Featured

ವಾರಂತ್ಯವೂ ಶ್ರೀಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಮುಕ್ತ ಪ್ರವೇಶಕ್ಕೆ ಅವಕಾಶ: ಡಿಸಿ -Vishwanews24

ವಾರಂತ್ಯವೂ ಶ್ರೀಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಮುಕ್ತ ಪ್ರವೇಶಕ್ಕೆ ಅವಕಾಶ: ಡಿಸಿ -Vishwanews24

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ವಿಧಿಸಿದ್ದ ವಾರಾಂತ್ಯ ನಿರ್ಬಂಧಗಳನ್ನು ತೆರವುಗೊಳಿಸಿ ಷರತ್ತುಗಳೊಂದಿಗೆ ಸೇವೆ ಹಾಗೂ ಸಾರ್ವಜನಿಕರ ಮುಕ್ತ ಪ್ರವೇಶಕ್ಕೆ ಅವಕಾಶ ನೀಡಿ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.

ಆದರೆ ದೇವಾಲಯಗಳಲ್ಲಿ ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆಡಳಿತ ಮಂಡಳಿಯು ಇದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿ ಹೊಂದಿರಬೇಕು. ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಆಡಳಿತ ಮಂಡಳಿ, ಅರ್ಚಕರು, ಸಿಬ್ಬಂದಿ ಸೇರಿದಂತೆ ಎಲ್ಲರೂ ಪ್ರತಿ 15 ದಿನಗಳಿಗೊಮ್ಮೆ ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸಿ ನೆಗೆಟಿವ್ ವರದಿಯನ್ನು ಪಡೆದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ.

ಅದೇ ರೀತಿ ಭಕ್ತಾದಿಗಳು ಎರಡು ಡೋಸ್ ಲಸಿಕೆ ಪಡೆದಿದ್ದರೂ ಕಡ್ಡಾಯವಾಗಿ 72 ಗಂಟೆಗಳಿಗಿಂತ ಮುಂಚಿತ ಆರ್‌ಟಿ-ಪಿಸಿಆರ್ ನೆಗೆಟಿವ್ ವರದಿ ಹೊಂದಿದ್ದಲ್ಲಿ ಮಾತ್ರ ಸೇವೆಗೆ ಅವಕಾಶ ನೀಡಬೇಕು. ಜಾಗೃತಿ ಮೂಡಿಸಲು ಅಲ್ಲಲ್ಲಿ ಸೂಚನಾ ಫಲಕಗಳನ್ನು ಅಳವಡಿಸಬೇಕು. ಕೋವಿಡ್ ಲಸಿಕೆ ಪಡೆಯದಿದ್ದ ಭಕ್ತರಿಗೆ ಲಸಿಕೆ ನೀಡಲು ಅನುಕೂಲವಾಗುವಂತೆ ಸಂಬಂಧಪಟ್ಟ ತಾಲೂಕು ಆರೋಗ್ಯಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ದೇವಸ್ಥಾನಗಳಲ್ಲಿ ಕೋವಿಡ್ ಲಸಿಕೆ ಕೇಂದ್ರ ತೆರೆಯಲು ಹಾಗೂ ಜನಸಂದಣಿಯಾಗದಂತೆ ಲಸಿಕೆ ನೀಡಲು ಕ್ರಮ ವಹಿಸಬೇಕು.

ದೇವಾಲಯದಲ್ಲಿ ಕನಿಷ್ಠ ಸಂಖ್ಯೆಯಲ್ಲಿ ಸೇವೆಗಳನ್ನು ನಡೆಸಲು ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

18 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

18 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

18 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

19 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

19 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

19 hours ago