Featured

ವಾಣಿಜ್ಯ ಸಿಲಿಂಡರ್ ಸಮಸ್ಯೆ 1 ವಾರದಲ್ಲಿ ಬಗೆಹರಿಯಲಿದೆ  : ಕೆ.ಎಚ್.ಮುನಿಯಪ್ಪ – vishwanews24

ವಾಣಿಜ್ಯ ಸಿಲಿಂಡರ್ ಸಮಸ್ಯೆ 1 ವಾರದಲ್ಲಿ ಬಗೆಹರಿಯಲಿದೆ..

ಮನೆಗೊಂದು ಸಿಲಿಂಡರ್ ನೀಡಲು ಯಾವುದೇ ಅಡ್ಡಿಯಿಲ್ಲ , ಹೆಚ್ಚಿನ ಸಿಲಿಂಡರ್ ದಾಸ್ತಾನು ಬೇಡ..

ಕಾನೂನು ಬದ್ಧವಾಗಿ ಸಾರ್ವಜನಿಕರಿಗೆ ಸಿಲಿಂಡರ್ ನೀಡುವ ಕೆಲಸವನ್ನು ಸರ್ಕಾರ ಮಾಡಲಿದೆ..: ಕೆ.ಎಚ್.ಮುನಿಯಪ್ಪ

ವಿಧಾನ ಪರಿಷತ್: ರಾಜ್ಯದ ಸ್ಥಳೀಯ ಮಟ್ಟದಲ್ಲಿ ಗೃಹಬಳಕೆ (ಎಲ್‌ಪಿಜಿ) ಅನಿಲದ ಕೊರತೆಯಿಲ್ಲ. ಆದರೆ, ವಾಣಿಜ್ಯ ಬಳಕೆ ಕ್ಷೇತ್ರದಲ್ಲಿ ಕಂಡುಬಂದಿರುವ ಸಿಲಿಂಡರ್ ಸಮಸ್ಯೆ 1 ವಾರದಲ್ಲಿ ಬಗೆಹರಿಯಲಿದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ವಿಶ್ವಾಸ ವ್ಯಕ್ತಪಡಿಸಿದರು.\

ಅಡುಗೆ ಅನಿಲ ಅಭಾವ ಕುರಿತ ಚರ್ಚೆ ನಡೆದ ಬಳಿಕ ಉತ್ತರಿಸಿದ ಅವರು, ಈಗಾಗಲೇ ಸಿಲಿಂಡರ್ ಪೂರೈಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಮಧ್ಯೆ ಹೋಟೆಲ್‌ಗಳಿಗೂ ವಾಣಿಜ್ಯ ಸಿಲಿಂಡರ್ ಪೂರೈಕೆ ಮಾಡುವ ಕುರಿತಂತೆ ಶುಕ್ರವಾರ ತೈಲ ಕಂಪನಿಗಳ ಜತೆ ಸಭೆ ನಡೆಸುತ್ತೇನೆ. ಯಾವ ರೀತಿಯಲ್ಲಿ ಈ ಸಮಸ್ಯೆ ಪರಿಹಾರ ಕಂಡುಕೊಳ್ಳಬಹುದು ಎಂಬ ಬಗ್ಗೆ ಚರ್ಚೆ ನಡೆಸಿ, ಆ ನಂತರ ಹೋಟೆಲ್ ಉದ್ಯಮದರ ಜತೆಗೂ ಸಮಾಲೋಚನೆ ನಡೆಸುತ್ತೇನೆ. ಬಳಿಕ ಈ ಬಗ್ಗೆ ಸದನಕ್ಕೆ ಮಾಹಿತಿ ನೀಡುವುದಾಗಿ ಹೇಳಿದರು.

ಇದನ್ನೂ ಓದಿ:👇

ಯುದ್ಧದಿಂದಾಗಿ ಈ ಸ್ಥಿತಿ ನಿರ್ಮಾಣವಾಗಿದೆ. ನಾನು ಕೇಂದ್ರ ಸಚಿವನಾಗಿ ಕೆಲಸ ಮಾಡಿದ್ದೇನೆ. ನನಗಿರುವ ಅನುಭವದಂತೆ ಶೇ.30ರಷ್ಟು ಅನಿಲ ಭಾರತದಲ್ಲಿ ಉತ್ಪತ್ತಿಯಾಗುತ್ತಿದೆ. ಉಳಿದೆ ಶೇ.70ರಷ್ಟು ಹೊರದೇಶಗಳ ಮೇಲೆ ಅವಲಂಬಿತರಾಗಿದ್ದೇವೆ. ಸ್ಥಳೀಯ ಮಟ್ಟದಲ್ಲಿ ಬೇಕಾಗುವ ಎಲ್‌ಪಿಜಿ ಗ್ಯಾಸ್ ಭಾರತದಲ್ಲೇ ಉತ್ಪಾದನೆ ಆಗುತ್ತದೆ. ಹೀಗಾಗಿ, ಅಡುಗೆ ಅನಿಲ ಕೊರತೆ ಉಂಟಾಗುವುದಿಲ್ಲ ಎಂದು ಭರವಸೆ ನೀಡಿದರು.

ಈಗಾಗಲೇ ಇರಾನ್ ದೇಶ ಹರ್ಮಜ್ ಮಾರ್ಗದ ಮೂಲಕ ಭಾರತಕ್ಕೆ ಅನಿಲ ಪೂರೈಸಲು ಅನುಮತಿ ನೀಡಿದೆ. 2 ಹಡಗುಗಳು ಭಾರತದತ್ತ ಪಯಣಿಸಿ ಮುಂಬೈ ಬಂದು ಸೇರಲಿವೆ. ಹೀಗಾಗಿ ಅನಿಲ ಸಿಲಿಂಡರ್ ಪೂರೈಕೆ ಬಗ್ಗೆ ಆತಂಕ ಬೇಡ. 10 ದಿನಗಳಿಗೆ ಬೇಕಾಗುವ ದಾಸ್ತಾನು ನಮ್ಮಲ್ಲಿದೆ. ಮನೆಗೊಂದು ಸಿಲಿಂಡರ್ ನೀಡಲು ಯಾವುದೇ ಅಡ್ಡಿಯಿಲ್ಲ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಿಲಿಂಡರ್ ದಾಸ್ತಾನು ಮಾಡಲು ಮುಂದಾಗಬಾರದು ಎಂದು
ಹೇಳಿದರು.

ಇದನ್ನೂ ಓದಿ:👇

ಆರೋಗ್ಯ ಮತ್ತು ಶಾಲೆಗಳಿಗೆ ಸಿಲಿಂಡರ್ ನೀಡುವುದಕ್ಕೆ ಸರ್ಕಾರ ಆದ್ಯತೆ ನೀಡಿದೆ. ಹೋಟೆಲ್ ಮತ್ತು ಕಲ್ಯಾಣ ಮಂಟಪಗಳ ಶುಭ ಕಾರ್ಯಕ್ರಮಕ್ಕೂ ವಾಣಿಜ್ಯ ಅನಿಲ ಪೂರೈಕೆ ಮಾಡುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದರು.

ಆರೋಗ್ಯ ಮತ್ತು ಶಾಲೆಗಳಿಗೆ ಸಿಲಿಂಡರ್ ನೀಡುವುದಕ್ಕೆ ಸರ್ಕಾರ ಆದ್ಯತೆ ನೀಡಿದೆ. ಯಾವುದೇ ಕೊರತೆಯಾಗದಂತೆ ಆರೋಗ್ಯ ಕ್ಷೇತ್ರಕ್ಕೆ ಅನಿಲ ಪೂರೈಕೆ ಮಾಡಲಾಗುವುದು. ಹೋಟೆಲ್ ಮತ್ತು ಕಲ್ಯಾಣ ಮಂಟಪಗಳ ಶುಭ ಕಾರ್ಯಕ್ರಮಕ್ಕೂ ವಾಣಿಜ್ಯ ಅನಿಲ ಪೂರೈಕೆ ಮಾಡುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು. ಕಾಳಸಂತೆಯಲ್ಲಿ ಸಿಲಿಂಡರ್ ಗಳ ಮಾರಾಟ ಮಾಡಿದರೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು. ಇದಕ್ಕೂ ನಡೆದ ಚರ್ಚೆಯಲ್ಲಿ ಕಾಂಗ್ರೆಸ್ ನ ಐವಾನ್ ಡಿಸೋಜ, ನಾಗರಾಜ್ ಮತ್ತಿತರರು ಈ ಬಿಕ್ಕಟ್ಟಿಗೆ ಕೇಂದ್ರ ಸರ್ಕಾರ ಕಾರಣ ಎಂದು ವಾಗ್ದಾಳಿ ನಡೆಸಿದರು.
ಕೆಲವರು ಆತಂಕಗೊಂಡು ವಿನಾಕಾರಣ ಸಿಲಿಂಡರ್ ಬುಕ್ ಮಾಡಿ ಸಂಗ್ರಹಿಸಲು ಮುಂದಾಗಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಿಲಿಂಡರ್‌ ದಾಸ್ತಾನು ಮಾಡಲು ಮುಂದಾಗಬಾರದು. ಕಾನೂನು ಬದ್ಧವಾಗಿ ಸಾರ್ವಜನಿಕರಿಗೆ ಸಿಲಿಂಡರ್ ನೀಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದರು.

ಇದನ್ನೂ ಓದಿ:👇

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

10 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

11 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

11 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

14 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

14 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

14 hours ago