Featured

ವಿಂಗ್ ಕಮಾಂಡರ್ ಅಭಿನಂದನ್ ಅವರಿಗೆ ಸೇನಾಪಡೆಯ ಅತ್ಯುನ್ನತ ಗೌರವ ನೀಡುವುದು ಬಹುತೇಕ ಖಚಿತ -Vishwanews24

ನವದೆಹಲಿ:  ಪಾಕಿಸ್ತಾನದ ಎಫ್ 16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ ಸಾಹಸಕ್ಕಾಗಿ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಗೆ ಕೇಂದ್ರ ಸರ್ಕಾರ ವೀರ ಚಕ್ರ ಪದಕ ಗೌರವ ನೀಡುವುದು ಬಹುತೇಕ ಖಚಿತವಾಗಿದೆ.

ವರ್ಧಮಾನ್ ಅವರಿಗೆ ವೀರ್ ಚಕ್ರ ನೀಡಿ ಗೌರವಿಸುವ ಸಾಧ್ಯತೆ ಇದೆ. ಅದೇ ವೇಳೆ ಬಾಲಾಕೋಟ್‌ನಲ್ಲಿ  ಜೈಷ್- ಎ- ಮೊಹಮ್ಮದ್ ಉಗ್ರ  ಶಿಬಿರಗಳ ಮೇಲೆ ವೈಮಾನಿಕ ದಾಳಿ ನಡೆಸಿದ ಮಿರಾಜ್ -2000 ಫೈಟರ್ ವಿಮಾನದ 5 ಪೈಲಟ್‌ಗಳಿಗೂ  ವಾಯುಸೇನೆಯ ಪದಕ ನೀಡಿ ಗೌರವಿಸಲಾಗುವುದು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಫೆಬ್ರುವರಿ 27ರಂದು ಕಾಶ್ಮೀರದ ಗಡಿನಿಯಂತ್ರಣ ರೇಖೆಯಲ್ಲಿ ಪಾಕ್ ವಾಯುಪಡೆಯ ಯುದ್ಧವಿಮಾನಗಳೊಡನೆ ನಡೆದಿದ್ದ ಹೋರಾಟದಲ್ಲಿ ಅಭಿನಂದನ್ ತಮ್ಮ ಮಿಗ್–21 ಯುದ್ಧವಿಮಾನದಿಂದ ಪಾಕಿಸ್ತಾನದ ಎಫ್–16 ಯುದ್ಧವಿಮಾನವನ್ನು ಹೊಡೆದುರುಳಿಸಿದ್ದರು. ಮಿಗ್–21 ಯುದ್ಧವಿಮಾನದಿಂದ ಪಾಕಿಸ್ತಾನದ ಎಫ್–16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ ಘಟನೆ ಇದೇ ಮೊದಲು ಎಂದು ತಜ್ಞರು  ಅಭಿಪ್ರಾಯಪಟ್ಟಿದ್ದಾರೆ.

2019 ರ ಫೆಬ್ರವರಿ 27 ರಂದು ಪಾಕಿಸ್ತಾನದ ಯುದ್ಧ ವಿಮಾನಗಳು ಭಾರತದ ವಾಯುಗಡಿ ಉಲ್ಲಂಘಿಸಿ ಪ್ರವೇಶಿಸಲು ಯತ್ನಿಸಿದ್ದವು. ಈ ಸಂದರ್ಭದಲ್ಲಿ ತಮ್ಮ ಮಿಗ್ 21 ಬೈಸನ್ ಯುದ್ದವಿಮಾನದಲ್ಲಿ ಅವುಗಳನ್ನು ಬೆನ್ನಟ್ಟಿಕೊಂಡು ಹೋಗಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಎಫ್ 16 ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿದ್ದರು. ಬಳಿಕ ಅವರು ವಿಮಾನದಿಂದ ಹೊರಜಿಗಿದಿದ್ದರು. ಆದರೆ, ಅವರು ಪಾಕ್ ಆಕ್ರಮಿತ ಕಾಶ್ಮೀರದೊಳಗೆ ಇಳಿದಿದ್ದರಿಂದ ಪಾಕ್ ಸೇನಾ ಪಡೆ ಅವರನ್ನು ಬಂಧಿಸಿತ್ತು. ಪಾಕ್ ಮೇಲೆ ಜಾಗತಿಕವಾಗಿ ಒತ್ತಡ ಹೇರಿದ್ದ ಭಾರತ, ಅಭಿನಂದನ್ ಅವರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡುವಲ್ಲಿ ಯಶಸ್ವಿಯಾಗಿತ್ತು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

16 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago