Featured

ವಾಯುಪಡೆಗೆ ದೇಶದ ಮೊದಲ ಮಹಿಳಾ ವೈಮಾನಿಕ ಇಂಜಿನಿಯರಾಗಿ ದಾಖಲೆ ನಿರ್ಮಿಸಿದ ಹಿನಾ ಜೈಸ್ವಾಲ್ – Vishwanews24

ಬೆಂಗಳೂರು: ದೇಶದ ಮೊದಲ ಮಹಿಳಾ ವೈಮಾನಿಕ ಇಂಜಿನಿಯರ್ ಆಗಿ ಚಂಡಿಗಡದ ಹಿನಾ ಜೈಸ್ವಾಲ್ ಆಯ್ಕೆಯಾಗಿ ದಾಖಲೆ ನಿರ್ಮಿಸಿದ್ದಾರೆ.ಚಂಡಿಗಡದವರಾದ ಹಿನಾ ಜೈಸ್ವಾಲ್, ಇಂದು ಯಲಹಂಕ ಹೊರ ವಲಯದ ವಾಯುಪಡೆ ನಿಲ್ದಾಣದ 112ನೇ ಹೆಲಿಕಾಪ್ಟರ್ ಘಟಕದಲ್ಲಿ ತಮ್ಮ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ದೇಶದ ಪ್ರಥಮ ಮಹಿಳಾ ಇಂಜಿನಿಯರ್ ಆಗಿ ಆಯ್ಕೆಗೊಂಡರು.

ಭಾರತೀಯ ವಾಯು ಸೇನೆಯು ತನ್ನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಮಹಿಳಾ ವೈಮಾನಿಕ ಎಂಜಿನಿಯರ್​ ಅನ್ನು ನೇಮಕ ಮಾಡಿಕೊಂಡಿದೆ. ಈ ಮೂಲಕ ಇಲ್ಲಿಯ ವರೆಗೆ ಪುರುಷರಿಗೆ ಮಾತ್ರವೇ ಸೀಮಿತ ಎಂಬಂತಿದ್ದ ಸಂಪ್ರದಾಯವನ್ನು ಫ್ಲೈಟ್​ ಲೆಫ್ಟಿನೆಂಟ್​ ಹೀನಾ ಜೈಸ್ವಾಲ್​ ಅವರು ಮುರಿದಿದ್ದಾರೆ.

2015ರ ಜನವರಿ 5ರಂದು ಭಾರತೀಯ ವಾಯುಪಡೆಯ ಇಂಜಿನಿಯರಿಂಗ್ ವಿಭಾಗದಲ್ಲಿ ಪ್ರತಿಷ್ಠಿತ ಫ್ಲೈಟ್ ಇಂಜಿನಿಯರ್ ತರಬೇತಿಗೆ ಆಯ್ಕೆಯಾಗಿದ್ದ ಹಿನಾ, ಇದಕ್ಕೂ ಮುನ್ನ ವಿಮಾನ ಕ್ಷಿಪಣಿ ಪಡೆಯ ಅಗ್ನಿಶಾಮಕ ದಳ ಮತ್ತು ಬ್ಯಾಟರಿಯ ಕಮಾಂಡರ್ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ.

ವಿಮಾನ ಅಥವಾ ಹೆಲಿಕಾಪ್ಟರ್​ಗಳಲ್ಲಿರುವ ಸಿಬ್ಬಂದಿಯಲ್ಲಿ ಫ್ಲೈಟ್​ ಎಂಜಿನಿಯರ್​ ಕೂಡ ಒಬ್ಬರಾಗಿರುತ್ತಾರೆ. ವಿಮಾನಗಳನ್ನು ನಿರ್ವಹಿಸಲು ಮತ್ತು ಅದರ ಸಂಕೀರ್ಣ ವ್ಯವಸ್ಥೆಯನ್ನು ನಿಭಾಯಿಸಲು ವಿಶೇಷ ಕೌಶಲ ಅಗತ್ಯ. ಇಷ್ಟು ದಿನ ಈ ಹುದ್ದೆ ಪುರುಷರಿಗಷ್ಟೇ ಮೀಸಲು ಎಂಬಂತಾಗಿತ್ತು. ಸದ್ಯ ಫ್ಲೈಟ್​ ಎಂಜಿನಿಯರ್ ಆಗಿ ನೇಮಕವಾಗಿರುವ ಹೀನಾ ಸಿಯಾಚಿನ್​ನ ಅತಿ ಎತ್ತರದ ಹಿಮ ಶ್ರೇಣಿಗಳಲ್ಲಿ ಮತ್ತು ಅಂಡಮಾನ್​ನಂಥ ಸಾಗರ ಪ್ರದೇಶಗಳಲ್ಲಿ ಸವಾಲಿನ ಕಾರ್ಯ ನಿರ್ವಹಿಸಲಿದ್ದಾರೆ.

Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

8 hours ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

9 hours ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

9 hours ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

10 hours ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

11 hours ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

11 hours ago