Featured

ವಸತಿ ಶಾಲೆಯ ಹೆಣ್ಣು ಮಕ್ಕಳ ಮೇಲೆ ಪ್ಯಾರಾ ನರ್ಸಿಂಗ್ ಕೋರ್ಸ್ ಹೆಸರಲ್ಲಿ ಲೈಂಗಿಕ ದೌರ್ಜನ್ಯ, ಮೂವರು ಅರೆಸ್ಟ್ – vishwanews24

ವಸತಿ ಶಾಲೆಯ ಹೆಣ್ಣು ಮಕ್ಕಳ ಮೇಲೆ ಪ್ಯಾರಾ ನರ್ಸಿಂಗ್ ಕೋರ್ಸ್ ಹೆಸರಲ್ಲಿ ಲೈಂಗಿಕ ದೌರ್ಜನ್ಯ, ಮೂವರು ಅರೆಸ್ಟ್

ಕಡೂರು: ತಾಲೂಕಿನ ಕುಪ್ಪಾಳು ಮುರಾರ್ಜಿ ವಸತಿ ಶಾಲೆಯ ಅಪ್ರಾಪ್ತ ಬಾಲಕಿಯರನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪದ ಮೇಲೆ ಪೋಕ್ಸೋ ಪ್ರಕರಣದಡಿಯಲ್ಲಿ ಮೂವರನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಚನ್ನರಾಯಪಟ್ಟಣ ತಾಲೂಕು ನುಗ್ಗೆಹಳ್ಳಿ ಹೋಬಳಿಯ ಮುಳುಕೆರೆ ಗ್ರಾಮದ ನಿವಾಸಿ ಚಂದನ (26),(ಕಡೂರು ತಾಲೂಕು ಅಂಚೆಚೋಮನಹಳ್ಳಿಯ ಆರೋಗ್ಯ ಇಲಾಖೆಯಲ್ಲಿ ಎಎನ್‌ಎಂ ನರ್ಸ್), ಎರಡನೇ ಆರೋಪಿ ಅಂಚೆಚೋಮನಹಳ್ಳಿಯ ಗ್ರಾಮದ ತೊಟ್ಟಿಮನೆ ಸುರೇಶ್(35), ಮೂರನೇ ಆರೋಪಿ ಸೊರಬ ತಾಲೂಕಿನ ಆನವಟ್ಟಿಯ ಫ್ಯಾನ್ಸಿಸ್ಟೋರ್ ಮಾಲೀಕ ವಿನಯ್ ಕುಮಾರ್(27) ಬಂಧಿತ ಆರೋಪಿಗಳಾಗಿದ್ದಾರೆ.

ವಸತಿ ಶಾಲೆಯ ಪ್ರಾಂಶುಪಾಲರು ನೀಡಿದ ದೂರಿನ ಮೇರೆಗೆ ತರೀಕೆರೆ ಡಿವೈಎಸ್‌ಪಿ ಹಾಲಮೂರ್ತಿ ರಾವ್ ಅವರ ತಂಡವು ಕಾರ್ಯಾಚರಣೆ ಆರಂಭಿಸಿ ನಂ ೮ ರಂದು ಆರೋಪಿಗಳನ್ನು ವಶಕ್ಕೆ ಪಡೆದಿರುವುದಾಗಿ ಡಿವೈಎಸ್‌ಪಿ ಮಾಹಿತಿ ನೀಡಿದರು.

ಅಂಚೆಚೋಮನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಎಎನ್‌ಎಂ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿರುವ ಚಂದನ ಮದುವೆಯಾಗಿ ಈಗ ಗರ್ಭಿಣಿಯಾಗಿದ್ದು, ತನ್ನ ಪ್ರಿಯಕರ ವಿನಯ್ ಕುಮಾರ್(ಈತನೂ ವಿವಾಹಿತ)ಜೊತೆ ಈಗಲೂ ಸಂಪರ್ಕ ಇಟ್ಟುಕೊಂಡಿದ್ದಾಳೆ. ವಿನಯ್‌ಕುಮಾರ್ ಆಗಾಗ ಚಂದನಳ ಹತ್ತಿರ ಬಂದು ಹೋಗುತ್ತಿದ್ದು ಚಿಕ್ಕ ವಯಸ್ಸಿನ ಬಾಲಕಿಯರನ್ನು ಬಯಸಿದಾಗ ಆತನ ಮೇಲಿನ ಅತೀವ ಪ್ರೀತಿಯಿಂದ ಆರೋಪಿ ಚಂದನ ಮುರಾರ್ಜಿ ವಸತಿ ಶಾಲೆಯಲ್ಲಿ ಹಂಗಾಮಿ ಕೆಲಸ ಮಾಡುತ್ತಿರುವ ಸುರೇಶ್ ಎಂಬುವವನ ಸಹಾಯ ಪಡೆದು ವಸತಿ ಶಾಲೆಯ ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ಬಳಸಿಕೊಂಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ.

ಸುರೇಶ್ ವಸತಿ ನಿಲಯದ ಮಕ್ಕಳ ಪೋಷಕರನ್ನು ಕರೆದು ನಿಮ್ಮ ಮಗಳಿಗೆ ನರ್ಸ್ ಟ್ರೈನಿಂಗ್ ಇದೆ. ಅದನ್ನು ಮಾಡಿದರೆ ಮುಂದೆ ಬಹಳ ಸಹಾಯವಾಗುತ್ತದೆ ಹಾಗೂ ಸುಲಭವಾಗಿ ಕೆಲಸ ದೊರಕುತ್ತದೆ ಎಂದು ನಂಬಿಸಿ, ವಸತಿ ಶಾಲೆಯ ಇಬ್ಬರು ವಿದ್ಯಾರ್ಥಿನಿಯರನ್ನು ಚಂದನ ಅವರ ಸರ್ಕಾರಿ ಕ್ವಾಟ್ರಸ್‌ಗೆ ಕರೆದುಕೊಂಡು ಹೋಗಿ ಅಲ್ಲಿ ಅವರಿಗೆ ಪಾನೀಯದಲ್ಲಿ ಮತ್ತು ಬರುವ ಔಷಧಿ ನೀಡಿ ಮಕ್ಕಳು ಪ್ರಜ್ಞಾಶೂನ್ಯರಾದಾಗ ವಿನಯ್ ಕುಮಾರ್ ಅವರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ ಎಂಬ ವಿಚಾರವನ್ನು ಸುರೇಶ್ ಹೇಳಿದ್ದು ವಿನಯ್‌ಕುಮಾರ್ ಸಹ ಒಪ್ಪಿಕೊಂಡಿದ್ದಾನೆ. ಪೊಲೀಸ್ ಅಧಿಕಾರಿಗಳು ಮಕ್ಕಳನ್ನು ಪ್ರಶ್ನಿಸಿದಾಗ ಲೈಂಗಿಕ ದೌರ್ಜನ್ಯಕ್ಕೆ ಹಾಗೂ ಅತ್ಯಾಚಾರ ನಡೆದಿರುವುದಾಗಿ ಮಾಹಿತಿ ಬೆಳಕಿಗೆ ಬಂದಿದೆ.

ಚಂದನಳನ್ನು ವಶಕ್ಕೆ ಪಡೆದು ಆಕೆ ನೀಡಿದ ಮಾಹಿತಿ ಆಧರಿಸಿ ಆನವಟ್ಟಿಯಲ್ಲಿ ವಿನಯ್ ಕುಮಾರ್ ಮತ್ತು ತೊಟ್ಟಿಮನೆ ಸುರೇಶ್‌ನನ್ನು ಬಂಧಿಸಿ ಮೂವರನ್ನೂ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ಮೂರು ಜನರು ಈಗ ಚಿಕ್ಕಮಗಳೂರಿನ ಕಾರಾಗೃಹದಲ್ಲಿ ಬಂಧಿಯಾಗಿದ್ದಾರೆ. ಇವರ ವಿರುದ್ಧ ಪೋಕ್ಸೋ ಮತ್ತು ಅತ್ಯಾಚಾರ ಪ್ರಕರಣ ದಾಖಲಾಗಿದೆ ಎಂದು ತರೀಕೆರೆ ಡಿವೈಎಸ್ಪಿ ಹಾಲಮೂರ್ತಿ ರಾವ್ ಮಾಹಿತಿ ನೀಡಿದರು. ಕಾರ್ಯಾಚರಣೆಯಲ್ಲಿ ವೃತ್ತ ನಿರೀಕ್ಷಕ ಶಿವಕುಮಾರ್,ಕಡೂರು ಪಿಎಸ್‌ಐ ಧನಂಜಯ ಮತ್ತು ಸಿಬ್ಬಂದಿ ಇದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago