ಬೆಂಗಳೂರು: ದೇಶದ ಮೊದಲ ಮಹಿಳಾ ವೈಮಾನಿಕ ಇಂಜಿನಿಯರ್ ಆಗಿ ಚಂಡಿಗಡದ ಹಿನಾ ಜೈಸ್ವಾಲ್ ಆಯ್ಕೆಯಾಗಿ ದಾಖಲೆ ನಿರ್ಮಿಸಿದ್ದಾರೆ.ಚಂಡಿಗಡದವರಾದ ಹಿನಾ ಜೈಸ್ವಾಲ್, ಇಂದು ಯಲಹಂಕ ಹೊರ ವಲಯದ ವಾಯುಪಡೆ ನಿಲ್ದಾಣದ 112ನೇ ಹೆಲಿಕಾಪ್ಟರ್ ಘಟಕದಲ್ಲಿ ತಮ್ಮ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ದೇಶದ ಪ್ರಥಮ ಮಹಿಳಾ ಇಂಜಿನಿಯರ್ ಆಗಿ ಆಯ್ಕೆಗೊಂಡರು.
ಭಾರತೀಯ ವಾಯು ಸೇನೆಯು ತನ್ನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಮಹಿಳಾ ವೈಮಾನಿಕ ಎಂಜಿನಿಯರ್ ಅನ್ನು ನೇಮಕ ಮಾಡಿಕೊಂಡಿದೆ. ಈ ಮೂಲಕ ಇಲ್ಲಿಯ ವರೆಗೆ ಪುರುಷರಿಗೆ ಮಾತ್ರವೇ ಸೀಮಿತ ಎಂಬಂತಿದ್ದ ಸಂಪ್ರದಾಯವನ್ನು ಫ್ಲೈಟ್ ಲೆಫ್ಟಿನೆಂಟ್ ಹೀನಾ ಜೈಸ್ವಾಲ್ ಅವರು ಮುರಿದಿದ್ದಾರೆ.
2015ರ ಜನವರಿ 5ರಂದು ಭಾರತೀಯ ವಾಯುಪಡೆಯ ಇಂಜಿನಿಯರಿಂಗ್ ವಿಭಾಗದಲ್ಲಿ ಪ್ರತಿಷ್ಠಿತ ಫ್ಲೈಟ್ ಇಂಜಿನಿಯರ್ ತರಬೇತಿಗೆ ಆಯ್ಕೆಯಾಗಿದ್ದ ಹಿನಾ, ಇದಕ್ಕೂ ಮುನ್ನ ವಿಮಾನ ಕ್ಷಿಪಣಿ ಪಡೆಯ ಅಗ್ನಿಶಾಮಕ ದಳ ಮತ್ತು ಬ್ಯಾಟರಿಯ ಕಮಾಂಡರ್ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ.
ವಿಮಾನ ಅಥವಾ ಹೆಲಿಕಾಪ್ಟರ್ಗಳಲ್ಲಿರುವ ಸಿಬ್ಬಂದಿಯಲ್ಲಿ ಫ್ಲೈಟ್ ಎಂಜಿನಿಯರ್ ಕೂಡ ಒಬ್ಬರಾಗಿರುತ್ತಾರೆ. ವಿಮಾನಗಳನ್ನು ನಿರ್ವಹಿಸಲು ಮತ್ತು ಅದರ ಸಂಕೀರ್ಣ ವ್ಯವಸ್ಥೆಯನ್ನು ನಿಭಾಯಿಸಲು ವಿಶೇಷ ಕೌಶಲ ಅಗತ್ಯ. ಇಷ್ಟು ದಿನ ಈ ಹುದ್ದೆ ಪುರುಷರಿಗಷ್ಟೇ ಮೀಸಲು ಎಂಬಂತಾಗಿತ್ತು. ಸದ್ಯ ಫ್ಲೈಟ್ ಎಂಜಿನಿಯರ್ ಆಗಿ ನೇಮಕವಾಗಿರುವ ಹೀನಾ ಸಿಯಾಚಿನ್ನ ಅತಿ ಎತ್ತರದ ಹಿಮ ಶ್ರೇಣಿಗಳಲ್ಲಿ ಮತ್ತು ಅಂಡಮಾನ್ನಂಥ ಸಾಗರ ಪ್ರದೇಶಗಳಲ್ಲಿ ಸವಾಲಿನ ಕಾರ್ಯ ನಿರ್ವಹಿಸಲಿದ್ದಾರೆ.
ಕ
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…