Featured

ವಾಜಪೇಯಿ ಅವರ ‘ಶಾಂತಿಯ ಕನಸು’ ನನಸು ಮಾಡುವ ಜವಾಬ್ದಾರಿ ನಮ್ಮ ಮೇಲಿದೆ: ಇಮ್ರಾನ್ ಖಾನ್

ಇಸ್ಲಾಮಾಬಾದ್: ಇಂಡೋ-ಪಾಕ್ ನಡುವಿನ ಶಾಂತಿ-ಸೌಹಾರ್ಧಕ್ಕಾಗಿ ವಾಜಪೇಯಿ ಸಾಕಷ್ಟು ಶ್ರಮಿಸಿದ್ದರು ,ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಶಾಂತಿಯ ಕನಸನ್ನು ನನಸು ಮಾಡುವ ಬಹುದೊಡ್ಡ ಜವಾಬ್ದಾರಿ ನಮ್ಮ ಮೇಲಿದೆ ಎಂದು ಪಾಕಿಸ್ತಾನದ ಭಾವಿ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ವಾಜಪೇಯಿ ನಿಧನದ ಹಿನ್ನಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ವಾಜಪೇಯಿ ಭಾರತ ಮಾತ್ರವಲ್ಲ ದಕ್ಷಿಣ ಏಷ್ಯಾ ಓರ್ವ ಪ್ರಬುದ್ಧ ರಾಜಕಾರಣಿ ಮತ್ತು ನಾಯಕರಾಗಿದ್ದರು. ಭಾರತ ಮತ್ತು ಪಾಕಿಸ್ತಾನ ನಡುವಿನ ಸೌಹಾರ್ಧ ಸಂಬಂಧ ಸುಧಾರಣೆಗಾಗಿ ಅವರು ಸಾಕಷ್ಟು ಶ್ರಮಿಸಿದ್ದರು. ಅವರ ಅಗಲಿಕೆ ನಿಜಕ್ಕೂ ನೋವು ತಂದಿದೆ. ಅವರ ಶ್ರಮ ವ್ಯರ್ಥವಾಗಲು ನಾವು ಬಿಡುವುದಿಲ್ಲ. ಭಾರತ ಮತ್ತು ಪಾಕಿಸ್ತಾನದ ನಡುವಿನ ಸೌಹಾರ್ಧ ಸಂಬಂಧವನ್ನು ಗಟ್ಟಿಗೊಳಿಸಿ ಅವರ ಶಾಂತಿಯ ಕನಸನ್ನು ನನಸು ಮಾಡುತ್ತೇವೆ ಎಂದು ಹೇಳಿದ್ದಾರೆ.
ಅಂತೆಯೇ ವಾಜಪೇಯಿ ಅವರು ತಾವು ವಿದೇಶಾಂಗ ಸಚಿರಾಗಿದ್ದಾಗಲೇ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಸುಧಾರಣೆಗಾಗಿ ಸಾಕಷ್ಟು ಒತ್ತು ನೀಡಿದ್ದರು. ಅದೇ ಕಾರ್ಯವನ್ನು ಅವರು ಪ್ರಧಾನಿಯಾದ ಮೇಲೂ ಮುಂದುವರೆಸಿದರು. ಅವರ ಸೇವೆ ಮತ್ತು ಶ್ರಮ ನಿಜಕ್ಕೂ ಗಮನಾರ್ಹವಾದದ್ದು. ಪ್ರಧಾನಿ ಕಚೇರಿಯ ಗೌರವವನ್ನು ಹೆಚ್ಚಿಸಿದರು. ವಾಜಪೇಯಿ ಅವರು ತಮ್ಮ ಕಾರ್ಯದಿಂದಲೇ ಸದಾ ನಮ್ಮ ನೆನಪಿನಲ್ಲಿ ಉಳಿಯುತ್ತಾರೆ. ಅವರ ಸಾವಿನ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಾರತದ ಪ್ರಜೆಗಳಿಗೆ ದೇವರು ಕರುಣಿಸಲಿ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.
Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

4 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

4 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

5 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

5 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

6 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

6 hours ago