ಮುಂಬೈ : ಕಾಂತಾರ ಸಿನೆಮಾ ಇದೀಗ ದೇಶದಾದ್ಯಂತ ಸಂಚಲನ ಮೂಡಿಸಿದೆ. ಸಿನೆಮಾ ನೋಡಿದವರು ಮೆಚ್ಚುಗೆ ಮಾತುಗಳನ್ನಾಡುತ್ತಿದ್ದಾರೆ. ದೇಶದ ಬಹುತೇಕ ನಟರು ನಟಿಯರು ಸಿನೆಮಾ ನೋಡಿ ತಮ್ಮ ತಮ್ಮ ಅನಿಸಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಇದೀಗ ಕರಾವಳಿ ಬೆಡಗಿ ಶಿಲ್ಪಾಶೆಟ್ಟಿ ಕಾಂತಾರ ಸಿನೆಮಾ ನೋಡಿ ರಿಷಬ್ ನಟನೆಯನ್ನು ಕೊಂಡಾಡಿದ್ದಾರೆ.
ಮೂಲತಃ ಕರಾವಳಿಯ ಹುಡುಗಿಯಾಗಿರುವ ಶಿಲ್ಪಾ ಶೆಟ್ಟಿ ಕಾಂತಾರ ಚಿತ್ರಕ್ಕೆ ತಮ್ಮದೇ ಆದ ರೀತಿಯಲ್ಲಿ ಬಣ್ಣಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಓ ಮೈ ಗಾಡ್ ಎಂದು ಅಚ್ಚರಿಯ ಮೂಲಕವೇ ಸಿನಿಮಾದ ಬಗ್ಗೆ ಅನಿಸಿಕೆಗಳನ್ನು ಬರೆದಿದ್ದು,
‘ಕಾಂತಾರ ಚಿತ್ರವನ್ನು ಇದೀಗ ಚಿತ್ರಮಂದಿರದಲ್ಲಿ ನೋಡಿದೆ. ನರೇಟಿವ್ ಅದ್ಭುತವಾಗಿದೆ. ಕ್ಲೈಮ್ಯಾಕ್ಸ್ ನೋಡಿ ರೋಮಾಂಚನವಾಯಿತು ಎಂದ ಅವರು ಈ ಚಿತ್ರ ಸಿನಿಮಾ ಪ್ರೇಕ್ಷಕರನ್ನು ಬೇರೆ ಜಗತ್ತಿಗೆ ಕರೆದುಕೊಂಡು ಹೋಗುತ್ತದೆ. ನಾನು ಮೂಲತಃ ಅದೇ ನಾಡಿನವಳು ಆಗಿದ್ದರಿಂದ, ವಾಪಸ್ಸು ನನ್ನ ತಾಯಿ ನೆಲಕ್ಕೆ ನನ್ನನ್ನು ಸಿನಿಮಾ ಕರೆದುಕೊಂಡು ಹೋಯಿತು ಎಂದು ಬರೆದುಕೊಂಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…