ನವದೆಹಲಿ,: ಲೋಕಸಭೆ ಚುನಾವಣೆಗೆ ದಿನಾಂಕ ನಿಗಧಿಯಾಗಿದೆ. ಈ ಬೆನ್ನಲ್ಲೇ ಎಲ್ಲಾ ರೀತಿಯ ಮುಂಜಾಗ್ರತ ಕ್ರಮಗಳನ್ನು ಆಯೋಗ ವಹಿಸಿಕೊಂಡಿದೆ. ತಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಕೂಡ ಜಾರಿಗೊಂಡಿದೆ. ಇದರ ನಡುವೆಯೇ, ಸಾಮಾಜಿಕ ಜಾಲ ತಾಣಗಳ ಮೇಲೆ ಆಯೋಗ ನಿಗಾ ಇರಿಸಿದೆ.
ಪ್ರಸ್ತುತ ದಿನಗಳಲ್ಲಿ ಅತ್ಯಧಿಕ ಬಳಕೆಯಲ್ಲಿರುವ ಹಾಗೂ ಅತೀ ವೇಗವಾಗಿ ಸುದ್ದಿಗಳು ಪ್ರಚಾರಗೊಳ್ಳುವ ಸೋಷಿಯಲ್ ಮೀಡಿಯಾಗಳ ಮೇಲೆ ನಿಗಾ ಇರಿಸಲಾಗಿದೆ. ಸೋಷಿಯಲ್ ಮೀಡಿಯಾಗಳನ್ನು ಪ್ರಚಾರಕ್ಕೆ ಬಳಸಿ, ಅಪಪ್ರಚಾರ ನಡೆಸದಂತೆ ಎಚ್ಚರಿಕಾ ಕ್ರಮ ವಹಿಸಿಕೊಂಡಿದೆ.
ಚುನಾವಣೆ ಹಿನ್ನೆಲೆ ಇನ್ನು ಸೋಷಿಯಲ್ ಮೀಡಿಯಾಗಳಲ್ಲಿ ಮನಬಂದತೆ ಟ್ವಿಟ್ ಮಾಡುವಂತಿಲ್ಲ. ವಾಟ್ಸಪ್ ಗಳಲ್ಲಿ ಚುನಾವಣಾ ಪ್ರಚಾರ ಮಾಡಿದ್ದಲ್ಲಿ ವಾಟ್ಸಪ್ ಅಡ್ಮಿನ್ ಗಳ ವಿರುದ್ಧ ಕ್ರಮಕೈಗೊಳ್ಳಲು ನಿರ್ಧರಿಸಲಾಗಿದೆ. ಫೇಸ್ ಬುಕ್ ಗಳಲ್ಲಿ ಚುನಾವಣಾ ಪ್ರಚಾರ ಮಾಡಿದ್ದಲ್ಲಿ ಅವರ ವಿರುದ್ಧ ಎಫ್ ಐಆರ್ ದಾಖಲಿಸಲು ತೀರ್ಮಾನಿಸಲಾಗಿದೆ. ಇನ್ನು ಇನ್ ಸ್ಟಾದಲ್ಲಿ ಅಭ್ಯರ್ಥಿ ಫೋಟೊ ಹಾಕುವಂತಿಲ್ಲ. ಈ ಎಲ್ಲಾ ನಿರ್ದೇಶನಗಳನ್ನು ಆಯೋಗ ನೀಡಿದ್ದು, ವಾಟ್ಸಪ್ ಫೇಸ್ ಬುಕ್ ಕಂಪನೆಗಳ ಮುಖ್ಯಸ್ಥರ ಜತೆ ಮಾತುಕತೆ ಕೂಡ ನಡೆಸಿದೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರದಿಂದಿರಲು ಸೂಚನೆ ನೀಡಿದೆ.
ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…
ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ನೀರಿನಲ್ಲಿ ಮುಳುಗಿ ಸಾವು ಚಿಕ್ಕಬಳ್ಳಾಪುರ: ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ…
ಮಲ್ಪೆ ಬಂದರಿನಲ್ಲಿ ಹೊಡೆದಾಟ: 2 ಪ್ರತ್ಯೇಕ ಪ್ರಕರಣ ದಾಖಲು ಉಡುಪಿ: ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ಮೀನುಗಾರರ ಎರಡು ತಂಡಗಳ ನಡುವೆ…
ಇಂದಿನಿಂದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ನವದೆಹಲಿ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ…
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…