Featured

ವರ ತಾಳಿ ಕಟ್ಟಿದ ಬಳಿಕ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ವಧು ಸಾವು

ಹೈದರಾಬಾದ್‌ : ಹಸೆ ಮಣೆ ಏರಿದ 23ರ ಹರೆಯದ ನೂತನ ವಧುವಿಗೆ ವರನು ಮಂಗಲ ಸೂತ್ರ ಕಟ್ಟಿದ ಒಡನೆಯೇ, ವಧು ಮದುವೆ ಮಂಟಪದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತ ಪಟ್ಟ ಕರುಣಾಜನಕ ಘಟನೆ  ತೆಲಂಗಾಣ ಪಟ್ಟಣದಲ್ಲಿ ನಡೆದಿದೆ.

ತೆಲಂಗಾಣದ ಕರ್ನೂಲ್‌ ಜಿಲ್ಲೆಯ ಅಚಾಮ್‌ಪೆಟ್‌ ಪಟ್ಟಣದಲ್ಲಿ ಈ ದುರ್ಘ‌ಟನೆ ನಡೆಯಿತು. ಮೃತ ಪಟ್ಟ ವಧುವಿನ ಹೆಸರು ಕೊಂಡಿ ನಿರಂಜನಮ್ಮ ಅಲಿಯಾಸ್‌ ಲಕ್ಷ್ಮೀ. ವರ ವೆಂಕಟೇಶ್‌ ಅವರು ಮಂಗಲ ಸೂತ್ರ ಕಟ್ಟಿದ ಒಡನೆಯೇ ವಧು ನಿರಂಜನಮ್ಮ ಹೃದಯಾಘಾತಕ್ಕೆ ಗುರಿಯಾಗಿ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಮೃತಪಟ್ಟರು. ಮದುವೆ ಸಮಾರಂಭವನ್ನು ವಧುವಿನ ಮನೆಯಲ್ಲೇ ಏರ್ಪಡಿಸಲಾಗಿತ್ತು.

ವರನು ತಾಳಿ ಕಟ್ಟಿದ ಬಳಿಕ ಮನೆಯವರೆಲ್ಲ ನೂತನ ವಧು-ವರನ ಮೇಲೆ ಅಕ್ಷತೆ ಹಾಕಿದ ಬಳಿಕ ಪುರೋಹಿತರು ಅರುಂಧತಿ ನಕ್ಷತ್ರ ನೋಡಲು ಎದ್ದೇಳಿ ಎಂದು ಹೇಳಿದರು. ಆದರೆ ಅಷ್ಟರೊಳಗಾಗಿ ಮದುವೆ ಮಂಟಪದಲ್ಲೇ ಕುಸಿದು ಬಿದ್ದ ವಧು ನಿರಂಜನಮ್ಮ ಮೇಲೇಳಲೇ ಇಲ್ಲ. ಒಡನೆಯೇ ಮನೆಯವರು ವಧುವನ್ನು ಆಸ್ಪತ್ರೆಗೆ ಒಯ್ದರು. ಆದರೆ ಆಕೆ ಅದಾಗಲೇ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಪ್ರಕಟಿಸಿದರು.

ವಧುವಿನ ಹಠಾತ್‌ ಸಾವಿಗೆ ಎರಡೂ ಕಡೆಯವರು ಯಾವುದೇ ಸಂದೇಹ ವ್ಯಕ್ತಪಡಿಸಿಲ್ಲ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

 

Vishwa News 24

Recent Posts

ರಾಮಮಂದಿರ ನಿರ್ಮಾಣದ ವಿರುದ್ಧ ನ್ಯಾಯಾಲಯಕ್ಕೆ ಹೋದವರು ಈಗ ಧರ್ಮೋಪದೇಶ ನೀಡುತ್ತಿದ್ದಾರೆ : ಯೋಗಿ ಆದಿತ್ಯನಾಥ್‌ – vishwanews24

ರಾಮಮಂದಿರ ವಿರೋಧಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ : ಯೋಗಿ ಆದಿತ್ಯನಾಥ್‌ ಲಖ್ನೋ(ಉ.ಪ್ರ) : ರಾಮಮಂದಿರ ನಿರ್ಮಾಣದ ವಿರುದ್ಧ ನ್ಯಾಯಾಲಯಕ್ಕೆ ಹೋದವರು…

11 minutes ago

ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ – vishwanews24

ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ ಉಡುಪಿ: ಇತ್ತೀಚೆಗೆ ನ್ಯಾಯಯುತವಾದ…

1 hour ago

ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್​ಕಾರ್ಟ್​ : 1.8 ಲಕ್ಷ ರೂ. ಪರಿಹಾರಕ್ಕೆ ಮುಂಬೈನ ಗ್ರಾಹಕ ನ್ಯಾಯಾಲಯ ಆದೇಶ – vishwanews24

ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್​ಕಾರ್ಟ್​ : ಭಾರಿ ದಂಡ ವಿಧಿಸಿದ ಮುಂಬೈನ ಗ್ರಾಹಕ ನ್ಯಾಯಾಲಯ ಮುಂಬೈ: ಆನ್‌ಲೈನ್‌ನಲ್ಲಿ ಲಕ್ಷಾಂತರ…

1 hour ago

ಕೇಂದ್ರದ ಭರವಸೆಯ ಬಳಿಕ  ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ – vishwanews24

ಕೇಂದ್ರದ ಭರವಸೆಯ ಬಳಿಕ  ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ ನವದೆಹಲಿ: ಹೋರಾಟಗಾರ ಹಾಗೂ ಲಡಾಖ್‌ನ ಸಾಮಾಜಿಕ ಕಾರ್ಯಕರ್ತ…

2 hours ago

ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ – vishwanews24

ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಬೆಂಗಳೂರು: ತುಳುವೆರೆ ಚಾವಡಿಯ 28ನೇ ವರ್ಷದ "ಪರ್ಬದ…

2 hours ago

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಚಿರತೆ ಪ್ರತ್ಯಕ್ಷ ; ವಾಹನ ಸವಾರರಲ್ಲಿ ಆತಂಕ – vishwanews24

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಚಿರತೆ ಪ್ರತ್ಯಕ್ಷ ; ವಾಹನ ಸವಾರರಲ್ಲಿ ಆತಂಕ ಬೆಳ್ತಂಗಡಿ,: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು…

2 hours ago