Featured

ವರ ತಾಳಿ ಕಟ್ಟಿದ ಬಳಿಕ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ವಧು ಸಾವು

ಹೈದರಾಬಾದ್‌ : ಹಸೆ ಮಣೆ ಏರಿದ 23ರ ಹರೆಯದ ನೂತನ ವಧುವಿಗೆ ವರನು ಮಂಗಲ ಸೂತ್ರ ಕಟ್ಟಿದ ಒಡನೆಯೇ, ವಧು ಮದುವೆ ಮಂಟಪದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತ ಪಟ್ಟ ಕರುಣಾಜನಕ ಘಟನೆ  ತೆಲಂಗಾಣ ಪಟ್ಟಣದಲ್ಲಿ ನಡೆದಿದೆ.

ತೆಲಂಗಾಣದ ಕರ್ನೂಲ್‌ ಜಿಲ್ಲೆಯ ಅಚಾಮ್‌ಪೆಟ್‌ ಪಟ್ಟಣದಲ್ಲಿ ಈ ದುರ್ಘ‌ಟನೆ ನಡೆಯಿತು. ಮೃತ ಪಟ್ಟ ವಧುವಿನ ಹೆಸರು ಕೊಂಡಿ ನಿರಂಜನಮ್ಮ ಅಲಿಯಾಸ್‌ ಲಕ್ಷ್ಮೀ. ವರ ವೆಂಕಟೇಶ್‌ ಅವರು ಮಂಗಲ ಸೂತ್ರ ಕಟ್ಟಿದ ಒಡನೆಯೇ ವಧು ನಿರಂಜನಮ್ಮ ಹೃದಯಾಘಾತಕ್ಕೆ ಗುರಿಯಾಗಿ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಮೃತಪಟ್ಟರು. ಮದುವೆ ಸಮಾರಂಭವನ್ನು ವಧುವಿನ ಮನೆಯಲ್ಲೇ ಏರ್ಪಡಿಸಲಾಗಿತ್ತು.

ವರನು ತಾಳಿ ಕಟ್ಟಿದ ಬಳಿಕ ಮನೆಯವರೆಲ್ಲ ನೂತನ ವಧು-ವರನ ಮೇಲೆ ಅಕ್ಷತೆ ಹಾಕಿದ ಬಳಿಕ ಪುರೋಹಿತರು ಅರುಂಧತಿ ನಕ್ಷತ್ರ ನೋಡಲು ಎದ್ದೇಳಿ ಎಂದು ಹೇಳಿದರು. ಆದರೆ ಅಷ್ಟರೊಳಗಾಗಿ ಮದುವೆ ಮಂಟಪದಲ್ಲೇ ಕುಸಿದು ಬಿದ್ದ ವಧು ನಿರಂಜನಮ್ಮ ಮೇಲೇಳಲೇ ಇಲ್ಲ. ಒಡನೆಯೇ ಮನೆಯವರು ವಧುವನ್ನು ಆಸ್ಪತ್ರೆಗೆ ಒಯ್ದರು. ಆದರೆ ಆಕೆ ಅದಾಗಲೇ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಪ್ರಕಟಿಸಿದರು.

ವಧುವಿನ ಹಠಾತ್‌ ಸಾವಿಗೆ ಎರಡೂ ಕಡೆಯವರು ಯಾವುದೇ ಸಂದೇಹ ವ್ಯಕ್ತಪಡಿಸಿಲ್ಲ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

 

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

1 day ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

1 day ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

1 day ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

1 day ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago