ವಾರದೊಳಗೆ 70 ಸಾವಿರ ಮಂದಿಗೆ ಉಚಿತ ಆಯುರ್ವೇದ ಔಷಧ ಪಡೆಯಲು ರಾಜ್ಯ ಸರ್ಕಾರ ಅನುಮತಿ ನೀಡುವ ವಿಶ್ವಾಸವಿದೆ :ಡಾ. ಗಿರಿಧರ ಕಜೆ

ಔಷಧದ ಲೈಸೆನ್ಸ್‌‌ ಅನ್ನು ಸರ್ಕಾರಕ್ಕೆ ನೀಡಿದ್ದೇನೆ. ಅದನ್ನು ಸರ್ಕಾರವು ಗೌಪ್ಯವಾಗಿ ತೆಗೆದಿಟ್ಟುಕೊಂಡಿದೆ ಎನ್ನುವ ವಿಚಾರ ಸುಳ್ಳು ..

ವಾರದೊಳಗೆ 70 ಸಾವಿರ ಮಂದಿಗೆ ಉಚಿತ ಆಯುರ್ವೇದ ಔಷಧ ಪಡೆಯಲು ರಾಜ್ಯ ಸರ್ಕಾರ ಅನುಮತಿ ನೀಡುವ ವಿಶ್ವಾಸವಿದೆ :

ಆಯುರ್ವೇದ ವೈದ್ಯ ಡಾ.ಗಿರಿಧರ ಕಜೆ

ಬೆಂಗಳೂರು: ಕೊರೊನಾ ಸೋಂಕಿತರೊಂದಿಗೆ ನೇರವಾಗಿ ಸಂಪರ್ಕಕ್ಕೆ ಬಂದಿರುವ 70 ಸಾವಿರ ಮಂದಿಗೆ ಉಚಿತ ಆಯುರ್ವೇದ ಔಷಧ ಪಡೆಯಲು ಇನ್ನು ಒಂದು ವಾರದಲ್ಲಿ ಸರ್ಕಾರವು ಅನುಮತಿ ನೀಡುವ ವಿಶ್ವಾಸವಿದೆ ಎಂಬುದಾಗಿ ಆಯುರ್ವೇದ ವೈದ್ಯ ಡಾ.ಗಿರಿಧರ ಕಜೆ ಹೇಳಿದ್ದಾರೆ.

ಫೇಸ್‌‌ಬುಕ್‌‌ ಲೈವ್‌‌ ಮೂಲಕ ಬಿಎಂಸಿಆರ್‌‌‌ಐ ನೀಡಿರುವ ನೋಟಿಸ್‌‌‌ನ ಗೊಂದಲ ಹಿನ್ನೆಲೆ ಸಾರ್ವಜನಿಕರ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.

ನಾನು ಔಷಧದ ಲೈಸೆನ್ಸ್‌‌ ಅನ್ನು ಸರ್ಕಾರಕ್ಕೆ ನೀಡಿದ್ದೇನೆ. ಅದನ್ನು ಸರ್ಕಾರವು ಗೌಪ್ಯವಾಗಿ ತೆಗೆದಿಟ್ಟುಕೊಂಡಿದೆ ಎನ್ನುವ ವಿಚಾರ ಸುಳ್ಳು. ಈ ಹಂತದಲ್ಲಿ ಔಷಧಿ ಯಶಸ್ಸು ಸಾಧಿಸಲು ಮುಖ್ಯಮಂತ್ರಿಗಳು, ಸಚಿವರು ಹಾಗೂ ಅಧಿಕಾರಿಗಳ ಸಹಕಾರ ಕಾರಣ. ಸ್ವಾತಂತ್ರ್ಯದ ಬಳಿಕ ಅಲೋಪಥಿ ಔಷಧ ಕ್ರಮಗಳನ್ನು ಉಪಯೋಗ ಮಾಡುತ್ತಿರುವ ಕಾರಣ ಆಯುರ್ವೆದದ ಬಗ್ಗೆ ಕೆಲವೊಂದು ತಪ್ಪು ತಿಳುವಳಿಕೆಗಳು ಇವೆ. ಹಾಗಾಗಿ ಪ್ರಕ್ರಿಯೆ ಸಮಯ ತಗೆದುಕೊಳ್ಳುತ್ತದೆ. ಇನ್ನು ಒಂದು ವಾರದಲ್ಲಿ ಸರ್ಕಾರವು ಉಚಿತ ಔಷಧವನ್ನು ಪಡೆದುಕೊಂಡು ಪ್ರಾಥಮಿಕ ಸೋಂಕಿತರಿಗೆ ರೋಗ ನಿರೋಧಕ ಔಷಧವೆಂದು ನೀಡುವ ಭರವಸೆ ಹೊಂದಿದ್ದೇನೆ ಎಂದು ತಿಳಿಸಿದರು.

ಈ ಔಷಧದ ತಯಾರಿಕೆಯನ್ನು ಸರ್ಕಾರ ಪ್ರಾರಂಭ ಮಾಡಿದ ಬಳಿಕ ಸ್ಥಗಿತಗೊಳಿಸುತ್ತೇನೆ. ಇನ್ನು ಪ್ರಾಥಮಿಕ ಸೋಂಕಿತರಿಗೆ, ಪೊಲೀಸ್‌, ಪತ್ರಕರ್ತರಿಗೆ ಸೇರಿದಂತೆ ವೈದ್ಯಕೀಯ ಸಿಬ್ಬಂದಿಗಳೊಂದಿಗೆ ನೇರ ಸಂಪರ್ಕ ಹೊಂದಿರುವ ಹಾಗೂ ಕೋ ಮಾರ್ಬಿಡ್‌‌ ಸ್ಥಿತಿಯವರಿಗೆ ಈ ಔಷಧವು ಮೊದಲು ದೊರಕಲಿ ಎನ್ನುವ ಉದ್ದೇಶವಾಗಿದೆ.

ಮೊದಲು ಸಂಶೋಧರಿಗೆ ಗೌರವ ನೀಡಬೇಕು. ಯಾವುದಕ್ಕೆ ಸ್ಪಷ್ಟನೆ ತಿಳಿಯಬೇಕೆಂದರೆ ನಾನೇ ಹೇಳುತ್ತೇನೆ. ಆದರೆ, ಈ ರೀತಿಯಾಗಿ ಅದನ್ನು ನೋಟಿಸ್‌‌‌ ರೂಪದಲ್ಲಿ ಹೊರಡಿಸಿ ನನಗೆ 17 ದಿನವಾದರೂ ತಲುಪಿಸದೇ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುವಂತ ಅವಶ್ಯಕತೆ ಇರಲಿಲ್ಲ. ಕೊರೊನಾದ ಈ ಸಂದರ್ಭ ಯಾವ ಔಷಧದಿಂದ ಪರಿಹಾರ ಸಿಗುತ್ತದೆ ಎನ್ನುವ ವಿಚಾರವನ್ನು ಸ್ವಾಗತಿಸುವಂತ ಮನೋಭಾವವನ್ನು ಎಲ್ಲರೂ ಬೆಳೆಸಿಕೊಳ್ಳಬೇಕು. 10 ಮಂದಿ ಗುಣಮುಖರಾಗಿದ್ದಾರೆ ಎನ್ನುವ ವಿಚಾರ ಸಣ್ಣದಲ್ಲ.

ಭಯಭೀತರಾಗುವುದಕ್ಕಿಂತ ಎಚ್ಚರ ವಹಿಸುವುದು ಅತೀ ಅಗತ್ಯ. ರೋಗ ಬರುವ ಮೊದಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು. ಆಯುರ್ವೇದದಿಂದ ಅನೇಕ ರೀತಿಯ ಸಾಂಕ್ರಾಮಿಕ ರೋಗಗಳು ಬಾರದಂತೆ ತಡೆ  ಯುವ ಶಕ್ತಿಯಿದೆ. ಅಲೋಪಥಿಗೊಂದು, ಆಯುರ್ವೇಧ ‌ಕ್ಕೊಂದು ಮಾನದಂಡ ಬೇಡ. ಪ್ಲಾಸ್ಮಾ ಥೆರಪಿ ಒಬ್ಬರಿಗೆ ಮಾಡಿದ ತಕ್ಷಣ ಎಲ್ಲ ಕಡೆ ಧನಾತ್ಮಕ ಚರ್ಚೆ ನಡೆಯಿತು. ಆಯುರ್ವೇದಕ್ಕೆ ಮಾತ್ರ ಪ್ರಶ್ನೆಗಳು ಬರುವುದು ಸರಿಯಲ್ಲ ಎಂದರು.

ಔಷಧ ತಯಾರಿಕೆಯ ಸೂತ್ರ ಸರ್ಕಾರಕ್ಕೆ ಒಪ್ಪಿಸುವೆ ಸರ್ಕಾರ ಉಚಿತವಾಗಿ ಔಷಧ ವಿತರಣೆ ಕಾರ್ಯ ಆರಂಭಿಸಿದ ನಂತರ ಔಷಧ ತಯಾರಿಕೆಯ ಸೂತ್ರ ಹಾಗೂ ಪರವಾನಗಿಯನ್ನು ಸರ್ಕಾರಕ್ಕೆ ಒಪ್ಪಿಸಲಿದ್ದೇನೆ. ಸರ್ಕಾರವೇ ತಯಾರಿಸುವ ಅಥವಾ ಖಾಸಗಿ ಸಂಸ್ಥೆಗಳಿಗೆ ಉತ್ಪಾದನೆಗೆ ನೀಡುವವ ರೆಗೆ ಮಾತ್ರ ಔಷಧವನ್ನು ತಯಾರಿಸಿ ಮಾರಾಟ ಮಾಡುತ್ತೇನೆ. ಈಗಾಗಲೆ ನಾಲ್ಕು ಎಂಎನ್‌ಸಿಗಳು ಕೋಟ್ಯಂತರ ರೂ.ಗೆ ಔಷಧದ ಹಕ್ಕನ್ನು ಕೊಳ್ಳಲು ಬಂದಿದ್ದವು. ಆದರೆ, ಮೊದಲು ಸಾರ್ವಜನಿಕರಿಗೆ ಅನುಕೂಲವಾಗಲೆಂದು ಮಾರಾಟ ಮಾಡಿಲ್ಲ ಎಂದು ಡಾ.ಗಿರಿಧರ ಕಜೆ ಹೇಳಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago