Featured

ವಸತಿ ಶಾಲೆ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ಘೋಷವಾಕ್ಯ ಬದಲಾವಣೆಗೆ ಕಾರಣ ಏನೆಂಬುದು ಗೊತ್ತಿಲ್ಲ : ಮಧು ಬಂಗಾರಪ್ಪ – Vishwanews24

ವಸತಿ ಶಾಲೆ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ಘೋಷವಾಕ್ಯ ಬದಲಾವಣೆಗೆ ಕಾರಣ ಏನೆಂಬುದು ಗೊತ್ತಿಲ್ಲ : ಮಧು ಬಂಗಾರಪ್ಪ

ಬೆಂಗಳೂರು: ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆಯಡಿ ಬರುವ ಅನೇಕ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ಘೋಷವಾಕ್ಯ ಬದಲಾವಣೆಗೆ ಕಾರಣ ಏನೆಂಬುದು ಗೊತ್ತಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ವಿಧಾನಸೌಧದಲ್ಲಿ ಈ ಸಂಬಂಧ ಪ್ರತಿಕ್ರಿಯಿಸಿದ ಅವರು, ಯಾವ ನಿಟ್ಟಿನಲ್ಲಿ ಈ ರೀತಿಯಾಗಿ ಘೋಷ ವಾಕ್ಯ ಬದಲಾವಣೆ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ಯಾಕೆಂದರೆ ಅದು ಕುವೆಂಪು ಅವರ ಕವಿತೆಯ ಸಾಲುಗಳು. ನಾವು ಕುವೆಂಪು ಆಶಯದ ರೀತಿಯಲ್ಲೇ ನಡೆದುಕೊಂಡು ಹೋಗುತ್ತೇವೆ ಎಂದು ಅವರು ಹೇಳಿದರು.

ವಿದ್ಯೆ ಅಂದರೆ ಸರಸ್ವತಿ. ಕೈ ಮುಗಿಯುವುದು ನಮ್ಮ ಸಂಪ್ರದಾಯ. ಅದು ಭಿಕ್ಷೆ ಬೇಡುವುದು ಅಲ್ಲ ಎಂಬುದು ನನ್ನ ಅಭಿಪ್ರಾಯ. ಏನಾದರೂ ಉದಾಹರಣೆಗಾಗಿ ಆ ರೀತಿ ಮಾಡಿರಬಹುದು. ಮಕ್ಕಳ ಹಕ್ಕು ಚ್ಯುತಿಯಾಗಿ ಈ ರೀತಿ ಮಾಡಿದ್ದಾರೋ ಗೊತ್ತಿಲ್ಲ. ಕೈ ಮುಗಿದು ಒಳಗೆ ಬಂದು ನಿಮ್ಮ ಹಕ್ಕನ್ನು ಪ್ರತಿಪಾದಿಸಿ ಎಂದು ಇದ್ದರೆ ಚೆನ್ನಾಗಿ ಇರುತ್ತಿತ್ತು. ಬಿಜೆಪಿಯವರು ವಿರೋಧ ಮಾಡಲಿ. ಯಾವುದೇ ಕಾರಣಕ್ಕೂ ಕುವೆಂಪು ಅವರಿಗೆ ನಮ್ಮ ಸರ್ಕಾರ ಅವಮಾನ ಮಾಡಲ್ಲ ಎಂದು ಮಧು ಬಂಗಾರಪ್ಪ ಸ್ಪಷ್ಟ ಪಡಿಸಿದ್ದಾರೆ.

ಕುವೆಂಪು ಅವರ ಕವಿತೆಯ ಸಾಲುಗಳನ್ನು ತೆಗೆಯದೇ ಇನ್ನಷ್ಟು ಚೆನ್ನಾಗಿ ಘೋಷವಾಕ್ಯ ಮಾಡಬಹುದಿತ್ತು. ಸರಸ್ವತಿ ಹಾಗೂ ಜ್ಞಾನಕ್ಕೆ ಜಾತಿ, ಧರ್ಮ ಇರಲ್ಲ. ಬಿಜೆಪಿ ಅವರು ಹೇಳಿದ್ದಾರೆ ಅಂತ ಬದಲಾವಣೆ ಮಾಡಬೇಕು ಅಂತೇನಿಲ್ಲ. ವೈಯಕ್ತಿಕವಾಗಿ ಇದನ್ನು ಇಟ್ಕೊಂಡು ಹಕ್ಕನ್ನು ಪ್ರತಿಪಾದಿಸು ಅಂತ ಇದ್ದರೆ ಒಳ್ಳೆಯದು. ಅದರಿಂದ ಅಂಬೇಡ್ಕರ್ ಅವರಿಗೂ ಗೌರವ ಕೊಟ್ಟಂತೆ ಆಗುತ್ತದೆ. ಕೈ ಮುಗಿದು ಒಳಗೆ ಬಾ ಅನ್ನೋದು ನಮ್ಮ ಸಂಪ್ರದಾಯ. ಹೊರದೇಶಗಳಲ್ಲೂ ಈ ಸಂಪ್ರದಾಯ ಪಾಲಿಸುತ್ತಾರೆ ಎಂದು ಮಧು ಬಂಗಾರಪ್ಪ ಹೇಳಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

20 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

23 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

23 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

23 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

23 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

23 hours ago