ಕಾಪು: ಈ ಬಾರಿಯ ಪುರಸಭಾ ಚುನಾವಣೆಯಲ್ಲಿ ಬೀಡುಬದಿ ವಾರ್ಡಿನಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದ ಮುನ್ನಾ ಯಾನೆ ಶಿವಾನಂದಾ ಪೂಜಾರಿ ಸೋಲು ಕಂಡಿದ್ದರು. ತದನಂತರದ ದಿನದಲ್ಲಿ ಕಾಪು ಶಾಸಕ ಲಾಲಾಜಿ ಮೆಂಡನ್ ಜತೆಗೆ ನಿಂತಿದ್ದ ಫೋಟೊ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ವೈರಲ್ ಆದ ಫೋಟೊದಲ್ಲಿ” ಬಿಲ್ಲವ ಮುಖಂಡ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಸೋಲಿಸಲು ಮುನ್ನಾ ಹಾಗೂ ಶಾಸಕರ ನಡುವೆ ಒಳ ಒಪ್ಪಂದವಾಗಿತ್ತು , ಫಲಿತಾಂಶದ ದಿನ ಇಬ್ಬರೂ ಕೂಡ ಒಂದೇ ಫೋಟೊದಲ್ಲಿ ಕಾಣಿಸಿಕೊಂಡಿದ್ದರು ಇದರಿಂದ ಶಾಸಕರ ಬಣ್ಣಬಯಲಾಗಿದೆಂದು ಕಿಡಿಗೇಡಿಗಳು ಸುದ್ದಿ ಹರಡಿಸಿದ್ದರು.
ಈ ಬಗ್ಗೆ ವಿಶ್ವನ್ಯೂಸ್24 ಗೆ ಪ್ರತಿಕ್ರೀಯೆ ನೀಡಿದ ಮುನ್ನಾ ಯಾನೆ ಶಿವಾನಂದಾ ಪೂಜಾರಿ” ನಾನು ಕೂಡ 20 ವರ್ಷಗಳಿಂದ ಬಿಜೆಪಿ ಕಾರ್ಯಕರ್ತ ಹಾಗಾಗಿ ಸಾಮಾನ್ಯವಾಗಿ ಬೀಡುಬದಿ ವಾರ್ಡಿಗೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಬಿಜೆಪಿಯಿಂದ ಟಿಕೆಟ್ ಬಯಸಿದ್ದೆ ಟಿಕೆಟ್ ನೀಡಿಲ್ಲ ಎಂಬ ಕಾರಣಕ್ಕಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದೆ ಮಾಡಿದ್ದೇನೆಯೆ ಹೊರತು ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಅವರನ್ನು ಸೋಲಿಸಲು ಖಂಡಿತವಾಗಿಯೂ ಅಲ್ಲ, ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದಿಸಲು ನಾಮಪತ್ರ ಸಲ್ಲಿಸಿದ ಸಮಯದಲ್ಲೂ ಕೂಡ ನಾಮಪತ್ರ ಹಿಂಪಡೆಯುವ0ತೆ ಶಾಸಕರು
ಮನವಿ ಮಾಡಿದ್ದರು ಆದರೇ ಕಣಕ್ಕಿಳಿದ ನಂತರ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಅವರ ಮನವಿಯನ್ನು ಪುರಸ್ಕರಿಸಲಿಲ್ಲ, ಹಾಗಾದರೇ ಶಾಸಕರಿಗೂ ನನಗೂ ಒಳೊಪ್ಪಂದ ಆಗಲು ಹೇಗೆ ಸಾದ್ಯ..? ಇದು ಯಾರೋ ಕೀಡಿಗೇಡಿಗಳ ಕೃತ್ಯವೇ ಹೊರತು ಒಳಒಪ್ಪಂದ ಅಲ್ಲ, ಗೌರವಾನ್ವಿತ ಶಾಸಕರ ಮೇಲೆ ಗೌರವವಿದೆ ಎಂದರು. ಮತ್ತು ಇಲ್ಲಿ ಯಾವುದೇ ಕಾರಣಕ್ಕೂ ಜಾತಿ ರಾಜಕಾರಣ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಇದು ಮುಂದುವರಿದರೆ ಸೈಬರ್ ಕ್ರೈಂ ಗೆ ದೂರು ಕೊಡಲು ನಿರ್ಧರಿಸಿದ್ದೇನೆ ಎಂದು ಕಟುವಾಗಿ ತಿಳಿಸಿದರು.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…