ನವದೆಹಲಿ,: ಲೋಕಸಭೆ ಚುನಾವಣೆಗೆ ದಿನಾಂಕ ನಿಗಧಿಯಾಗಿದೆ. ಈ ಬೆನ್ನಲ್ಲೇ ಎಲ್ಲಾ ರೀತಿಯ ಮುಂಜಾಗ್ರತ ಕ್ರಮಗಳನ್ನು ಆಯೋಗ ವಹಿಸಿಕೊಂಡಿದೆ. ತಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಕೂಡ ಜಾರಿಗೊಂಡಿದೆ. ಇದರ ನಡುವೆಯೇ, ಸಾಮಾಜಿಕ ಜಾಲ ತಾಣಗಳ ಮೇಲೆ ಆಯೋಗ ನಿಗಾ ಇರಿಸಿದೆ.
ಪ್ರಸ್ತುತ ದಿನಗಳಲ್ಲಿ ಅತ್ಯಧಿಕ ಬಳಕೆಯಲ್ಲಿರುವ ಹಾಗೂ ಅತೀ ವೇಗವಾಗಿ ಸುದ್ದಿಗಳು ಪ್ರಚಾರಗೊಳ್ಳುವ ಸೋಷಿಯಲ್ ಮೀಡಿಯಾಗಳ ಮೇಲೆ ನಿಗಾ ಇರಿಸಲಾಗಿದೆ. ಸೋಷಿಯಲ್ ಮೀಡಿಯಾಗಳನ್ನು ಪ್ರಚಾರಕ್ಕೆ ಬಳಸಿ, ಅಪಪ್ರಚಾರ ನಡೆಸದಂತೆ ಎಚ್ಚರಿಕಾ ಕ್ರಮ ವಹಿಸಿಕೊಂಡಿದೆ.
ಚುನಾವಣೆ ಹಿನ್ನೆಲೆ ಇನ್ನು ಸೋಷಿಯಲ್ ಮೀಡಿಯಾಗಳಲ್ಲಿ ಮನಬಂದತೆ ಟ್ವಿಟ್ ಮಾಡುವಂತಿಲ್ಲ. ವಾಟ್ಸಪ್ ಗಳಲ್ಲಿ ಚುನಾವಣಾ ಪ್ರಚಾರ ಮಾಡಿದ್ದಲ್ಲಿ ವಾಟ್ಸಪ್ ಅಡ್ಮಿನ್ ಗಳ ವಿರುದ್ಧ ಕ್ರಮಕೈಗೊಳ್ಳಲು ನಿರ್ಧರಿಸಲಾಗಿದೆ. ಫೇಸ್ ಬುಕ್ ಗಳಲ್ಲಿ ಚುನಾವಣಾ ಪ್ರಚಾರ ಮಾಡಿದ್ದಲ್ಲಿ ಅವರ ವಿರುದ್ಧ ಎಫ್ ಐಆರ್ ದಾಖಲಿಸಲು ತೀರ್ಮಾನಿಸಲಾಗಿದೆ. ಇನ್ನು ಇನ್ ಸ್ಟಾದಲ್ಲಿ ಅಭ್ಯರ್ಥಿ ಫೋಟೊ ಹಾಕುವಂತಿಲ್ಲ. ಈ ಎಲ್ಲಾ ನಿರ್ದೇಶನಗಳನ್ನು ಆಯೋಗ ನೀಡಿದ್ದು, ವಾಟ್ಸಪ್ ಫೇಸ್ ಬುಕ್ ಕಂಪನೆಗಳ ಮುಖ್ಯಸ್ಥರ ಜತೆ ಮಾತುಕತೆ ಕೂಡ ನಡೆಸಿದೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರದಿಂದಿರಲು ಸೂಚನೆ ನೀಡಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…