಡೆಸಿದ ಜಾನುವಾರು ಗಣತಿ ಪ್ರಕಾರ ರಾಜ್ಯದಲ್ಲಿ 77,075 ಬೀಡಾಡಿ ದನಗಳು ಇದ್ದಾವೆ. ಅವುಗಳ ನಿರ್ವಹಣೆಗೆ ರಾಜ್ಯದ ಪ್ರತೀ ಜಿಲ್ಲೆಗೊಂದು ಗೋಶಾಲೆಯನ್ನು ತೆರೆಯಲು ಹಂತ-ಹಂತವಾಗಿ ಕ್ರಮ ಕೈಗೊಳ್ಳಲು ಸರಕಾರ ನಿರ್ಧರಿಸಿದೆ. 2021-22ನೇ ಸಾಲಿನ ಬಜೆಟ್ನಲ್ಲಿ ಪ್ರತೀ ಜಿಲ್ಲೆಗೊಂದು ಗೋಶಾಲೆ ಸ್ಥಾಪಿಸುವುದಾಗಿ ಸಿಎಂ ಘೋಷಿಸಿದ್ದರು. ಅದಕ್ಕಾಗಿ 15 ಕೋಟಿ ರೂ. ಅನುದಾನ ಸಹ ಮೀಸಲಿಡಲಾಗಿದೆ.
ಗೋಶಾಲೆಗಳಿಗೆ ಜಾಗ ಗುರುತಿಸುವುದು, ಅದರ ಸ್ಥಾಪನೆ ಮತ್ತು ನಿರ್ವಹಣೆ, ಅನುದಾನ ಬಳಕೆ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳ ನೇತೃತ್ವದ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಜಿಲ್ಲಾ ಮಟ್ಟದ ಸಮಿತಿ (ಡಿಎಸ್ಪಿಸಿಎ) ಗಳಿಗೆ ವಹಿಸಲಾಗಿದೆ ಎಂದು ಸರಕಾರ ಹೇಳಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…