ಮಂಗಳೂರು :ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಪರಿಣಾಮ ಪಕ್ಕದ ತಮಿಳುನಾಡು ರಾಜ್ಯದಲ್ಲಿ ಏ. 30 ಮತ್ತು ಮೇ 1ರಂದು ಫನಿ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದ ಕರಾವಳಿಯಲ್ಲಿ ಕೂಡ ಭಾರೀ ಗಾಳಿ ಮಳೆಯ ಸಾಧ್ಯತೆ
ಫನಿ ಚಂಡಮಾರುತದ ಪರಿಣಾಮದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲೂ 3ರಿಂದ 4 ದಿನಗಳ ಕಾಲ ಭಾರೀ ಮಳೆಯಾಗಲಿದೆ. ಮುಂದಿನ ವಾರ 3ರಿಂದ 4 ದಿನಗಳ ಕಾಲ ಬೆಂಗಳೂರಲ್ಲಿ ಸತತ ಮಳೆಯಾಗಲಿದ್ದು, ಮೈಸೂರು, ಮಂಡ್ಯ, ತುಮಕೂರು, ಮಲೆನಾಡು, ಚಿಕ್ಕಮಗಳೂರು, ಸಕಲೇಶಪುರ, ರಾಜ್ಯದ ಕರಾವಳಿಯಲ್ಲಿ ಕೂಡ ಭಾರೀ ಗಾಳಿ ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯ ದಕ್ಷಿಣಭಾಗದಲ್ಲಿ ನಿಮ್ನ ಒತ್ತಡ ಪ್ರದೇಶ ಉಂಟಾಗಿದ್ದು, ವಾಯುಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆಗೊಳ್ಳಲಿದೆ. ಈ ನಡುವೆ ಟ್ರಪ್ ಕೇರಳದಿಂದ ಉತ್ತರ ಕರ್ನಾಟಕದ ಕಡೆಗೆ ಸಾಗಲಿರುವುದರಿಂದ ಕರಾವಳಿ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಮೋಡ ಆವರಿಸಲಿದೆ. ಜತೆಗೆ ಬಲವಾದ ಗಾಳಿಯೂ ಬೀಸಲಿದೆ.
ಕರಾವಳಿಯಲ್ಲಿ ಮಾತ್ರವಲ್ಲದೇ ಕೇರಳ ವಯನಾಡು, ಕೋಝಿಕೋಡ್ ಮಲಪ್ಪುರ, ಪಾಲ್ಫಾಟ್, ತ್ರಿಶ್ಯೂರ್ ಹಾಗೂ ಇಡುಕ್ಕಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರೋದ್ರಿರಿಂದ ಮುನ್ನೆಚ್ಚರಿಕೆಯಿಂದ ಇರುವಂತೆ ಜನತೆಗೆ ಹಾಗೂ ಮೀನುಗಾರರಿಗೆ ಸೂಚಿಸಲಾಗಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…