Featured

ವಿಕಲಚೇತನರಿಗೆ `ಆಧಾರ’ ಯೋಜನೆಯಡಿ 1 ಲಕ್ಷ ರೂ.ವರೆಗೆ ಸಾಲ ಸೌಲಭ್ಯ  – Vishwanews24

ವಿಕಲಚೇತನರಿಗೆ `ಆಧಾರ’ ಯೋಜನೆಯಡಿ 1 ಲಕ್ಷ ರೂ.ವರೆಗೆ ಸಾಲ ಸೌಲಭ್ಯ

ಬೆಂಗಳೂರು : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ವಿಕಲಚೇತನರಿಗೆ ಸ್ವಯಂ ಉದ್ಯೋಗ ಕಲ್ಪಿಸಲು 2022-23ನೇ ಸಾಲಿನ ‘ಆಧಾರ’ ಯೋಜನೆಯಡಿ 1.00 ಲಕ್ಷ ರೂ. ಸಾಲ ಸೌಲಭ್ಯವನ್ನು ನೀಡಲಾಗುತ್ತಿದ್ದು, ಇದರಲ್ಲಿ 50% ಸಬ್ಸಿಡಿಯನ್ನು ಇಲಾಖೆಯು ಭರಿಸಲಿದ್ದು, ಈ ಹಿಂದೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಎಲ್ಲಾ ವಿಕಲಚೇತರು ಹಾಗೂ ಅರ್ಹ ವಿಕಲಚೇತನರು ಕೆಳಕಂಡ ಅಗತ್ಯ ದಾಖಲಾತಿಗಳೊಂದಿಗೆ 2023ರ ಫೆಬ್ರವರಿ 04 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಜಿಲ್ಲೆಯಲ್ಲಿ ಕೆಲವು ವಿಕಲಚೇತನರು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿರುವುದು ಕಂಡು ಬಂದಿರುತ್ತದೆ. ಆದರೆ ಆನ್ಲೈನ್ ಮೂಲಕ ಅರ್ಜಿಗಳನ್ನು ವಿಲೇ ಮಾಡಲು ತಾಂತ್ರಿಕ ಸಮಸ್ಯೆ ಎದುರಾಗುತ್ತಿರುವ ಹಾಗೂ ಆರ್ಥಿಕ ವರ್ಷ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ಅರ್ಜಿಗಳನ್ನು ಆನ್ಲೈನ್ ಮೂಲಕ ವಿಲೇ ಮಾಡಲು ಸಮಯದ ಅಭಾವವಿರುವುದರಿಂದ ಪ್ರಸಕ್ತ ಸಾಲಿನಲ್ಲಿ ಭೌತಿಕವಾಗಿ (ಆಫ್ಲೈನ್) ವಿಲೇ ಮಾಡಲಾಗುವುದು.

ಫಲಾನುಭವಿಗಳಿಗೆ ಇರಬೇಕಾದ ಅರ್ಹತೆಗಳು : ಫಲಾನುಭವಿಗೆ ಶೇ.40 ಅಥವಾ ಅದಕ್ಕಿಂತ ಹೆಚ್ಚು ಅಂಗವಿಕಲತೆ ಇರತಕ್ಕದ್ದು, ಅರ್ಜಿದಾರರ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದವರಿಗೆ ರೂ.11,500/- ಹಾಗೂ ಪಟ್ಟಣ ಪ್ರದೇಶದವರಿಗೆ ರೂ.24,000/- ಗಳನ್ನು ಮೀರಿರಬಾರದು, ಅರ್ಜಿದಾರರು ಕನಿಷ್ಟ ಕೆಳದ 10 ವರ್ಷಗಳಿಂದ ಕರ್ನಾಟಕ ರಾಜ್ಯದಲ್ಲಿ ವಾಸವೀರಬೇಕು, ಅರ್ಜಿದಾರರು ಬ್ಯಾಂಕ್ಗಳಿಗೆ ಹಾಗೂ ಸರ್ಕಾರಕ್ಕೆ ಈ ಹಿಂದೆ ಸುಸ್ತಿದಾರರಾಗಿರಬಾರದು. (ಬ್ಯಾಂಕ್ ಗಳಿಂದ ಬೇಬಾಕಿ ಪ್ರಮಾಣ ಪತ್ರ ಲಗತ್ತಿಸಬೇಕು.), ಫಲಾನುಭವಿಗೆ ಕನಿಷ್ಠ 18 ರಿಂದ 55 ವರ್ಷದೊಳಗಿರಬೇಕು, ಅಂಗವಿಕಲತೆ ಹೊಂದಿರುವ ಬಗ್ಗೆ ಸಂಬಂಧ ಪಟ್ಟ ವೈದ್ಯಕೀಯ ಪ್ರಾಧಿಕಾರದಿಂದ ಪಡೆದ ಅಂಗವಿಕಲರ ಗುರುತಿನ ಚೀಟಿ/ಯು.ಡಿ.ಐ.ಡಿ. ಕಾರ್ಡ್ ಜೆರಾಕ್ಸ್ ಪ್ರತಿ, ಈ ಹಿಂದೆ ಆಧಾರ/ಎನ್.ಹೆಚ್.ಎಫ್.ಡಿ.ಸಿ./ಹಿಂದುಳಿದ ಅಭಿವೃದ್ಧಿ ನಿಗಮ, ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ ಇತರೆ ಯಾವುದೇ ಸರ್ಕಾರ/ಸಂಘ-ಸಂಸ್ಥೆಗಳಿಂದ ಸಾಲ ಸೌಲಭ್ಯ ಪಡೆದಿರಬಾರದು, ಬ್ಯಾಂಕ್ನ ಪಾಸ್ ಬುಕ್ ನಕಲು ಪ್ರತಿ, ಆಧಾರ್ ಕಾರ್ಡ್ ನಕಲು ಪ್ರತಿ ಲಗತ್ತಿಸಬೇಕು.
ಗ್ರಾಮ ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂ, ಪುರಸಭೆ, ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯು.ಆರ್.ಡಬ್ಲ್ಯೂ ಹಾಗೂ ತಾಲ್ಲೂಕು ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂ ರವರಿಂದ ನಿಗಧಿತ ಅರ್ಜಿಯನ್ನು ಪಡೆದು ಅಗತ್ಯ ದಾಖಲಾತಿಗಳೊಂದಿಗೆ ನಿಗಧಿತ ಅವಧಿಯಲ್ಲಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಜಿಲ್ಲಾಡಳಿತ ಭವನ, ನಂ.03 ನೆಲಮಹಡಿ ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ವಿಕಲಚೇತನರ ಸಹಾಯವಾಣಿ ಕೇಂದ್ರ: 080-29787441 ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

13 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

13 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago