ಮಂಗಳೂರು :ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಪರಿಣಾಮ ಪಕ್ಕದ ತಮಿಳುನಾಡು ರಾಜ್ಯದಲ್ಲಿ ಏ. 30 ಮತ್ತು ಮೇ 1ರಂದು ಫನಿ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದ ಕರಾವಳಿಯಲ್ಲಿ ಕೂಡ ಭಾರೀ ಗಾಳಿ ಮಳೆಯ ಸಾಧ್ಯತೆ
ಫನಿ ಚಂಡಮಾರುತದ ಪರಿಣಾಮದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲೂ 3ರಿಂದ 4 ದಿನಗಳ ಕಾಲ ಭಾರೀ ಮಳೆಯಾಗಲಿದೆ. ಮುಂದಿನ ವಾರ 3ರಿಂದ 4 ದಿನಗಳ ಕಾಲ ಬೆಂಗಳೂರಲ್ಲಿ ಸತತ ಮಳೆಯಾಗಲಿದ್ದು, ಮೈಸೂರು, ಮಂಡ್ಯ, ತುಮಕೂರು, ಮಲೆನಾಡು, ಚಿಕ್ಕಮಗಳೂರು, ಸಕಲೇಶಪುರ, ರಾಜ್ಯದ ಕರಾವಳಿಯಲ್ಲಿ ಕೂಡ ಭಾರೀ ಗಾಳಿ ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯ ದಕ್ಷಿಣಭಾಗದಲ್ಲಿ ನಿಮ್ನ ಒತ್ತಡ ಪ್ರದೇಶ ಉಂಟಾಗಿದ್ದು, ವಾಯುಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆಗೊಳ್ಳಲಿದೆ. ಈ ನಡುವೆ ಟ್ರಪ್ ಕೇರಳದಿಂದ ಉತ್ತರ ಕರ್ನಾಟಕದ ಕಡೆಗೆ ಸಾಗಲಿರುವುದರಿಂದ ಕರಾವಳಿ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಮೋಡ ಆವರಿಸಲಿದೆ. ಜತೆಗೆ ಬಲವಾದ ಗಾಳಿಯೂ ಬೀಸಲಿದೆ.
ಕರಾವಳಿಯಲ್ಲಿ ಮಾತ್ರವಲ್ಲದೇ ಕೇರಳ ವಯನಾಡು, ಕೋಝಿಕೋಡ್ ಮಲಪ್ಪುರ, ಪಾಲ್ಫಾಟ್, ತ್ರಿಶ್ಯೂರ್ ಹಾಗೂ ಇಡುಕ್ಕಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರೋದ್ರಿರಿಂದ ಮುನ್ನೆಚ್ಚರಿಕೆಯಿಂದ ಇರುವಂತೆ ಜನತೆಗೆ ಹಾಗೂ ಮೀನುಗಾರರಿಗೆ ಸೂಚಿಸಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…