ನವದೆಹಲಿ: ಪಾಕಿಸ್ತಾನದ ಎಫ್ 16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ ಸಾಹಸಕ್ಕಾಗಿ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಗೆ ಕೇಂದ್ರ ಸರ್ಕಾರ ವೀರ ಚಕ್ರ ಪದಕ ಗೌರವ ನೀಡುವುದು ಬಹುತೇಕ ಖಚಿತವಾಗಿದೆ.
ವರ್ಧಮಾನ್ ಅವರಿಗೆ ವೀರ್ ಚಕ್ರ ನೀಡಿ ಗೌರವಿಸುವ ಸಾಧ್ಯತೆ ಇದೆ. ಅದೇ ವೇಳೆ ಬಾಲಾಕೋಟ್ನಲ್ಲಿ ಜೈಷ್- ಎ- ಮೊಹಮ್ಮದ್ ಉಗ್ರ ಶಿಬಿರಗಳ ಮೇಲೆ ವೈಮಾನಿಕ ದಾಳಿ ನಡೆಸಿದ ಮಿರಾಜ್ -2000 ಫೈಟರ್ ವಿಮಾನದ 5 ಪೈಲಟ್ಗಳಿಗೂ ವಾಯುಸೇನೆಯ ಪದಕ ನೀಡಿ ಗೌರವಿಸಲಾಗುವುದು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಫೆಬ್ರುವರಿ 27ರಂದು ಕಾಶ್ಮೀರದ ಗಡಿನಿಯಂತ್ರಣ ರೇಖೆಯಲ್ಲಿ ಪಾಕ್ ವಾಯುಪಡೆಯ ಯುದ್ಧವಿಮಾನಗಳೊಡನೆ ನಡೆದಿದ್ದ ಹೋರಾಟದಲ್ಲಿ ಅಭಿನಂದನ್ ತಮ್ಮ ಮಿಗ್–21 ಯುದ್ಧವಿಮಾನದಿಂದ ಪಾಕಿಸ್ತಾನದ ಎಫ್–16 ಯುದ್ಧವಿಮಾನವನ್ನು ಹೊಡೆದುರುಳಿಸಿದ್ದರು. ಮಿಗ್–21 ಯುದ್ಧವಿಮಾನದಿಂದ ಪಾಕಿಸ್ತಾನದ ಎಫ್–16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ ಘಟನೆ ಇದೇ ಮೊದಲು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
2019 ರ ಫೆಬ್ರವರಿ 27 ರಂದು ಪಾಕಿಸ್ತಾನದ ಯುದ್ಧ ವಿಮಾನಗಳು ಭಾರತದ ವಾಯುಗಡಿ ಉಲ್ಲಂಘಿಸಿ ಪ್ರವೇಶಿಸಲು ಯತ್ನಿಸಿದ್ದವು. ಈ ಸಂದರ್ಭದಲ್ಲಿ ತಮ್ಮ ಮಿಗ್ 21 ಬೈಸನ್ ಯುದ್ದವಿಮಾನದಲ್ಲಿ ಅವುಗಳನ್ನು ಬೆನ್ನಟ್ಟಿಕೊಂಡು ಹೋಗಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಎಫ್ 16 ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿದ್ದರು. ಬಳಿಕ ಅವರು ವಿಮಾನದಿಂದ ಹೊರಜಿಗಿದಿದ್ದರು. ಆದರೆ, ಅವರು ಪಾಕ್ ಆಕ್ರಮಿತ ಕಾಶ್ಮೀರದೊಳಗೆ ಇಳಿದಿದ್ದರಿಂದ ಪಾಕ್ ಸೇನಾ ಪಡೆ ಅವರನ್ನು ಬಂಧಿಸಿತ್ತು. ಪಾಕ್ ಮೇಲೆ ಜಾಗತಿಕವಾಗಿ ಒತ್ತಡ ಹೇರಿದ್ದ ಭಾರತ, ಅಭಿನಂದನ್ ಅವರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡುವಲ್ಲಿ ಯಶಸ್ವಿಯಾಗಿತ್ತು.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…