ಮಂಗಳೂರು :ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಪರಿಣಾಮ ಪಕ್ಕದ ತಮಿಳುನಾಡು ರಾಜ್ಯದಲ್ಲಿ ಏ. 30 ಮತ್ತು ಮೇ 1ರಂದು ಫನಿ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದ ಕರಾವಳಿಯಲ್ಲಿ ಕೂಡ ಭಾರೀ ಗಾಳಿ ಮಳೆಯ ಸಾಧ್ಯತೆ
ಫನಿ ಚಂಡಮಾರುತದ ಪರಿಣಾಮದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲೂ 3ರಿಂದ 4 ದಿನಗಳ ಕಾಲ ಭಾರೀ ಮಳೆಯಾಗಲಿದೆ. ಮುಂದಿನ ವಾರ 3ರಿಂದ 4 ದಿನಗಳ ಕಾಲ ಬೆಂಗಳೂರಲ್ಲಿ ಸತತ ಮಳೆಯಾಗಲಿದ್ದು, ಮೈಸೂರು, ಮಂಡ್ಯ, ತುಮಕೂರು, ಮಲೆನಾಡು, ಚಿಕ್ಕಮಗಳೂರು, ಸಕಲೇಶಪುರ, ರಾಜ್ಯದ ಕರಾವಳಿಯಲ್ಲಿ ಕೂಡ ಭಾರೀ ಗಾಳಿ ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯ ದಕ್ಷಿಣಭಾಗದಲ್ಲಿ ನಿಮ್ನ ಒತ್ತಡ ಪ್ರದೇಶ ಉಂಟಾಗಿದ್ದು, ವಾಯುಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆಗೊಳ್ಳಲಿದೆ. ಈ ನಡುವೆ ಟ್ರಪ್ ಕೇರಳದಿಂದ ಉತ್ತರ ಕರ್ನಾಟಕದ ಕಡೆಗೆ ಸಾಗಲಿರುವುದರಿಂದ ಕರಾವಳಿ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಮೋಡ ಆವರಿಸಲಿದೆ. ಜತೆಗೆ ಬಲವಾದ ಗಾಳಿಯೂ ಬೀಸಲಿದೆ.
ಕರಾವಳಿಯಲ್ಲಿ ಮಾತ್ರವಲ್ಲದೇ ಕೇರಳ ವಯನಾಡು, ಕೋಝಿಕೋಡ್ ಮಲಪ್ಪುರ, ಪಾಲ್ಫಾಟ್, ತ್ರಿಶ್ಯೂರ್ ಹಾಗೂ ಇಡುಕ್ಕಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರೋದ್ರಿರಿಂದ ಮುನ್ನೆಚ್ಚರಿಕೆಯಿಂದ ಇರುವಂತೆ ಜನತೆಗೆ ಹಾಗೂ ಮೀನುಗಾರರಿಗೆ ಸೂಚಿಸಲಾಗಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…