ನವದೆಹಲಿ : ವಲಸೆ ಕಾರ್ಮಿಕ ಕುಟುಂಬಕ್ಕೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ರೇಷನ್ ವಿತರಣಾ ವ್ಯವಸ್ಥೆಯಲ್ಲಿ ಹೊಸ ಯೋಜನೆಯನ್ನು ಜಾರಿಗೆ ತರಲಿದೆ.
ಕೆಲವು ಕಾರ್ಮಿಕರು ಕೆಲಸದ ನಿಮಿತ್ತ ದೇಶಾದ್ಯಂತ ವಲಸೆ ಹೋಗುತ್ತಾರೆ. ಈ ಹಿನ್ನಲೆಯಲ್ಲಿ ಅವರಿಗೂ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪ್ರಡೆಯಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರ ‘ಒನ್ ನೇಷನ್ ಒನ್ ರೇಷನ್ ಕಾರ್ಡ್’ ಯೋಜನೆಯನ್ನು ಜಾರಿಗೊಳಿಸುವ ನಿರ್ಧಾರ ಕೈಗೊಂಡಿದೆ.
ಕೇಂದ್ರ ಆಹಾರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅಧ್ಯಕ್ಷ ತೆಯಲ್ಲಿ ರಾಜ್ಯ ಆಹಾರ ಕಾರ್ಯದರ್ಶಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ತ್ವರಿತ ಜಾರಿಗೆ ಸೂಚಿಸಲಾಗಿದೆ. ಭಾರತೀಯ ಆಹಾರ ನಿಗಮ, ಕೇಂದ್ರ ಉಗ್ರಾಣ ನಿಗಮ, ರಾಜ್ಯ ಉಗ್ರಾಣ ನಿಗಮಗಳ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.
”ಇದರಿಂದ ವಲಸೆ ಕಾರ್ಮಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಅವರಿಗೆ ಪೂರ್ಣ ಆಹಾರ ಭದ್ರತೆ ದೊರೆಯಲಿದೆ. ಇಂತಹ ಕಾರ್ಮಿಕರು ಯಾವುದೇ ನಿರ್ದಿಷ್ಟ ಪಡಿತರ ಅಂಗಡಿಯಿಂದ ಆಹಾರ ಧಾನ್ಯಗಳನ್ನು ಖರೀದಿಸಬೇಕಾಗಿಲ್ಲ. ಬದಲಾಗಿ ತಮಗೆ ಸಮೀಪದ ಯಾವುದೇ ಪಡಿತರ ಅಂಗಡಿಯಿಂದಲೂ ಖರೀದಿಸಬಹುದಾಗಿದೆ. ಜತೆಗೆ ಭ್ರಷ್ಟಾಚಾರಕ್ಕೂ ಕಡಿವಾಣ ಬೀಳಲಿದೆ,” ಎಂದು ಸಚಿವ ಪಾಸ್ವಾನ್ ಅವರು ಸಭೆಯ ಬಳಿಕ ತಿಳಿಸಿದರು.
ಇದರಿಂದ ಅವರು ನಿರ್ದಿಷ್ಟ ಪಡಿತರ ಅಂಗಡಿಯಿಂದ ಆಹಾರ ಧಾನ್ಯಗಳನ್ನು ಖರೀದಿಸಬೇಕಾಗಿಲ್ಲ. ತಮಗೆ ಹತ್ತಿರವಿರುವ ಯಾವುದೇ ಪಡಿತರ ಅಂಗಡಿಯಿಂದಲೂ ಆಹಾರಧಾನ್ಯ ಖರೀದಿಸಬಹುದಾಗಿದೆ.
ಅಲ್ಲದೇ ಈ ಯೋಜನೆಯಿಂದ ಒಂದೇ ಕುಟುಂಬದವರು ಒಂದಕ್ಕಿಂತ ಹೆಚ್ಚು ಕಾರ್ಡ್ ಗಳನ್ನು ಪಡೆಯುವುದನ್ನು ತಪ್ಪಿಸಬಹುದು. ಇದರಿಂದ ದೇಶದ ಬೊಕ್ಕಸಕ್ಕೂ ಉಳಿತಾಯವಾಗುತ್ತದೆ.
ಡಿವೈಡರ್ಗೆ ಕಾರು ಡಿಕ್ಕಿ : ಭೀಕರ ಅಪಘಾತದಲ್ಲಿ ಖ್ಯಾತ ನಟಿ ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…