Featured

ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿದಿದ್ದ ತೇಜ್ ಬಹದ್ದೂರ್‌ ನಾಮಪತ್ರ ತಿರಸ್ಕೃತ -Vishwanews24

ಲಖನೌ: ಯೋಧರಿಗೆ ಕಳಪೆ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ವೀಡಿಯೋ ಮಾಡಿದ್ದ ಗಡಿ ಭದ್ರತಾ ಪಡೆಯ ಮಾಜಿ ತೇಜ್‌ ಬಹದ್ದೂರ್‌ ಯಾದವ್‌ ವಾರಾಣಸಿಯಲ್ಲಿ ಪ್ರಧಾನಮಂತ್ರಿ ನರೇಂಂದ್ರ ಮೋದಿ ವಿರುದ್ಧ ಕಣಕ್ಕಿಳಿದಿದ್ದರು. ಆದರೆ ಈಗ ಅವರ ನಾಮಪತ್ರ ತಿರಸ್ಕಾರವಾಗಿದೆ.

ತೇಜ್‌ ಬಹದ್ದೂರ್‌ ಯಾದವ್‌ ಅವರನ್ನು ಸಮಾಜವಾದಿ ಪಕ್ಷ ಕಣಕ್ಕಿಳಿಸಿತ್ತು. ಈ ಕ್ಷೇತ್ರಕ್ಕೆ ಶಾಲಿನಿ ಯಾದವ್‌ ಅವರನ್ನು ಸಮಾಜವಾದಿ ಪಕ್ಷ ಅಭ್ಯರ್ಥಿ ಎಂದು ಘೋಷಿಸಿತ್ತು. ಆದರೆ ಅಚ್ಚರಿಯ ಬೆಳವಣಿಗೆಯಲ್ಲಿ ತೇಜ್‌ ಬಹದ್ದೂರ್‌ ಯಾದವ್‌ ಅವರೇ ನಮ್ಮ ಅಭ್ಯರ್ಥಿ ಎಂದು ಸಮಾಜವಾದಿ ಪಕ್ಷ ಅಂತಿಮಗೊಳಿಸಿತ್ತು.

ಅಮಾನತುಗೊಂಡಿರುವ ಬಿಎಸ್‌ಎಫ್ ಯೋಧ ತೇಜ್ ಬಹದ್ದೂರ್ ಯಾದವ್ ಗೆ ಮಂಗಳವಾರ ಚುನಾವಣಾ ಆಯೋಗ ನೊಟೀಸ್ ನೀಡಿತ್ತು. ಸೇನೆ ಬಗ್ಗೆ ವಾಟ್ಸ್ ಅಪ್ ಸೆಲ್ಫಿ ವಿಡಿಯೋ ಕಳುಹಿಸಿ ಸುದ್ದಿಯಾಗಿದ್ದ ತೇಜ್ ಬಹದ್ದೂರ್ ಯಾದವ್ ಎರಡನೇ ಬಾರಿ ವಿಡಿಯೋ ಹಾಕಿದಾಗ ಸೇನೆಯಿಂದ ವಜಾಗೊಂಡಿದ್ದರು.

ಸಮಾಜವಾದಿ ಪಕ್ಷದಿಂದ ನಾಮಪತ್ರ ಸಲ್ಲಿಸುವ ಮೊದಲೇ ತೇಜ್ ಬಹದ್ದೂರ್ ಯಾದವ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಆ ನಾಮಪತ್ರದಲ್ಲಿ ಸೇನೆಯಿಂದ ವಜಾಗೊಂಡ ಸಂಗತಿಯನ್ನು ಉಲ್ಲೇಖಿಸಿದ್ದರು. ಎರಡನೇ ನಾಮಪತ್ರದಲ್ಲಿ ಆ ವಿಚಾರವಿಲ್ಲ. ಈ ಬಗ್ಗೆ ಸ್ಪಷ್ಟನೆ ನೀಡಬೇಕು ಹಾಗೂ ಬಿಎಸ್‌ಎಫ್ ನಿಂದ ಎನ್‌ಒಸಿ ತರುವಂತೆ ಸೂಚನೆ ನೀಡಿತ್ತು. ಆದ್ರೆ ತೇಜ್ ಬಹದ್ದೂರ್ ಯಾದವ್ ನಿಗದಿತ ಸಮಯಕ್ಕೆ ನೊಟೀಸ್ ಗೆ ಉತ್ತರ ನೀಡದ ಕಾರಣ ನಾಮಪತ್ರ ತಿರಸ್ಕೃತಗೊಂಡಿದೆ  ಎನ್ನಲಾಗಿದೆ..

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

17 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

17 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

17 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

17 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

17 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

19 hours ago