ನವದೆಹಲಿ,: ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಮುಖ್ಯಸ್ಥೆ, ನಟಿ ರಮ್ಯಾ, ಇದೀಗಾ ಮತ್ತೊಮ್ಮೆ ಟ್ವೀಟ್ ಮಾಡಿ ಪ್ರಧಾನಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಸರಣಿ ಟ್ವೀಟ್ ಮಾಡಿದ ರಮ್ಯಾ “ನಮ್ಮ ಸೇನಾಪಡೆಯ ಮೇಲೆ ನಮ್ಮೆಲ್ಲರಿಗೂ ನಂಬಿಕೆಯಿದೆ. ಆದರೆ ನಮಗೆ ನಿಮ್ಮ ಮೇಲೆ ನಂಬಿಕೆಯಿಲ್ಲ. ಯಾಕೆಂದರೆ ನಮ್ಮ ಸಶಸ್ತ್ರ ಪಡೆ ಮಾತನಾಡುವಾಗ ವಿಶ್ವಾಸಾರ್ಹ ದಾಖಲೆಯ ಸಹಿತ ಮಾತನಾಡುತ್ತದೆ. ಸ್ವಾತಂತ್ರ್ಯದ ನಂತರ ನಮ್ಮ ಸೈನ್ಯ ಅನೇಕ ಯುದ್ಧಗಳನ್ನು ಹೋರಾಡಿ ಗೆದ್ದಿದ್ದಾರೆ. ಆದರೆ ನೀವು ಮಾತ್ರ ದಾಖಲೆಯಿಲ್ಲದೆ ಸದಾ ಸುಳ್ಳು ಹೇಳುತ್ತೀರಿ” ಎಂದು ಟೀಕಾಪ್ರಹಾರ ನಡೆಸಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ, “2014ರಲ್ಲೂ ಚುನಾವಣೆಯ ಮುಂಚೆ ನೀವು ಪಾಕಿಸ್ತಾನಕ್ಕೆ ಹೋಗಿ ಅಂದಿನ ಪ್ರಧಾನಿ ನವಾಝ್ ಶರೀಫ್ ರನ್ನು ತಬ್ಬಿಕೊಂಡು ಬಿರಿಯಾನಿ ಸವಿದು ಬಂದಿದ್ದೀರಿ. ಆದ್ರೆ ಈಗ ನೀವು ನನ್ನನ್ನು ನಂಬಿ ಎನ್ನುತ್ತೀರಿ. ಇದಕ್ಕೋ ಮುಂಚೆ ನೀವು ನೋಟು ನಿಷೇಧದಿಂದ ಭಯೋತ್ಪಾದನೆ ನಾಶವಾಗುತ್ತದೆ ಎಂದು ಹೇಳಿದ್ದಿರಿ. ಆದರೆ ನಾಶವಾಗುವುದು ಬಿಡಿ ಕಿಂಚಿತ್ತು ಕಡಿಮೆಯೂ ಆಗಿಲ್ಲ. ಇನ್ನು ವಾಯುದಾಳಿಯಿಂದ ಉಗ್ರರು ಸತ್ತಿದ್ದಾರೆ ಎಂಬ ನಿಮ್ಮ ಮಾತನ್ನು ನಾವು ನಂಬಲು ಸಾಧ್ಯವಿಲ್ಲ” ಎಂದು ಕಿಡಿಕಾರಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…