Featured

ವಾಯುಭಾರ ಕುಸಿತದಿಂದ ತಿರುಪತಿಯಲ್ಲಿ ಪ್ರವಾಹ ಪರಿಸ್ಥಿತಿ ; ಬೆಟ್ಟದಿಂದ ಜಲಪಾತದಂತೆ ಧುಮ್ಮಿಕ್ಕುತ್ತಿದೆ ಮಳೆ ನೀರು – Vishwanews24

ವಾಯುಭಾರ ಕುಸಿತದಿಂದ ತಿರುಪತಿಯಲ್ಲಿ ಪ್ರವಾಹ ಪರಿಸ್ಥಿತಿ ; ಬೆಟ್ಟದಿಂದ ಜಲಪಾತದಂತೆ ಧುಮ್ಮಿಕ್ಕುತ್ತಿದೆ ಮಳೆ ನೀರು – Vishwanews24

ಹೈದರಾಬಾದ್: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಆಂಧ್ರಪ್ರದೇಶದಲ್ಲೂ ಧಾರಾಕಾರ ಮಳೆ ಸುರಿಯುತ್ತಿದ್ದು, ತಿರುಪತಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಆಂಧ್ರಪ್ರದೇಶದ ತಿರುಮಲ ತಿರುಪತಿಯಲ್ಲಿ ಗುರುವಾರ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಟಿಟಿಡಿಯ ಎರಡು ಘಾಟ್ ರಸ್ತೆಗಳ ಮೇಲೆ ಕಲ್ಲುಬಂಡೆಗಳು ಉರುಳಿಬಿದ್ದಿದ್ದು, ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ನಗರದಲ್ಲಿ ಎಲ್ಲಿ ನೋಡಿದರೆ ಅಲ್ಲಿ ನೀರು ನದಿಯಂತೆ ಹರಿಯುತ್ತಿದೆ. ತಿರುಪತಿ ಬೆಟ್ಟದಿಂದ ಜಲಾಪಾತದಂತೆ ಮಳೆ ನೀರು ಉಕ್ಕಿ ಹರಿಯುತ್ತಿದೆ. ಅಲ್ಲದೇ ರಸ್ತೆಯಲ್ಲಿ ನಿಂತಿದ್ದ ಆಟೋಗಳು, ಕಾರು ಇನ್ನಿತರ ವಾಹನಗಳು ತರಗೆಲೆಯಂತೆ ಮಳೆ ನೀರಿನಲ್ಲಿ ಕೊಚ್ಚಿ ಹೋಗುತ್ತಿವೆ. ತಿರುಪತಿಯ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ನೀರು ನುಗ್ಗಿದೆ. ಟಿಟಿಡಿಯ ಎಲ್ಲ ಸರ್ವರ್, ನೆಟ್‌ವರ್ಕ್ ಕೂಡ ಸ್ಥಗಿತವಾಗಿದ್ದು, ನಗರದಲ್ಲಿ ರೈಲ್ವೆ ಅಂಡರ್‌ಪಾಸ್‌ಗಳು ಮುಳುಗಡೆಯಾಗಿವೆ. ರೇಣಿಗುಂಟ ಏರ್‌ಪೋರ್ಟ್‌ನಲ್ಲಿ ಪ್ರವಾಹ ಪರಿಸ್ಥಿತಿ ಇದ್ದು, ಸ್ತಬ್ಧವಾಗಿದೆ. ಭಾರಿ ಮಳೆಯಿಂದ ಅಪಾಯದ ಮುನ್ಸೂಚನೆ ಇರುವ ಕಾರಣ, ಮನೆಗಳಿಂದ ಹೊರಗೆ ಬಾರದಂತೆ ತಿರುಪತಿ ಜನರಿಗೆ ಸೂಚನೆ ನೀಡಲಾಗಿದೆ.

ಆಂಧ್ರದ ಚಿತ್ತೂರ್‌ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಅಲ್ಲದೇ ತಿರುಪತಿ, ತಿರುಮಲ ಮತ್ತು ಇತರೆ ಪ್ರದೇಶಗಳಲ್ಲಿ ಮಳೆ ನೀರಿನ ಮಟ್ಟ ಹೆಚ್ಚುತ್ತಿದೆ. ವಾಹನಗಳು ಕೊಚ್ಚಿ ಹೋಗುತ್ತಿರುವ, ರಸ್ತೆಯಲ್ಲಿ ಹರಿಯುತ್ತಿರುವ ನೀರಿನಲ್ಲಿ ಬಸ್‌ ಮುಳುಗಿರುವ ಹಾಗೂ ತಿರುಮಲ ಬೆಟ್ಟದ ಕಪಿಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಳೆ ನೀರು ಚಿಮ್ಮುತ್ತಿರುವ ದೃಶ್ಯಗಳಿರುವ ವೀಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ ರೆಡ್ಡಿ ತಿರುಪತಿಯ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿ, ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಇಂದು ಕೂಡ ಆಂಧ್ರಪ್ರದೇಶದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಅದರಲ್ಲೂ ಅನಂತಪುರ ಹಾಗೂ ಕಡಪ ಜಿಲ್ಲೆಗಳಲ್ಲಿ ಶುಕ್ರವಾರ ಮುಂಜಾನೆ ಪ್ರವಾಹದ ಪರಿಸ್ಥಿತಿಯ ಎಚ್ಚರಿಕೆಯನ್ನೂ ಹವಾಮಾನ ಇಲಾಖೆ ನೀಡಿದೆ.

ಭಾರೀ ಮಳೆಗೆ ಸಂಬಂಧಿಸಿದಂತೆ ನೆಲ್ಲೂರು, ಚಿತ್ತೂರ್‌, ಕಡಪ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಆಂಧ್ರ ಸಿಎಂ ಜಗನ್‌ ಮೋಹನ್‌ ರೆಡ್ಡಿ ಸಭೆಯನ್ನು ಕರೆದು ಜನರ ಸುರಕ್ಷತೆ ಜೊತೆಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

17 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

17 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

17 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

18 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

19 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

19 hours ago