Featured

ವಾಹನಗಳ ಮೇಲೆ ಬೇಕಾಬಿಟ್ಟಿ ಸ್ಟಿಕ್ಕರ್ ಅಂಟಿಸಿದ್ರೆ ಕಾನೂನು ಕ್ರಮ : ದರ್ಶನ್‌ ಫ್ಯಾನ್ಸ್‌ಗೆ ಆರ್‌ಟಿಒ ಎಚ್ಚರಿಕೆ – vishwanews24

ವಾಹನಗಳ ಮೇಲೆ ಬೇಕಾಬಿಟ್ಟಿ ಸ್ಟಿಕ್ಕರ್ ಅಂಟಿಸಿದ್ರೆ ಕಾನೂನು ಕ್ರಮ : ದರ್ಶನ್‌ ಫ್ಯಾನ್ಸ್‌ಗೆ ಆರ್‌ಟಿಒ ಎಚ್ಚರಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ದರ್ಶನ್ ಅರೆಸ್ಟ್ ನಂತರ ಅವರ ಫ್ಯಾನ್ಸ್  ಅಂಧಾಭಿಮಾನ ಮಿತಿ ಮೀರಿದೆ. ವಾಹನಗಳ ಮೇಲೆ ದರ್ಶನ್ ಕೈದಿ ನಂಬರ್  ಸೇರಿದಂತೆ ತರಹೇವಾರಿ ಸ್ಟಿಕ್ಕರ್‌ಗಳನ್ನು ಅಂಟಿಸಿ ಅಭಿಮಾನ ಮೆರೆಯುತ್ತಿದ್ದಾರೆ. ಅಂತಹ ಅಭಿಮಾನಿಗಳಿಗೆ ಆರ್‌ಟಿಓ ಎಚ್ಚರಿಕೆ ಕೊಟ್ಟಿದೆ.

ಕೊಲೆ ಆರೋಪಿ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆದ್ಮೇಲೆ ಅವರ ಅಭಿಮಾನಿಗಳು ವಾಹನಗಳ ಮೇಲೆ ತರಹೇವಾರಿ ಬರಹ ಬರೆದು ಅಂಧಾಭಿಮಾನ ಮೆರೆಯುತ್ತಿದ್ದಾರೆ. ದರ್ಶನ್‌ಗೆ ನೀಡಿರುವ ಕೈದಿ ಸಂಖ್ಯೆ, ಸೇರಿದಂತೆ ವಾಹನಗಳ  ಮೇಲೆ ಪ್ರಚೋದನಕಾರಿ, ಬೇರೆ ನಟರ ಫ್ಯಾನ್ಸ್‌ಗೆ ಟಾಂಗ್ ಕೊಡುವಂತ ಬರಹಗಳ ಸ್ಟಿಕರ್‌ ಅಳವಡಿಸಿಕೊಂಡಿರುವುದು ಹೆಚ್ಚಾಗಿ ಕಂಡುಬರುತ್ತಿದೆ. ಈ ಬಗ್ಗೆ ನಿಗಾ ವಹಿಸಿರುವ ಪೊಲೀಸರು ಹಾಗೂ ಆರ್‌ಟಿಒ ಇಲಾಖೆ ಅಧಿಕಾರಿಗಳು  ಹದ್ದಿನ ಕಣ್ಣಿಟ್ಟಿದ್ದು, ʻಡಿಬಾಸ್‌ʼ ಅಭಿಮಾನಿಗಳಿಗೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ವಾಹನಗಳ ಮೇಲೆ ಬೇರೆ ಬೇರೆ ರೀತಿಯ ಬರಹಗಳನ್ನು ಅಳವಡಿಸಿಕೊಳ್ಳುವುದು ಹೆಚ್ಚಾಗಿ ಕಂಡುಬರುತ್ತಿದೆ. ಈ ಹಿಂದೆ ಈ ಮಟ್ಟಿಗೆ ಬರಹಗಳನ್ನ ವಾಹನಗಳ ಮೇಲೆ ಹಾಕಿರಲಿಲ್ಲ. ಈ ಬಗ್ಗೆ ಆರ್‌ಟಿಒ ಇಲಾಖೆ ಹಾಗೂ ಪೊಲೀಸ್ ಇಲಾಖೆ ಗಮನಕ್ಕೆ ಬಂದಿದ್ದು, ಅನವಶ್ಯಕ ಬರಹಗಳು ಕಂಡುಬಂದಲ್ಲಿ ಕ್ರಮ ತೆಗೆದುಕೊಳ್ಳೂತ್ತೇವೆ. ನೆಚ್ಚಿನ ನಟರ ಫೋಟೋಗಳನ್ನ ವಾಹನಗಳ ಮೇಲೆ ಹಾಕೋದು ಕಾನೂನು ಬಾಹಿರ ಎಂದು ಹೆಚ್ಚುವರಿ ಸಾರಿಗೆ ಆಯುಕ್ತ ಸಿ. ಮಲ್ಲಿಕಾರ್ಜುನ್ ಎಚ್ಚರಿಸಿದ್ದಾರೆ.

ನಂಬರ್ ಪ್ಲೇಟ್ ಯಾವ ರೀತಿ ಇರಬೇಕು ಎಂದು ಸುಪ್ರೀಂ ಕೋರ್ಟ್‌ ಆರ್‌ಟಿಒ ಇಲಾಖೆಗಳಿಗೆ ನಿರ್ದೇಶನ ಕೊಟ್ಟಿದೆ. ಅದರ ಅನ್ವಯವೇ ಅಧಿಕಾರಿಗಳು ಕೇಸು ದಾಖಲು ಮಾಡುತ್ತಾ ಬಂದಿದ್ದಾರೆ. ಈ ಬಗ್ಗೆ ಜನರಿಗೆ ಅರಿವು ಮೂಡಿಸುವ ಹಾಗೂ ಪ್ರಚಾರ ಮಾಡುವ ಕೆಲಸ ಆರ್‌ಟಿಒ ಇಲಾಖೆ ಮಾಡಿದೆ. ಕಳೆದ 3 ವರ್ಷಗಳಲ್ಲಿ ಈ ಸಂಬಂಧ ಹಲವು ಪ್ರಕರಣ ದಾಖಲು ಮಾಡಿದ್ದೇವೆ. ವಾಹನಗಳ ಮೇಲೆ ಬೇರೆ ಬೇರೆ ಬರಹಗಳನ್ನ ಬರೆಯುತ್ತಿದ್ದಾರೆ. ಯಾರೂ ಸಹ ಅನಾವಶ್ಯಕ ಬರಹಗಳನ್ನ ವಾಹನಗಳ ಮೇಲೆ ಹಾಕಬಾರದು. ಇನ್ಮೇಲೆ ಈ ರೀತಿ ಸ್ಟಾರ್ ವಾರ್ ರೀತಿ ಅನಾವಶ್ಯಕ ಬರಹ, ಟಾಂಗ್‌ ಕೊಡೋ ಬರಹಗಳನ್ನ ತೆಗೆದು ಹಾಕಿ, ಇಲ್ಲ ನಮ್ಮ ಕಠಿಣ ಕ್ರಮ ಗ್ಯಾರಂಟಿ ಅಂತಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

1 day ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

2 days ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

2 days ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

2 days ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

2 days ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

2 days ago