Featured

ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿದಿದ್ದ ತೇಜ್ ಬಹದ್ದೂರ್‌ ನಾಮಪತ್ರ ತಿರಸ್ಕೃತ -Vishwanews24

ಲಖನೌ: ಯೋಧರಿಗೆ ಕಳಪೆ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ವೀಡಿಯೋ ಮಾಡಿದ್ದ ಗಡಿ ಭದ್ರತಾ ಪಡೆಯ ಮಾಜಿ ತೇಜ್‌ ಬಹದ್ದೂರ್‌ ಯಾದವ್‌ ವಾರಾಣಸಿಯಲ್ಲಿ ಪ್ರಧಾನಮಂತ್ರಿ ನರೇಂಂದ್ರ ಮೋದಿ ವಿರುದ್ಧ ಕಣಕ್ಕಿಳಿದಿದ್ದರು. ಆದರೆ ಈಗ ಅವರ ನಾಮಪತ್ರ ತಿರಸ್ಕಾರವಾಗಿದೆ.

ತೇಜ್‌ ಬಹದ್ದೂರ್‌ ಯಾದವ್‌ ಅವರನ್ನು ಸಮಾಜವಾದಿ ಪಕ್ಷ ಕಣಕ್ಕಿಳಿಸಿತ್ತು. ಈ ಕ್ಷೇತ್ರಕ್ಕೆ ಶಾಲಿನಿ ಯಾದವ್‌ ಅವರನ್ನು ಸಮಾಜವಾದಿ ಪಕ್ಷ ಅಭ್ಯರ್ಥಿ ಎಂದು ಘೋಷಿಸಿತ್ತು. ಆದರೆ ಅಚ್ಚರಿಯ ಬೆಳವಣಿಗೆಯಲ್ಲಿ ತೇಜ್‌ ಬಹದ್ದೂರ್‌ ಯಾದವ್‌ ಅವರೇ ನಮ್ಮ ಅಭ್ಯರ್ಥಿ ಎಂದು ಸಮಾಜವಾದಿ ಪಕ್ಷ ಅಂತಿಮಗೊಳಿಸಿತ್ತು.

ಅಮಾನತುಗೊಂಡಿರುವ ಬಿಎಸ್‌ಎಫ್ ಯೋಧ ತೇಜ್ ಬಹದ್ದೂರ್ ಯಾದವ್ ಗೆ ಮಂಗಳವಾರ ಚುನಾವಣಾ ಆಯೋಗ ನೊಟೀಸ್ ನೀಡಿತ್ತು. ಸೇನೆ ಬಗ್ಗೆ ವಾಟ್ಸ್ ಅಪ್ ಸೆಲ್ಫಿ ವಿಡಿಯೋ ಕಳುಹಿಸಿ ಸುದ್ದಿಯಾಗಿದ್ದ ತೇಜ್ ಬಹದ್ದೂರ್ ಯಾದವ್ ಎರಡನೇ ಬಾರಿ ವಿಡಿಯೋ ಹಾಕಿದಾಗ ಸೇನೆಯಿಂದ ವಜಾಗೊಂಡಿದ್ದರು.

ಸಮಾಜವಾದಿ ಪಕ್ಷದಿಂದ ನಾಮಪತ್ರ ಸಲ್ಲಿಸುವ ಮೊದಲೇ ತೇಜ್ ಬಹದ್ದೂರ್ ಯಾದವ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಆ ನಾಮಪತ್ರದಲ್ಲಿ ಸೇನೆಯಿಂದ ವಜಾಗೊಂಡ ಸಂಗತಿಯನ್ನು ಉಲ್ಲೇಖಿಸಿದ್ದರು. ಎರಡನೇ ನಾಮಪತ್ರದಲ್ಲಿ ಆ ವಿಚಾರವಿಲ್ಲ. ಈ ಬಗ್ಗೆ ಸ್ಪಷ್ಟನೆ ನೀಡಬೇಕು ಹಾಗೂ ಬಿಎಸ್‌ಎಫ್ ನಿಂದ ಎನ್‌ಒಸಿ ತರುವಂತೆ ಸೂಚನೆ ನೀಡಿತ್ತು. ಆದ್ರೆ ತೇಜ್ ಬಹದ್ದೂರ್ ಯಾದವ್ ನಿಗದಿತ ಸಮಯಕ್ಕೆ ನೊಟೀಸ್ ಗೆ ಉತ್ತರ ನೀಡದ ಕಾರಣ ನಾಮಪತ್ರ ತಿರಸ್ಕೃತಗೊಂಡಿದೆ  ಎನ್ನಲಾಗಿದೆ..

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

7 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

8 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

8 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

8 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

9 hours ago