ನವದೆಹಲಿ : ವಲಸೆ ಕಾರ್ಮಿಕ ಕುಟುಂಬಕ್ಕೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ರೇಷನ್ ವಿತರಣಾ ವ್ಯವಸ್ಥೆಯಲ್ಲಿ ಹೊಸ ಯೋಜನೆಯನ್ನು ಜಾರಿಗೆ ತರಲಿದೆ.
ಕೆಲವು ಕಾರ್ಮಿಕರು ಕೆಲಸದ ನಿಮಿತ್ತ ದೇಶಾದ್ಯಂತ ವಲಸೆ ಹೋಗುತ್ತಾರೆ. ಈ ಹಿನ್ನಲೆಯಲ್ಲಿ ಅವರಿಗೂ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪ್ರಡೆಯಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರ ‘ಒನ್ ನೇಷನ್ ಒನ್ ರೇಷನ್ ಕಾರ್ಡ್’ ಯೋಜನೆಯನ್ನು ಜಾರಿಗೊಳಿಸುವ ನಿರ್ಧಾರ ಕೈಗೊಂಡಿದೆ.
ಕೇಂದ್ರ ಆಹಾರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅಧ್ಯಕ್ಷ ತೆಯಲ್ಲಿ ರಾಜ್ಯ ಆಹಾರ ಕಾರ್ಯದರ್ಶಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ತ್ವರಿತ ಜಾರಿಗೆ ಸೂಚಿಸಲಾಗಿದೆ. ಭಾರತೀಯ ಆಹಾರ ನಿಗಮ, ಕೇಂದ್ರ ಉಗ್ರಾಣ ನಿಗಮ, ರಾಜ್ಯ ಉಗ್ರಾಣ ನಿಗಮಗಳ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.
”ಇದರಿಂದ ವಲಸೆ ಕಾರ್ಮಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಅವರಿಗೆ ಪೂರ್ಣ ಆಹಾರ ಭದ್ರತೆ ದೊರೆಯಲಿದೆ. ಇಂತಹ ಕಾರ್ಮಿಕರು ಯಾವುದೇ ನಿರ್ದಿಷ್ಟ ಪಡಿತರ ಅಂಗಡಿಯಿಂದ ಆಹಾರ ಧಾನ್ಯಗಳನ್ನು ಖರೀದಿಸಬೇಕಾಗಿಲ್ಲ. ಬದಲಾಗಿ ತಮಗೆ ಸಮೀಪದ ಯಾವುದೇ ಪಡಿತರ ಅಂಗಡಿಯಿಂದಲೂ ಖರೀದಿಸಬಹುದಾಗಿದೆ. ಜತೆಗೆ ಭ್ರಷ್ಟಾಚಾರಕ್ಕೂ ಕಡಿವಾಣ ಬೀಳಲಿದೆ,” ಎಂದು ಸಚಿವ ಪಾಸ್ವಾನ್ ಅವರು ಸಭೆಯ ಬಳಿಕ ತಿಳಿಸಿದರು.
ಇದರಿಂದ ಅವರು ನಿರ್ದಿಷ್ಟ ಪಡಿತರ ಅಂಗಡಿಯಿಂದ ಆಹಾರ ಧಾನ್ಯಗಳನ್ನು ಖರೀದಿಸಬೇಕಾಗಿಲ್ಲ. ತಮಗೆ ಹತ್ತಿರವಿರುವ ಯಾವುದೇ ಪಡಿತರ ಅಂಗಡಿಯಿಂದಲೂ ಆಹಾರಧಾನ್ಯ ಖರೀದಿಸಬಹುದಾಗಿದೆ.
ಅಲ್ಲದೇ ಈ ಯೋಜನೆಯಿಂದ ಒಂದೇ ಕುಟುಂಬದವರು ಒಂದಕ್ಕಿಂತ ಹೆಚ್ಚು ಕಾರ್ಡ್ ಗಳನ್ನು ಪಡೆಯುವುದನ್ನು ತಪ್ಪಿಸಬಹುದು. ಇದರಿಂದ ದೇಶದ ಬೊಕ್ಕಸಕ್ಕೂ ಉಳಿತಾಯವಾಗುತ್ತದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…