Featured

ವಾಣಿಜ್ಯ ವಿಮಾನದ ಪೈಲಟ್‌ ಆದ ಬುಡಕಟ್ಟು ಸಮುದಾಯದ ಮೊದಲ ಮಹಿಳೆ ಒಡಿಶಾದ ಅನುಪ್ರಿಯಾ -Vishwanews24

ಒಡಿಶಾ:ವಾಣಿಜ್ಯ ವಿಮಾನದ ಪೈಲಟ್‌ ಆದ ಬುಡಕಟ್ಟು ಸಮುದಾಯದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಒಡಿಶಾದ ಅನುಪ್ರಿಯಾ ಮಧುಮಿತಾ ಲಾಕ್ರಾ ಪಾತ್ರರಾಗಿದ್ದಾರೆ.

ಮಲ್ಕಂಗಿರಿ ನಕ್ಸಲ್​ ಪೀಡಿತ ಪ್ರದೇಶವಾಗಿದ್ದು, ಹಿಂದುಳಿದ ಜಿಲ್ಲೆ ಕೂಡ ಹೌದು. ಅಲ್ಲಿ ಉನ್ನತ ಶಿಕ್ಷಣ ಹಲವರಿಗೆ ಗಗನ ಕುಸುಮವಾಗಿಯೇ ಉಳಿದುಬಿಟ್ಟಿದೆ. ಆದರೆ ಅನುಪ್ರಿಯಾ ಈ ವಿಷಯದಲ್ಲಿ ಸ್ವಲ್ಪ ವಿಭಿನ್ನ. ಆಕೆಗೆ ತನ್ನ ಗುರಿ ತಲುಪಲು ಯಾವ ಸಮಸ್ಯೆಯೂ ಅಡ್ಡಿಯಾಗಲಿಲ್ಲ. ಚಿಕ್ಕವಯಸ್ಸಿನಲ್ಲೇ ಪೈಲಟ್​ ಆಗಬೇಕೆಂಬ ಮಹತ್ವದ ಕನಸು ಹೊತ್ತಿದ್ದ ಬುಡಕಟ್ಟು ಜನಾಂಗದ ಅನುಪ್ರಿಯಾ 7 ವರ್ಷಗಳ ಸತತ ಪರಿಶ್ರಮದ ಬಳಿಕ ತನ್ನ ಗುರಿ ಮುಟ್ಟಿದ್ದಾಳೆ.

ಒಡಿಶಾ ಮುಖ್ಯಮಂತ್ರಿ ನವೀನ್​ ಪಟ್ನಾಯಕ್​ ಅನುಪ್ರಿಯಾ ಅವರ ಸಾಧನೆಯನ್ನು ಶ್ಲಾಘಿಸಿದ್ದಾರೆ. “ಬುಡಕಟ್ಟು ಜನಾಂಗದ ಅನುಪ್ರಿಯಾ ಮಾಡಿರುವ ಸಾಧನೆಯನ್ನು ಕೇಳಿ ತುಂಬಾ ಸಂತೋಷವಾಗುತ್ತಿದೆ. ಆಕೆಯ ಯಶಸ್ಸು, ಸಾಧನೆ ಹಲವರಿಗೆ ಮಾರ್ಗದರ್ಶನವಾಗಲಿದೆ. ಅನುಪ್ರಿಯಾಳ ಕಠಿಣ ಶ್ರಮ ಮತ್ತು ಸಮರ್ಪಣಾ ಮನೋಭಾವದಿಂದ ಗುರಿ ಮುಟ್ಟಲು ಸಾಧ್ಯವಾಗಿದೆ,” ಎಂದು ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪೈಲಟ್‌ ತರಬೇತಿಗೆ ಹಣ ಹೊಂದಿಸುವುದು ಕಷ್ಟವಾದರೂ, ಸಾಲ ಮಾಡಿ, ಸಂಬಂಧಿಕರ ಬಳಿ ಸಹಾಯ ಪಡೆದು ಮಗಳಿಗೆ ತರಬೇತಿ ಕೊಡಿಸಿದೆ. ಆಕೆ ಬಯಸಿದ ಕ್ಷೇತ್ರದಲ್ಲಿಯೇ ಶಿಕ್ಷಣ ಕೊಡಿಸಬೇಕು ಎನ್ನುವುದಷ್ಟೇ ನನ್ನ ಮನಸ್ಸಿನಲ್ಲಿತ್ತು. ಬಡತನವಿದ್ದರೂ ಮಗಳು ದೊಡ್ಡ ಕನಸು ಕಾಣುವುದಕ್ಕೆ ನಾವು ಎಂದೂ ಅಡ್ಡಿ ಮಾಡಲಿಲ್ಲ. ಆಕೆ ಏನು ಕನಸು ಕಂಡಿದ್ದಳೊ ಅದನ್ನೇ ಆಗಿದ್ದಾಳೆ ಎನ್ನುವ ಖುಷಿ ನಮಗಿದೆ. ಎಲ್ಲಾ ಹೆಣ್ಣುಮಕ್ಕಳಿಗೂ ನನ್ನ ಮಗಳು ಆದರ್ಶವಾಗಬೇಕು ಎನ್ನುವುದೇ ನನ್ನ ಆಸೆ. ಎಲ್ಲಾ ಪೋಷಕರು ತಮ್ಮ ಹೆಣ್ಣುಮಕ್ಕಳಿಗೆ ಒತ್ತಾಸೆಯಾಗಿ ನಿಲ್ಲಬೇಕು ಎಂದೇ ನಾನು ಕೋರುತ್ತೇನೆ’ ಎಂದು ಜಿಮ್ಜಾ ಅಭಿಪ್ರಾಯ ವ್ಯಕ್ತಪಡಿಸಿದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

7 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

7 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

8 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

9 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

9 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

9 hours ago