ಮಂಗಳೂರು :ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಪರಿಣಾಮ ಪಕ್ಕದ ತಮಿಳುನಾಡು ರಾಜ್ಯದಲ್ಲಿ ಏ. 30 ಮತ್ತು ಮೇ 1ರಂದು ಫನಿ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದ ಕರಾವಳಿಯಲ್ಲಿ ಕೂಡ ಭಾರೀ ಗಾಳಿ ಮಳೆಯ ಸಾಧ್ಯತೆ
ಫನಿ ಚಂಡಮಾರುತದ ಪರಿಣಾಮದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲೂ 3ರಿಂದ 4 ದಿನಗಳ ಕಾಲ ಭಾರೀ ಮಳೆಯಾಗಲಿದೆ. ಮುಂದಿನ ವಾರ 3ರಿಂದ 4 ದಿನಗಳ ಕಾಲ ಬೆಂಗಳೂರಲ್ಲಿ ಸತತ ಮಳೆಯಾಗಲಿದ್ದು, ಮೈಸೂರು, ಮಂಡ್ಯ, ತುಮಕೂರು, ಮಲೆನಾಡು, ಚಿಕ್ಕಮಗಳೂರು, ಸಕಲೇಶಪುರ, ರಾಜ್ಯದ ಕರಾವಳಿಯಲ್ಲಿ ಕೂಡ ಭಾರೀ ಗಾಳಿ ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯ ದಕ್ಷಿಣಭಾಗದಲ್ಲಿ ನಿಮ್ನ ಒತ್ತಡ ಪ್ರದೇಶ ಉಂಟಾಗಿದ್ದು, ವಾಯುಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆಗೊಳ್ಳಲಿದೆ. ಈ ನಡುವೆ ಟ್ರಪ್ ಕೇರಳದಿಂದ ಉತ್ತರ ಕರ್ನಾಟಕದ ಕಡೆಗೆ ಸಾಗಲಿರುವುದರಿಂದ ಕರಾವಳಿ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಮೋಡ ಆವರಿಸಲಿದೆ. ಜತೆಗೆ ಬಲವಾದ ಗಾಳಿಯೂ ಬೀಸಲಿದೆ.
ಕರಾವಳಿಯಲ್ಲಿ ಮಾತ್ರವಲ್ಲದೇ ಕೇರಳ ವಯನಾಡು, ಕೋಝಿಕೋಡ್ ಮಲಪ್ಪುರ, ಪಾಲ್ಫಾಟ್, ತ್ರಿಶ್ಯೂರ್ ಹಾಗೂ ಇಡುಕ್ಕಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರೋದ್ರಿರಿಂದ ಮುನ್ನೆಚ್ಚರಿಕೆಯಿಂದ ಇರುವಂತೆ ಜನತೆಗೆ ಹಾಗೂ ಮೀನುಗಾರರಿಗೆ ಸೂಚಿಸಲಾಗಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…