Featured

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ವಿರುದ್ಧ ಐವನ್ ಡಿಸೋಜಾ ತೀವ್ರ ಖಂಡನೆ – vishwanews24

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ: ಬಿಜೆಪಿ ವಿರುದ್ಧ ಐವನ್ ಡಿಸೋಜಾ ತೀವ್ರ ಖಂಡನೆ

ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ₹991ಕ್ಕೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ ತೀವ್ರವಾಗಿ ಖಂಡಿಸಿದ್ದಾರೆ.

ಚುನಾವಣೆಗಳು ಮುಗಿದ ತಕ್ಷಣ ಗ್ಯಾಸ್ ಸಿಲಿಂಡರ್ ದರ ಏರಿಕೆ ಮಾಡಿರುವುದು ಬಿಜೆಪಿ ಪಕ್ಷದ ನಿಜಸ್ವರೂಪವನ್ನು ಬಯಲಿಗೆಳೆದಿದೆ ಎಂದು ಅವರು ಆರೋಪಿಸಿದರು. ಚುನಾವಣೆ ಸಂದರ್ಭದಲ್ಲಿ ಜನರ ಮತಗಳನ್ನು ಪಡೆಯಲು ಯಾವುದೇ ದರ ಏರಿಕೆ ಮಾಡದೆ, ಇದೀಗ ಮತ ಪಡೆದುಕೊಂಡ ನಂತರ ಜನರ ಮೇಲೆ ಬೆಲೆಭಾರ ಹಾಕಲಾಗುತ್ತಿದೆ ಎಂದು ಟೀಕಿಸಿದರು.

ಇದನ್ನೂ ಓದಿ:

ಇಂದು ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆಯ ದಿನವೇ ಕಾರ್ಮಿಕ ವರ್ಗದ ಮೇಲೆ ಹೊರೆ ಹಾಕುವಂತಹ ನಿರ್ಧಾರ ಕೈಗೊಂಡಿರುವುದು ಅತ್ಯಂತ ಖಂಡನೀಯ. ಈಗಾಗಲೇ ಹೆಚ್ಚಿದ ವೆಚ್ಚದಿಂದ ಅನೇಕ ಹೋಟೆಲ್‌ಗಳು ಹಾಗೂ ಸಣ್ಣ ಉದ್ಯಮಗಳು ಸಂಕಷ್ಟಕ್ಕೆ ಸಿಲುಕಿವೆ. ಇಂತಹ ಸಂದರ್ಭದಲ್ಲಿ ಮತ್ತೆ ಗ್ಯಾಸ್ ಸಿಲಿಂಡರ್ ದರ ಏರಿಕೆ ಮಾಡಿರುವುದು ಜನವಿರೋಧಿ ನೀತಿಯ ಸ್ಪಷ್ಟ ಉದಾಹರಣೆಯಾಗಿದೆ ಎಂದು ಹೇಳಿದರು.

ಬಿಜೆಪಿ ಸರ್ಕಾರದ ನಿಲುವು ಜನಪರವಾಗಿಲ್ಲ. ಮಧ್ಯಮ ವರ್ಗ ಹಾಗೂ ಕೆಳವರ್ಗದ ಜನರ ಹಿತಾಸಕ್ತಿಗೆ ವಿರುದ್ಧವಾಗಿ ಸರ್ಕಾರ ನಿರಂತರವಾಗಿ ನಡೆದುಕೊಳ್ಳುತ್ತಿದೆ. ಜನಸಾಮಾನ್ಯರಿಗೆ ನೆರವಾಗುವ ಯಾವುದೇ ತೀರ್ಮಾನಗಳನ್ನು ಬಿಜೆಪಿ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಇತ್ತೀಚಿನ ಅವಧಿಯಲ್ಲಿ ದೇಶದ ಆರ್ಥಿಕ ಸ್ಥಿತಿ ಹದಗೆಡಲು ಕೇಂದ್ರ ಸರ್ಕಾರದ ತಪ್ಪು ನೀತಿಗಳೇ ಕಾರಣವಾಗಿವೆ. ಮುಂದಿನ ದಿನಗಳಲ್ಲಿ ಗೃಹಬಳಕೆಯ ಗ್ಯಾಸ್, ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನೂ ಏರಿಸುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ:

ಈ ದರ ಏರಿಕೆಯಿಂದ ಆಟೋ ಚಾಲಕರು, ಕಾರ್ಮಿಕರು, ಸಣ್ಣ ವ್ಯಾಪಾರಿಗಳು ಹಾಗೂ ಹೋಟೆಲ್ ಉದ್ಯಮಿಗಳು ತೀವ್ರ ಸಂಕಷ್ಟ ಅನುಭವಿಸಲಿದ್ದಾರೆ. ದಿನನಿತ್ಯದ ಜೀವನ ಸಾಗಿಸುವುದು ಕಷ್ಟಕರವಾಗಲಿದೆ ಎಂದು ಹೇಳಿದರು.

ಮಹಿಳಾ ಮಸೂದೆ ಸೇರಿದಂತೆ ಹಲವು ವಿಚಾರಗಳಲ್ಲಿ ಬಿಜೆಪಿ ಜನರಿಗೆ ಭರವಸೆ ನೀಡಿ ನಂತರ ಅದನ್ನು ಜಾರಿಗೆ ತರುವಲ್ಲಿ ವಿಫಲವಾಗಿದೆ. ಸರ್ಕಾರದ ಕಾರ್ಯಕ್ರಮಗಳು ಜನಪರವಾಗಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಹೇಳಿದರು.

ಈ ಗ್ಯಾಸ್ ದರ ಏರಿಕೆ ಕುರಿತು ಬಿಜೆಪಿ ನಾಯಕರು ಕೂಡಲೇ ಶ್ವೇತಪತ್ರ ಹೊರಡಿಸಿ ಜನರಿಗೆ ಸ್ಪಷ್ಟನೆ ನೀಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಐವಾನ್ ಡಿಸೋಜಾ ಎಚ್ಚರಿಸಿದರು.

ಇದನ್ನೂ ಓದಿ:

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

12 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

13 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

13 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

15 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

15 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

15 hours ago