ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ದರ್ಶನ್ ಅರೆಸ್ಟ್ ನಂತರ ಅವರ ಫ್ಯಾನ್ಸ್ ಅಂಧಾಭಿಮಾನ ಮಿತಿ ಮೀರಿದೆ. ವಾಹನಗಳ ಮೇಲೆ ದರ್ಶನ್ ಕೈದಿ ನಂಬರ್ ಸೇರಿದಂತೆ ತರಹೇವಾರಿ ಸ್ಟಿಕ್ಕರ್ಗಳನ್ನು ಅಂಟಿಸಿ ಅಭಿಮಾನ ಮೆರೆಯುತ್ತಿದ್ದಾರೆ. ಅಂತಹ ಅಭಿಮಾನಿಗಳಿಗೆ ಆರ್ಟಿಓ ಎಚ್ಚರಿಕೆ ಕೊಟ್ಟಿದೆ.
ಕೊಲೆ ಆರೋಪಿ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆದ್ಮೇಲೆ ಅವರ ಅಭಿಮಾನಿಗಳು ವಾಹನಗಳ ಮೇಲೆ ತರಹೇವಾರಿ ಬರಹ ಬರೆದು ಅಂಧಾಭಿಮಾನ ಮೆರೆಯುತ್ತಿದ್ದಾರೆ. ದರ್ಶನ್ಗೆ ನೀಡಿರುವ ಕೈದಿ ಸಂಖ್ಯೆ, ಸೇರಿದಂತೆ ವಾಹನಗಳ ಮೇಲೆ ಪ್ರಚೋದನಕಾರಿ, ಬೇರೆ ನಟರ ಫ್ಯಾನ್ಸ್ಗೆ ಟಾಂಗ್ ಕೊಡುವಂತ ಬರಹಗಳ ಸ್ಟಿಕರ್ ಅಳವಡಿಸಿಕೊಂಡಿರುವುದು ಹೆಚ್ಚಾಗಿ ಕಂಡುಬರುತ್ತಿದೆ. ಈ ಬಗ್ಗೆ ನಿಗಾ ವಹಿಸಿರುವ ಪೊಲೀಸರು ಹಾಗೂ ಆರ್ಟಿಒ ಇಲಾಖೆ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದು, ʻಡಿಬಾಸ್ʼ ಅಭಿಮಾನಿಗಳಿಗೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ವಾಹನಗಳ ಮೇಲೆ ಬೇರೆ ಬೇರೆ ರೀತಿಯ ಬರಹಗಳನ್ನು ಅಳವಡಿಸಿಕೊಳ್ಳುವುದು ಹೆಚ್ಚಾಗಿ ಕಂಡುಬರುತ್ತಿದೆ. ಈ ಹಿಂದೆ ಈ ಮಟ್ಟಿಗೆ ಬರಹಗಳನ್ನ ವಾಹನಗಳ ಮೇಲೆ ಹಾಕಿರಲಿಲ್ಲ. ಈ ಬಗ್ಗೆ ಆರ್ಟಿಒ ಇಲಾಖೆ ಹಾಗೂ ಪೊಲೀಸ್ ಇಲಾಖೆ ಗಮನಕ್ಕೆ ಬಂದಿದ್ದು, ಅನವಶ್ಯಕ ಬರಹಗಳು ಕಂಡುಬಂದಲ್ಲಿ ಕ್ರಮ ತೆಗೆದುಕೊಳ್ಳೂತ್ತೇವೆ. ನೆಚ್ಚಿನ ನಟರ ಫೋಟೋಗಳನ್ನ ವಾಹನಗಳ ಮೇಲೆ ಹಾಕೋದು ಕಾನೂನು ಬಾಹಿರ ಎಂದು ಹೆಚ್ಚುವರಿ ಸಾರಿಗೆ ಆಯುಕ್ತ ಸಿ. ಮಲ್ಲಿಕಾರ್ಜುನ್ ಎಚ್ಚರಿಸಿದ್ದಾರೆ.
ನಂಬರ್ ಪ್ಲೇಟ್ ಯಾವ ರೀತಿ ಇರಬೇಕು ಎಂದು ಸುಪ್ರೀಂ ಕೋರ್ಟ್ ಆರ್ಟಿಒ ಇಲಾಖೆಗಳಿಗೆ ನಿರ್ದೇಶನ ಕೊಟ್ಟಿದೆ. ಅದರ ಅನ್ವಯವೇ ಅಧಿಕಾರಿಗಳು ಕೇಸು ದಾಖಲು ಮಾಡುತ್ತಾ ಬಂದಿದ್ದಾರೆ. ಈ ಬಗ್ಗೆ ಜನರಿಗೆ ಅರಿವು ಮೂಡಿಸುವ ಹಾಗೂ ಪ್ರಚಾರ ಮಾಡುವ ಕೆಲಸ ಆರ್ಟಿಒ ಇಲಾಖೆ ಮಾಡಿದೆ. ಕಳೆದ 3 ವರ್ಷಗಳಲ್ಲಿ ಈ ಸಂಬಂಧ ಹಲವು ಪ್ರಕರಣ ದಾಖಲು ಮಾಡಿದ್ದೇವೆ. ವಾಹನಗಳ ಮೇಲೆ ಬೇರೆ ಬೇರೆ ಬರಹಗಳನ್ನ ಬರೆಯುತ್ತಿದ್ದಾರೆ. ಯಾರೂ ಸಹ ಅನಾವಶ್ಯಕ ಬರಹಗಳನ್ನ ವಾಹನಗಳ ಮೇಲೆ ಹಾಕಬಾರದು. ಇನ್ಮೇಲೆ ಈ ರೀತಿ ಸ್ಟಾರ್ ವಾರ್ ರೀತಿ ಅನಾವಶ್ಯಕ ಬರಹ, ಟಾಂಗ್ ಕೊಡೋ ಬರಹಗಳನ್ನ ತೆಗೆದು ಹಾಕಿ, ಇಲ್ಲ ನಮ್ಮ ಕಠಿಣ ಕ್ರಮ ಗ್ಯಾರಂಟಿ ಅಂತಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…