Featured

ವರ್ಷಾಂತ್ಯಕ್ಕೆ ದ.ಕ., ಉಡುಪಿ ಜಿಲ್ಲೆ ಸೇರಿದಂತೆ 30 ಗೋಶಾಲೆ ಸ್ಥಾಪನೆ : ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದ ಸರಕಾರ – Vishwnaews24

ವರ್ಷಾಂತ್ಯಕ್ಕೆ ದ.ಕ., ಉಡುಪಿ ಸೇರಿದಂತೆ 30 ಗೋಶಾಲೆ ಸ್ಥಾಪನೆ : ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದ ಸರಕಾರ

ಬೆಂಗಳೂರು: ರಾಜ್ಯದ ಪ್ರತೀ ಜಿಲ್ಲೆಯಲ್ಲಿ ಡಿಸೆಂಬರ್‌ ಅಂತ್ಯದೊಳಗೆ ಗೋಶಾಲೆಗಳನ್ನು ಪ್ರಾರಂಭ ಮಾಡಲಾಗುವುದೆಂದು ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿರುವ ರಾಜ್ಯ ಸರಕಾರ, ಯಾವ ತಿಂಗ ಳಲ್ಲಿ, ಯಾವ ಜಿಲ್ಲೆಯಲ್ಲಿ ಗೋಶಾಲೆ ಕಾರ್ಯಾರಂಭ ಮಾಡಲಿವೆ ಎನ್ನುವ ಬಗ್ಗೆ ಪಟ್ಟಿಯನ್ನೂ ಸಲ್ಲಿಸಿದೆ.

ಸರಕಾರ ಮಾಡಿಕೊಂಡಿರುವ ಪಟ್ಟಿ ಯಂತೆ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಕಲಬುರಗಿ, ಬೆಳಗಾವಿ ಜಿಲ್ಲೆಗಳಲ್ಲಿ ಡಿಸೆಂಬರ್‌ ಅಂತ್ಯದೊಳಗೆ ಗೋಶಾಲೆಗಳು ಕಾರ್ಯಾರಂಭ ಮಾಡಲಿವೆ. ಚಿಕ್ಕಮಗಳೂರು, ವಿಜಯ ಪುರ, ಮೈಸೂರು, ಹಾಸನ ಹಾಗೂ ತುಮಕೂರು ಜಿಲ್ಲೆಗಳಲ್ಲಿ 2022ರ ಜುಲೈ 15ರೊಳಗೆ ಗೋಶಾಲೆಗಳು ಕಾರ್ಯಾರಂಭ ಮಾಡ ಲಿವೆ. ಬೀದರ್‌, ಕೊಪ್ಪಳ, ಚಿತ್ರದುರ್ಗ, ಹಾವೇರಿ, ಉತ್ತರ ಕನ್ನಡ, ದಾವಣಗೆರೆ, ಕೊಡಗು, ಚಾಮರಾಜ ನಗರ, ಕೋಲಾರ ಹಾಗೂ ಬೆಂಗ ಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಆಗಸ್ಟ್‌ 1ರೊಳಗೆ ಗೋಶಾಲೆಗಳು ಕಾರ್ಯಾ ರಂಭ ಮಾಡಲಿವೆ. ರಾಯ ಚೂರು, ಧಾರವಾಡ, ಮಂಡ್ಯ, ಯಾದಗಿರಿ, ರಾಮನಗರ ಜಿಲ್ಲೆಗಳಲ್ಲಿ ಸೆಪ್ಟಂಬರ್‌ 1ರೊಳಗೆ, ಗದಗ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಅಕ್ಟೋಬರ್‌ 1ರೊಳಗೆ ಹೀಗೆ ವರ್ಷದ ಅಂತ್ಯದೊಳಗೆ ಎಲ್ಲ 30 ಗೋಶಾಲೆಗಳ ಸ್ಥಾಪನೆ ಪ್ರಕ್ರಿಯೆ ಮುಗಿಯಲಿದೆ ಎಂದು ಸರಕಾರ ಹೇಳಿದೆ.

ಹೈಕೋರ್ಟ್‌ ಕಾನೂನು ಸೇವೆಗಳ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸರಕಾರ ಪ್ರಮಾಣಪತ್ರ ಸಲ್ಲಿಸಿದೆ.

ಪಶುಸಂಗೋಪನ ಇಲಾಖೆ 2019ರಲ್ಲಿ ನಡೆಸಿದ ಜಾನುವಾರು ಗಣತಿ ಪ್ರಕಾರ ರಾಜ್ಯದಲ್ಲಿ 77,075 ಬೀಡಾಡಿ ದನಗಳು ಇದ್ದಾವೆ. ಅವುಗಳ ನಿರ್ವಹಣೆಗೆ ರಾಜ್ಯದ ಪ್ರತೀ ಜಿಲ್ಲೆಗೊಂದು ಗೋಶಾಲೆಯನ್ನು ತೆರೆಯಲು ಹಂತ-ಹಂತವಾಗಿ ಕ್ರಮ ಕೈಗೊಳ್ಳಲು ಸರಕಾರ ನಿರ್ಧರಿಸಿದೆ. 2021-22ನೇ ಸಾಲಿನ ಬಜೆಟ್‌ನಲ್ಲಿ ಪ್ರತೀ ಜಿಲ್ಲೆಗೊಂದು ಗೋಶಾಲೆ ಸ್ಥಾಪಿಸುವುದಾಗಿ ಸಿಎಂ ಘೋಷಿಸಿದ್ದರು. ಅದಕ್ಕಾಗಿ 15 ಕೋಟಿ ರೂ. ಅನುದಾನ ಸಹ ಮೀಸಲಿಡಲಾಗಿದೆ.

ಗೋಶಾಲೆಗಳಿಗೆ ಜಾಗ ಗುರುತಿಸುವುದು, ಅದರ ಸ್ಥಾಪನೆ ಮತ್ತು ನಿರ್ವಹಣೆ, ಅನುದಾನ ಬಳಕೆ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳ ನೇತೃತ್ವದ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಜಿಲ್ಲಾ ಮಟ್ಟದ ಸಮಿತಿ (ಡಿಎಸ್‌ಪಿಸಿಎ) ಗಳಿಗೆ ವಹಿಸಲಾಗಿದೆ ಎಂದು ಸರಕಾರ ಹೇಳಿದೆ.

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

5 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

5 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

6 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

7 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

7 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

7 hours ago