ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಚೇರಿಯೆದುರು ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಅವರ ಮೇಲೆ 2ನೇ ಬಾರಿಗೆ ಹಲ್ಲೆಯಾಗಿದೆ. ಅಟಲ್ ಬಿಹಾರಿ ವಾಜಪೇಯಿ ಅವರ ಅಂತಿಮ ದರ್ಶನಕ್ಕೆ ಹೋದಾಗ ಗುಂಪೊಂದು ಹಲ್ಲೆ ಮಾಡಿದೆ. ಈ ಹಿಂದೆ ಅಗ್ನಿವೇಶ್ಗೆ ಜಾರ್ಖಂಡ್ನಲ್ಲಿ ಬಿಜೆಪಿ ಕಾರ್ಯಕರ್ತರು ಹೊಡೆದಿದ್ದರು.
ದೆಹಲಿ ಬಿಜೆಪಿ ಕಚೇರಿಯೊಳಗೆ ವಾಜಪೇಯಿ ಅಂತಿಮ ದರ್ಶನಕ್ಕೆ ಹೋಗಲು ಅಗ್ನಿವೇಶ್ ಪ್ರಯತ್ನಿಸಿದಂತೆ ಕೆಲವು ಜನ ಅವರನ್ನು ದೇಶದ್ರೋಹಿ ಎಂದು ಕರೆದಿದ್ದಲ್ಲದೆ ಹಲ್ಲೆಗೆ ಮುಂದಾಗಿದ್ದಾರೆ. ಅಗ್ನಿವೇಶ್ ಅವರನ್ನು ತಳ್ಳಿದ್ದಾರೆ. ಅವರು ಓಡಿ ಹೋಗಲು ಪ್ರಯತ್ನಿಸಿದರೂ ಬೆನ್ನಟ್ಟಿ ಹೋಗಿದ್ದಾರೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ಮಧ್ಯೆ ಒಬ್ಬನು ಅಗ್ನಿವೇಶ್ ತಲೆಗೆ ಹೊಡೆದರೆ ಮತ್ತೊಬ್ಬ ಮಹಿಳೆ ಚಪ್ಪಲಿಯನ್ನು ಎತ್ತಿ ಎಸೆಯಲು ಮುಂದಾಗಿದ್ದಾಳೆ. ಇದನ್ನು ನೋಡಿದ ಪೊಲೀಸರು ಸ್ವಾಮಿ ಅಗ್ನಿವೇಶ ಅವರನ್ನು ತಮ್ಮ ವ್ಯಾನ್ ನಲ್ಲಿ ಕರೆದುಕೊಂಡು ಹೋಗಿ ರಕ್ಷಣೆ ಮಾಡಿದ್ದಾರೆ.
ನಾನು ಕೊನೇ ಬಾರಿ ವಾಜಪೇಯಿ ಅವರ ದರ್ಶನ ಪಡೆಯಲು ಹೋಗಿದ್ದೆ. ಅಲ್ಲಿ ಪೊಲೀಸರು ನಿರ್ಬಂಧ ಹೇರಿದ್ದರಿಂದ ಕಚೇರಿಯೊಳಗೆ ಪ್ರವೇಶಿಸಲು ನಡೆದುಕೊಂಡು ಹೋಗುತ್ತಿದ್ದಾಗ ಒಮ್ಮೆಲೇ ಬಂದ ಗುಂಪು ನನ್ನನ್ನು ತಳ್ಳಿ, ನನ್ನ ಮೇಲೆ ಹಲ್ಲೆ ನಡೆಸಿದೆ. ನನ್ನ ರುಮಾಲನ್ನೂ ಕಿತ್ತೆಸೆದಿದ್ದಾರೆ ಎಂದು ಅಗ್ನಿವೇಶ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…