ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ₹991ಕ್ಕೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ ತೀವ್ರವಾಗಿ ಖಂಡಿಸಿದ್ದಾರೆ.
ಚುನಾವಣೆಗಳು ಮುಗಿದ ತಕ್ಷಣ ಗ್ಯಾಸ್ ಸಿಲಿಂಡರ್ ದರ ಏರಿಕೆ ಮಾಡಿರುವುದು ಬಿಜೆಪಿ ಪಕ್ಷದ ನಿಜಸ್ವರೂಪವನ್ನು ಬಯಲಿಗೆಳೆದಿದೆ ಎಂದು ಅವರು ಆರೋಪಿಸಿದರು. ಚುನಾವಣೆ ಸಂದರ್ಭದಲ್ಲಿ ಜನರ ಮತಗಳನ್ನು ಪಡೆಯಲು ಯಾವುದೇ ದರ ಏರಿಕೆ ಮಾಡದೆ, ಇದೀಗ ಮತ ಪಡೆದುಕೊಂಡ ನಂತರ ಜನರ ಮೇಲೆ ಬೆಲೆಭಾರ ಹಾಕಲಾಗುತ್ತಿದೆ ಎಂದು ಟೀಕಿಸಿದರು.
ಇದನ್ನೂ ಓದಿ:
ಇಂದು ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆಯ ದಿನವೇ ಕಾರ್ಮಿಕ ವರ್ಗದ ಮೇಲೆ ಹೊರೆ ಹಾಕುವಂತಹ ನಿರ್ಧಾರ ಕೈಗೊಂಡಿರುವುದು ಅತ್ಯಂತ ಖಂಡನೀಯ. ಈಗಾಗಲೇ ಹೆಚ್ಚಿದ ವೆಚ್ಚದಿಂದ ಅನೇಕ ಹೋಟೆಲ್ಗಳು ಹಾಗೂ ಸಣ್ಣ ಉದ್ಯಮಗಳು ಸಂಕಷ್ಟಕ್ಕೆ ಸಿಲುಕಿವೆ. ಇಂತಹ ಸಂದರ್ಭದಲ್ಲಿ ಮತ್ತೆ ಗ್ಯಾಸ್ ಸಿಲಿಂಡರ್ ದರ ಏರಿಕೆ ಮಾಡಿರುವುದು ಜನವಿರೋಧಿ ನೀತಿಯ ಸ್ಪಷ್ಟ ಉದಾಹರಣೆಯಾಗಿದೆ ಎಂದು ಹೇಳಿದರು.
ಬಿಜೆಪಿ ಸರ್ಕಾರದ ನಿಲುವು ಜನಪರವಾಗಿಲ್ಲ. ಮಧ್ಯಮ ವರ್ಗ ಹಾಗೂ ಕೆಳವರ್ಗದ ಜನರ ಹಿತಾಸಕ್ತಿಗೆ ವಿರುದ್ಧವಾಗಿ ಸರ್ಕಾರ ನಿರಂತರವಾಗಿ ನಡೆದುಕೊಳ್ಳುತ್ತಿದೆ. ಜನಸಾಮಾನ್ಯರಿಗೆ ನೆರವಾಗುವ ಯಾವುದೇ ತೀರ್ಮಾನಗಳನ್ನು ಬಿಜೆಪಿ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಇತ್ತೀಚಿನ ಅವಧಿಯಲ್ಲಿ ದೇಶದ ಆರ್ಥಿಕ ಸ್ಥಿತಿ ಹದಗೆಡಲು ಕೇಂದ್ರ ಸರ್ಕಾರದ ತಪ್ಪು ನೀತಿಗಳೇ ಕಾರಣವಾಗಿವೆ. ಮುಂದಿನ ದಿನಗಳಲ್ಲಿ ಗೃಹಬಳಕೆಯ ಗ್ಯಾಸ್, ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನೂ ಏರಿಸುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ಇದನ್ನೂ ಓದಿ:
ಈ ದರ ಏರಿಕೆಯಿಂದ ಆಟೋ ಚಾಲಕರು, ಕಾರ್ಮಿಕರು, ಸಣ್ಣ ವ್ಯಾಪಾರಿಗಳು ಹಾಗೂ ಹೋಟೆಲ್ ಉದ್ಯಮಿಗಳು ತೀವ್ರ ಸಂಕಷ್ಟ ಅನುಭವಿಸಲಿದ್ದಾರೆ. ದಿನನಿತ್ಯದ ಜೀವನ ಸಾಗಿಸುವುದು ಕಷ್ಟಕರವಾಗಲಿದೆ ಎಂದು ಹೇಳಿದರು.
ಮಹಿಳಾ ಮಸೂದೆ ಸೇರಿದಂತೆ ಹಲವು ವಿಚಾರಗಳಲ್ಲಿ ಬಿಜೆಪಿ ಜನರಿಗೆ ಭರವಸೆ ನೀಡಿ ನಂತರ ಅದನ್ನು ಜಾರಿಗೆ ತರುವಲ್ಲಿ ವಿಫಲವಾಗಿದೆ. ಸರ್ಕಾರದ ಕಾರ್ಯಕ್ರಮಗಳು ಜನಪರವಾಗಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಹೇಳಿದರು.
ಈ ಗ್ಯಾಸ್ ದರ ಏರಿಕೆ ಕುರಿತು ಬಿಜೆಪಿ ನಾಯಕರು ಕೂಡಲೇ ಶ್ವೇತಪತ್ರ ಹೊರಡಿಸಿ ಜನರಿಗೆ ಸ್ಪಷ್ಟನೆ ನೀಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಐವಾನ್ ಡಿಸೋಜಾ ಎಚ್ಚರಿಸಿದರು.
ಇದನ್ನೂ ಓದಿ:
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…
ಪಿಕಲ್ಬಾಲ್ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್ನಲ್ಲಿ ಪತನ : ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…
ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ…