Featured

ವಾಟ್ಸಪ್, ಫೇಸ್ ಬುಕ್, ಇನ್ ಸ್ಟಾ ದಲ್ಲಿ ಯಾವುದೇ ಪಕ್ಷದ ಪರವಾಗಿ ಚುನಾವಣಾ ಪ್ರಚಾರ ಮಾಡುವಂತಿಲ್ಲ- Vishwanews24

ನವದೆಹಲಿ,: ಲೋಕಸಭೆ ಚುನಾವಣೆಗೆ ದಿನಾಂಕ ನಿಗಧಿಯಾಗಿದೆ. ಈ ಬೆನ್ನಲ್ಲೇ ಎಲ್ಲಾ ರೀತಿಯ ಮುಂಜಾಗ್ರತ ಕ್ರಮಗಳನ್ನು ಆಯೋಗ ವಹಿಸಿಕೊಂಡಿದೆ. ತಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಕೂಡ ಜಾರಿಗೊಂಡಿದೆ. ಇದರ ನಡುವೆಯೇ, ಸಾಮಾಜಿಕ ಜಾಲ ತಾಣಗಳ ಮೇಲೆ ಆಯೋಗ ನಿಗಾ ಇರಿಸಿದೆ.

ಪ್ರಸ್ತುತ ದಿನಗಳಲ್ಲಿ ಅತ್ಯಧಿಕ ಬಳಕೆಯಲ್ಲಿರುವ ಹಾಗೂ ಅತೀ ವೇಗವಾಗಿ ಸುದ್ದಿಗಳು ಪ್ರಚಾರಗೊಳ್ಳುವ ಸೋಷಿಯಲ್ ಮೀಡಿಯಾಗಳ ಮೇಲೆ ನಿಗಾ ಇರಿಸಲಾಗಿದೆ. ಸೋಷಿಯಲ್ ಮೀಡಿಯಾಗಳನ್ನು ಪ್ರಚಾರಕ್ಕೆ ಬಳಸಿ, ಅಪಪ್ರಚಾರ ನಡೆಸದಂತೆ ಎಚ್ಚರಿಕಾ ಕ್ರಮ ವಹಿಸಿಕೊಂಡಿದೆ.

ಚುನಾವಣೆ ಹಿನ್ನೆಲೆ ಇನ್ನು ಸೋಷಿಯಲ್ ಮೀಡಿಯಾಗಳಲ್ಲಿ ಮನಬಂದತೆ ಟ್ವಿಟ್ ಮಾಡುವಂತಿಲ್ಲ. ವಾಟ್ಸಪ್ ಗಳಲ್ಲಿ ಚುನಾವಣಾ ಪ್ರಚಾರ ಮಾಡಿದ್ದಲ್ಲಿ ವಾಟ್ಸಪ್ ಅಡ್ಮಿನ್ ಗಳ ವಿರುದ್ಧ ಕ್ರಮಕೈಗೊಳ್ಳಲು ನಿರ್ಧರಿಸಲಾಗಿದೆ. ಫೇಸ್ ಬುಕ್ ಗಳಲ್ಲಿ ಚುನಾವಣಾ ಪ್ರಚಾರ ಮಾಡಿದ್ದಲ್ಲಿ ಅವರ ವಿರುದ್ಧ ಎಫ್ ಐಆರ್ ದಾಖಲಿಸಲು ತೀರ್ಮಾನಿಸಲಾಗಿದೆ. ಇನ್ನು ಇನ್ ಸ್ಟಾದಲ್ಲಿ ಅಭ್ಯರ್ಥಿ ಫೋಟೊ ಹಾಕುವಂತಿಲ್ಲ. ಈ ಎಲ್ಲಾ ನಿರ್ದೇಶನಗಳನ್ನು ಆಯೋಗ ನೀಡಿದ್ದು, ವಾಟ್ಸಪ್ ಫೇಸ್ ಬುಕ್ ಕಂಪನೆಗಳ ಮುಖ್ಯಸ್ಥರ ಜತೆ ಮಾತುಕತೆ ಕೂಡ ನಡೆಸಿದೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರದಿಂದಿರಲು ಸೂಚನೆ ನೀಡಿದೆ.

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

19 hours ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

19 hours ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

20 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

22 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

22 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

23 hours ago