Featured

ವರ ತಾಳಿ ಕಟ್ಟಿದ ಬಳಿಕ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ವಧು ಸಾವು

ಹೈದರಾಬಾದ್‌ : ಹಸೆ ಮಣೆ ಏರಿದ 23ರ ಹರೆಯದ ನೂತನ ವಧುವಿಗೆ ವರನು ಮಂಗಲ ಸೂತ್ರ ಕಟ್ಟಿದ ಒಡನೆಯೇ, ವಧು ಮದುವೆ ಮಂಟಪದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತ ಪಟ್ಟ ಕರುಣಾಜನಕ ಘಟನೆ  ತೆಲಂಗಾಣ ಪಟ್ಟಣದಲ್ಲಿ ನಡೆದಿದೆ.

ತೆಲಂಗಾಣದ ಕರ್ನೂಲ್‌ ಜಿಲ್ಲೆಯ ಅಚಾಮ್‌ಪೆಟ್‌ ಪಟ್ಟಣದಲ್ಲಿ ಈ ದುರ್ಘ‌ಟನೆ ನಡೆಯಿತು. ಮೃತ ಪಟ್ಟ ವಧುವಿನ ಹೆಸರು ಕೊಂಡಿ ನಿರಂಜನಮ್ಮ ಅಲಿಯಾಸ್‌ ಲಕ್ಷ್ಮೀ. ವರ ವೆಂಕಟೇಶ್‌ ಅವರು ಮಂಗಲ ಸೂತ್ರ ಕಟ್ಟಿದ ಒಡನೆಯೇ ವಧು ನಿರಂಜನಮ್ಮ ಹೃದಯಾಘಾತಕ್ಕೆ ಗುರಿಯಾಗಿ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಮೃತಪಟ್ಟರು. ಮದುವೆ ಸಮಾರಂಭವನ್ನು ವಧುವಿನ ಮನೆಯಲ್ಲೇ ಏರ್ಪಡಿಸಲಾಗಿತ್ತು.

ವರನು ತಾಳಿ ಕಟ್ಟಿದ ಬಳಿಕ ಮನೆಯವರೆಲ್ಲ ನೂತನ ವಧು-ವರನ ಮೇಲೆ ಅಕ್ಷತೆ ಹಾಕಿದ ಬಳಿಕ ಪುರೋಹಿತರು ಅರುಂಧತಿ ನಕ್ಷತ್ರ ನೋಡಲು ಎದ್ದೇಳಿ ಎಂದು ಹೇಳಿದರು. ಆದರೆ ಅಷ್ಟರೊಳಗಾಗಿ ಮದುವೆ ಮಂಟಪದಲ್ಲೇ ಕುಸಿದು ಬಿದ್ದ ವಧು ನಿರಂಜನಮ್ಮ ಮೇಲೇಳಲೇ ಇಲ್ಲ. ಒಡನೆಯೇ ಮನೆಯವರು ವಧುವನ್ನು ಆಸ್ಪತ್ರೆಗೆ ಒಯ್ದರು. ಆದರೆ ಆಕೆ ಅದಾಗಲೇ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಪ್ರಕಟಿಸಿದರು.

ವಧುವಿನ ಹಠಾತ್‌ ಸಾವಿಗೆ ಎರಡೂ ಕಡೆಯವರು ಯಾವುದೇ ಸಂದೇಹ ವ್ಯಕ್ತಪಡಿಸಿಲ್ಲ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

 

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

2 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

2 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

2 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

3 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

6 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

6 hours ago