ಮುಂಬೈ : ಕಾಂತಾರ ಸಿನೆಮಾ ಇದೀಗ ದೇಶದಾದ್ಯಂತ ಸಂಚಲನ ಮೂಡಿಸಿದೆ. ಸಿನೆಮಾ ನೋಡಿದವರು ಮೆಚ್ಚುಗೆ ಮಾತುಗಳನ್ನಾಡುತ್ತಿದ್ದಾರೆ. ದೇಶದ ಬಹುತೇಕ ನಟರು ನಟಿಯರು ಸಿನೆಮಾ ನೋಡಿ ತಮ್ಮ ತಮ್ಮ ಅನಿಸಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಇದೀಗ ಕರಾವಳಿ ಬೆಡಗಿ ಶಿಲ್ಪಾಶೆಟ್ಟಿ ಕಾಂತಾರ ಸಿನೆಮಾ ನೋಡಿ ರಿಷಬ್ ನಟನೆಯನ್ನು ಕೊಂಡಾಡಿದ್ದಾರೆ.
ಮೂಲತಃ ಕರಾವಳಿಯ ಹುಡುಗಿಯಾಗಿರುವ ಶಿಲ್ಪಾ ಶೆಟ್ಟಿ ಕಾಂತಾರ ಚಿತ್ರಕ್ಕೆ ತಮ್ಮದೇ ಆದ ರೀತಿಯಲ್ಲಿ ಬಣ್ಣಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಓ ಮೈ ಗಾಡ್ ಎಂದು ಅಚ್ಚರಿಯ ಮೂಲಕವೇ ಸಿನಿಮಾದ ಬಗ್ಗೆ ಅನಿಸಿಕೆಗಳನ್ನು ಬರೆದಿದ್ದು,
‘ಕಾಂತಾರ ಚಿತ್ರವನ್ನು ಇದೀಗ ಚಿತ್ರಮಂದಿರದಲ್ಲಿ ನೋಡಿದೆ. ನರೇಟಿವ್ ಅದ್ಭುತವಾಗಿದೆ. ಕ್ಲೈಮ್ಯಾಕ್ಸ್ ನೋಡಿ ರೋಮಾಂಚನವಾಯಿತು ಎಂದ ಅವರು ಈ ಚಿತ್ರ ಸಿನಿಮಾ ಪ್ರೇಕ್ಷಕರನ್ನು ಬೇರೆ ಜಗತ್ತಿಗೆ ಕರೆದುಕೊಂಡು ಹೋಗುತ್ತದೆ. ನಾನು ಮೂಲತಃ ಅದೇ ನಾಡಿನವಳು ಆಗಿದ್ದರಿಂದ, ವಾಪಸ್ಸು ನನ್ನ ತಾಯಿ ನೆಲಕ್ಕೆ ನನ್ನನ್ನು ಸಿನಿಮಾ ಕರೆದುಕೊಂಡು ಹೋಯಿತು ಎಂದು ಬರೆದುಕೊಂಡಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…