Featured

ವಾಜಪೇಯಿ ಆರೋಗ್ಯ ವಿಚಾರದಲ್ಲಿ ಗೊಂದಲದ ಹೇಳಿಕೆ ನೀಡಿದ ರಾಜನಾಥ್ ಸಿಂಗ್

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಕ್ಷೀಣಿಸುತ್ತಿದ್ದು, ಈ ಸಂದರ್ಭದಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಹೇಳಿಕೆ ಸಾರ್ವಜನಿಕ ವಲಯದಲ್ಲಿ ಗೊಂದಲವನ್ನು ಉಂಟು ಮಾಡಿದೆ.

ವಾಜಪೇಯಿ ಅವರ ಆರೋಗ್ಯ ವಿಚಾರಿಸಿ ಮಾಧ್ಯಮಗಳ ಜೊತೆ ಮಾತನಾಡುತ್ತಾ, ಇಂದು ಬಿಜೆಪಿ ದೇಶದ ಸ್ಥಾಪಿಸುವರಲ್ಲಿ ಅಟಲ್ ಜೀ ಮೊದಲ ಸ್ಥಾನದಲ್ಲಿ ಬರುತ್ತಾರೆ. ಬಿಜೆಪಿ ಆಧಾರ ಸ್ತಂಭವಾಗಿದ್ದಂತಹ ಹಿರಿಯ ನಾಯಕ, ಮಾಜಿ ಪ್ರಧಾನಿಗಳು ಇಂದು ನಮ್ಮ ಮಧ್ಯೆಯಿಲ್ಲ. ಅವರಿಗೆ ಶ್ರದ್ಧಾಂಜಲಿ ಕೋರುತ್ತೇನೆ ಅಂತಾ ಹೇಳಿದರು. ಆದ್ರೆ ಆಸ್ಪತ್ರೆಯಿಂದ ಯಾವುದೇ ಅಧಿಕೃತ ಮಾಹಿತಿಗಳು ಬಹಿರಂಗಗೊಂಡಿಲ್ಲ.

ವಾಜಪೇಯಿ ಅವರ ಆರೋಗ್ಯದಲ್ಲಿ ನಿನ್ನೆ ಮತ್ತೆ ಏರುಪೇರಾಗಿದ್ದು, ಸ್ಥಿತಿ ಗಂಭೀರವಾಗಿರುವುದಾಗಿ ಏಮ್ಸ್ ಆಸ್ಪತ್ರೆ ಪ್ರಕಟಿಸಿತ್ತು. ಆದ್ರೆ ಇಂದು ಮತ್ತೆ ಅವರ ಸ್ಥಿತಿ ಗಂಭೀರವಾಗಿದ್ದು, ಗಣ್ಯಾತೀಗಣ್ಯರ ದಂಡೇ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿತ್ತು. ಮಾಜಿ ಪ್ರಧಾನಿಯ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಇಂದು ಮಧ್ಯಪ್ರದೇಶದಲ್ಲಿ ನಡೆಯುವ ಬಿಜೆಪಿಯ ಎಲ್ಲಾ ಚುನಾವಣಾ ಯಾತ್ರೆಗಳನ್ನು ರದ್ದು ಮಾಡಲಾಗಿತ್ತು. ಅಲ್ಲದೇ ಇಂದಿನ ಎಲ್ಲಾ ಬಿಜೆಪಿ ಕಾರ್ಯಕ್ರಮಗಳನ್ನು ರದ್ದು ಮಾಡುವಂತೆ ಪ್ರಧಾನಿ ಕಾರ್ಯಾಲಯ ಕೂಡ ಪ್ರಕಟಣೆ ಹೊರಡಿಸಿತ್ತು.

ಗ್ವಾಲಿಯರ್ ಮತ್ತು ಆಗ್ರಾದಲ್ಲಿರುವ ವಾಜಪೇಯಿ ಸಂಬಂಧಿಕರು ಶೀಘ್ರವೇ ಆಸ್ಪತ್ರೆಗೆ ಬರುವಂತೆ ಏಮ್ಸ್ ಸೂಚನೆ ನೀಡಿತ್ತು. ಈಗಾಗಲೇ ಆಸ್ಪತ್ರೆಗೆ ಆರೋಗ್ಯ ಸಚಿವ ಜೆ.ಪಿ ನಡ್ವಾ, ಎಲ್ ಕೆ ಅಡ್ವಾಣಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಅಮಿತ್ ಶಾ, ರಾಹುಲ್ ಗಾಂಧಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಆಸ್ಪತ್ರೆಯಲ್ಲಿ ವಾಜಪೇಯಿ ಕುಟುಂಬಸ್ಥರು ಈಗಾಗಲೇ ಜಮಾಯಿಸಿದ್ದು, ಕಣ್ಣೀರು ಹಾಕುತ್ತಿದ್ದಾರೆ.

ಆಸ್ಪತ್ರೆ ಬಳಿ ಹೆಚ್ಚುವರಿ ಭದ್ರತಾ ಸಿಬ್ಬಂದಿ ನೇಮಕ ಮಾಡಲಾಗಿದ್ದು, ಬಿಜೆಪಿ ನಾಯಕರ ದಂಡೇ ಆಸ್ಪತ್ರೆಗೆ ಹರಿದುಬರುತ್ತಿದೆ. ಮಧುಮೇಹ, ಮೂತ್ರದ ಸೋಂಕು ಸೇರಿ ವಿವಿಧ ರೀತಿಯ ಅನಾರೋಗ್ಯದ ಕಾರಣ ಕಳೆದ ಜೂನ್ 11ರಂದು ವಾಜಪೇಯಿ ಏಮ್ಸ್ ಗೆ ದಾಖಲಾಗಿದ್ದರು. ವಾಜಪೇಯಿ ಆರೋಗ್ಯ ಇನ್ನಷ್ಟು ಕ್ಷೀಣಿಸಿದ್ದು, ಆಮ್ಲಜನಕದ ಬೆಂಬಲ ನೀಡಲಾಗುತ್ತಿದೆ ಎಂದು ಬುಧವಾರ ಏಮ್ಸ್ ಆಸ್ಪತ್ರೆ ತಿಳಿಸಿತ್ತು.

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

7 minutes ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

14 minutes ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

2 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

3 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

4 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

4 hours ago