Featured

ವಾಯುಭಾರ ಕುಸಿತದಿಂದ ತಿರುಪತಿಯಲ್ಲಿ ಪ್ರವಾಹ ಪರಿಸ್ಥಿತಿ ; ಬೆಟ್ಟದಿಂದ ಜಲಪಾತದಂತೆ ಧುಮ್ಮಿಕ್ಕುತ್ತಿದೆ ಮಳೆ ನೀರು – Vishwanews24

ವಾಯುಭಾರ ಕುಸಿತದಿಂದ ತಿರುಪತಿಯಲ್ಲಿ ಪ್ರವಾಹ ಪರಿಸ್ಥಿತಿ ; ಬೆಟ್ಟದಿಂದ ಜಲಪಾತದಂತೆ ಧುಮ್ಮಿಕ್ಕುತ್ತಿದೆ ಮಳೆ ನೀರು – Vishwanews24

ಹೈದರಾಬಾದ್: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಆಂಧ್ರಪ್ರದೇಶದಲ್ಲೂ ಧಾರಾಕಾರ ಮಳೆ ಸುರಿಯುತ್ತಿದ್ದು, ತಿರುಪತಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಆಂಧ್ರಪ್ರದೇಶದ ತಿರುಮಲ ತಿರುಪತಿಯಲ್ಲಿ ಗುರುವಾರ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಟಿಟಿಡಿಯ ಎರಡು ಘಾಟ್ ರಸ್ತೆಗಳ ಮೇಲೆ ಕಲ್ಲುಬಂಡೆಗಳು ಉರುಳಿಬಿದ್ದಿದ್ದು, ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ನಗರದಲ್ಲಿ ಎಲ್ಲಿ ನೋಡಿದರೆ ಅಲ್ಲಿ ನೀರು ನದಿಯಂತೆ ಹರಿಯುತ್ತಿದೆ. ತಿರುಪತಿ ಬೆಟ್ಟದಿಂದ ಜಲಾಪಾತದಂತೆ ಮಳೆ ನೀರು ಉಕ್ಕಿ ಹರಿಯುತ್ತಿದೆ. ಅಲ್ಲದೇ ರಸ್ತೆಯಲ್ಲಿ ನಿಂತಿದ್ದ ಆಟೋಗಳು, ಕಾರು ಇನ್ನಿತರ ವಾಹನಗಳು ತರಗೆಲೆಯಂತೆ ಮಳೆ ನೀರಿನಲ್ಲಿ ಕೊಚ್ಚಿ ಹೋಗುತ್ತಿವೆ. ತಿರುಪತಿಯ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ನೀರು ನುಗ್ಗಿದೆ. ಟಿಟಿಡಿಯ ಎಲ್ಲ ಸರ್ವರ್, ನೆಟ್‌ವರ್ಕ್ ಕೂಡ ಸ್ಥಗಿತವಾಗಿದ್ದು, ನಗರದಲ್ಲಿ ರೈಲ್ವೆ ಅಂಡರ್‌ಪಾಸ್‌ಗಳು ಮುಳುಗಡೆಯಾಗಿವೆ. ರೇಣಿಗುಂಟ ಏರ್‌ಪೋರ್ಟ್‌ನಲ್ಲಿ ಪ್ರವಾಹ ಪರಿಸ್ಥಿತಿ ಇದ್ದು, ಸ್ತಬ್ಧವಾಗಿದೆ. ಭಾರಿ ಮಳೆಯಿಂದ ಅಪಾಯದ ಮುನ್ಸೂಚನೆ ಇರುವ ಕಾರಣ, ಮನೆಗಳಿಂದ ಹೊರಗೆ ಬಾರದಂತೆ ತಿರುಪತಿ ಜನರಿಗೆ ಸೂಚನೆ ನೀಡಲಾಗಿದೆ.

ಆಂಧ್ರದ ಚಿತ್ತೂರ್‌ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಅಲ್ಲದೇ ತಿರುಪತಿ, ತಿರುಮಲ ಮತ್ತು ಇತರೆ ಪ್ರದೇಶಗಳಲ್ಲಿ ಮಳೆ ನೀರಿನ ಮಟ್ಟ ಹೆಚ್ಚುತ್ತಿದೆ. ವಾಹನಗಳು ಕೊಚ್ಚಿ ಹೋಗುತ್ತಿರುವ, ರಸ್ತೆಯಲ್ಲಿ ಹರಿಯುತ್ತಿರುವ ನೀರಿನಲ್ಲಿ ಬಸ್‌ ಮುಳುಗಿರುವ ಹಾಗೂ ತಿರುಮಲ ಬೆಟ್ಟದ ಕಪಿಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಳೆ ನೀರು ಚಿಮ್ಮುತ್ತಿರುವ ದೃಶ್ಯಗಳಿರುವ ವೀಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ ರೆಡ್ಡಿ ತಿರುಪತಿಯ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿ, ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಇಂದು ಕೂಡ ಆಂಧ್ರಪ್ರದೇಶದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಅದರಲ್ಲೂ ಅನಂತಪುರ ಹಾಗೂ ಕಡಪ ಜಿಲ್ಲೆಗಳಲ್ಲಿ ಶುಕ್ರವಾರ ಮುಂಜಾನೆ ಪ್ರವಾಹದ ಪರಿಸ್ಥಿತಿಯ ಎಚ್ಚರಿಕೆಯನ್ನೂ ಹವಾಮಾನ ಇಲಾಖೆ ನೀಡಿದೆ.

ಭಾರೀ ಮಳೆಗೆ ಸಂಬಂಧಿಸಿದಂತೆ ನೆಲ್ಲೂರು, ಚಿತ್ತೂರ್‌, ಕಡಪ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಆಂಧ್ರ ಸಿಎಂ ಜಗನ್‌ ಮೋಹನ್‌ ರೆಡ್ಡಿ ಸಭೆಯನ್ನು ಕರೆದು ಜನರ ಸುರಕ್ಷತೆ ಜೊತೆಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

Vishwa News 24

Recent Posts

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

5 minutes ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

42 minutes ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

48 minutes ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

53 minutes ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

60 minutes ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

1 hour ago