Featured

ವಿಕೃತ ಮನಸ್ಥಿತಿಯವರು ಮಾತ್ರ 100 ಕೋಟಿ ಲಸಿಕೆ ಕೊಟ್ಟಿದ್ದೇವೆಂದು ಸಂಭ್ರಮ ಪಟ್ಟು ಪ್ರಚಾರ ಪಡೆಯುತ್ತಾರೆ : ಕಾಂಗ್ರೆಸ್ ಮುಖಂಡ  ಹರಿಪ್ರಸಾದ್ – Vishwanews24

ವಿಕೃತ ಮನಸ್ಥಿತಿಯವರು ಮಾತ್ರ 100 ಕೋಟಿ ಲಸಿಕೆ ಕೊಟ್ಟಿದ್ದೇವೆಂದು ಸಂಭ್ರಮ ಪಟ್ಟು ಪ್ರಚಾರ ಪಡೆಯುತ್ತಾರೆ : ಕಾಂಗ್ರೆಸ್ ಮುಖಂಡ  ಹರಿಪ್ರಸಾದ್ – Vishwanews24

ಪ್ರಧಾನಿ  ಮೋದಿ ಹಾಗೂ ಬಿಜೆಪಿ ನಾಯಕರು ಸಂಭ್ರಮಿಸಿ ಪ್ರಚಾರ ಪಡೆಯುವ ಬದಲು, ದೇಶದ ಜನರಲ್ಲಿ ಕ್ಷಮೆಯಾಚಿಸಬೇಕು ..

ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರದ ಅಸಮರ್ಥತೆಯಿಂದಾಗಿ ಕೋವಿಡ್ ನಿಂದ ದೇಶದಲ್ಲಿ 40 ಲಕ್ಷಕ್ಕೂ ಹೆಚ್ಚು ಜನ ಸತ್ತಿದ್ದಾರೆ. ಜನ ಔಷಧಿ, ಆಕ್ಸಿಜನ್, ಲಸಿಕೆ ಸಿಗದೆ ಪರದಾಟ ನಡೆಸಿದ್ದಾರೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರು 100 ಕೋಟಿ ಡೋಸ್ ಲಸಿಕೆ ಕೊಟ್ಟಿದ್ದೇವೆ ಎಂದು ಸಂಭ್ರಮಿಸಿ ಪ್ರಚಾರ ಪಡೆಯುವ ಬದಲು, ದೇಶದ ಜನರಲ್ಲಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 100 ಕೋಟಿ ಲಸಿಕೆ ಕೊಟ್ಟಿದ್ದೇವೆ ಎಂದು ಸಂಭ್ರಮಿಸುತ್ತಾ ಪ್ರಚಾರ ಪಡೆಯುತ್ತಿರುವ ಕೇಂದ್ರ ಸರ್ಕಾರ, ಸರ್ಕಾರಿ ಆಸ್ಪತ್ರೆಗಳಲ್ಲಿ ಎಷ್ಟು ಲಸಿಕೆ, ಖಾಸಗಿ ಆಸ್ಪತ್ರೆಗಳಲ್ಲಿ ಎಷ್ಟು ಲಸಿಕೆ ನೀಡಲಾಗಿದೆ ಎಂಬುದನ್ನು ಜನರಿಗೆ ತಿಳಿಸಲಿ. ಇಂದು ದೇಶದ ಪ್ರಧಾನಮಂತ್ರಿಗಳು ಹಾಗೂ ಆರೋಗ್ಯ ಸಚಿವರು 100 ಕೋಟಿ ಲಸಿಕೆ ನೀಡಿದ್ದೇವೆ ಎಂದು ಸಂಭ್ರಮಿಸುತ್ತಿದ್ದಾರೆ. ಕೋವಿಡ್ ಇಡೀ ವಿಶ್ವದಲ್ಲಿ ಜನರನ್ನು ಯಾವ ರೀತಿ ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ನಾವೆಲ್ಲರೂ ನೋಡಿದ್ದೇವೆ. ಈ ಸಮಯದಲ್ಲಿ ಜನರಿಗೆ ಸ್ಪಂದಿಸುವ ವಿಚಾರದಲ್ಲಿ ಸರ್ಕಾರ ಹಾಗೂ ನಾವೆಲ್ಲ ವಿಫಲರಾಗಿದ್ದೇವೆ. ಈ ಸಂದರ್ಭದಲ್ಲಿ ಜನ ಸರ್ಕಾರದ ಮೇಲೆ ಅವಲಂಬಿಸುವುದು ಸಹಜ. ವಿರೋಧ ಪಕ್ಷವಾಗಿ ನಾವು ಎಲ್ಲ ರೀತಿಯ ಸಹಕಾರ ನೀಡಿದ್ದೇವೆ ಎಂದರು.

100 ಕೋಟಿ ಲಸಿಕೆ ವಿಚಾರ ಸಂಭ್ರಮಿಸುವ ವಿಚಾರವಲ್ಲ. ಪ್ರತಿಯೊಬ್ಬ ನಾಗರೀಕನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಕೋವಿಡ್ ಮಹಾಮಾರಿ ಸಂಕಟ ತಟ್ಟಿದೆ. ಈ ಮಧ್ಯೆ ಎಷ್ಟು ಜನ ಸತ್ತಿದ್ದಾರೆ ಎಂಬ ನೈಜ ಅಂಕಿ ಅಂಶ ಸರ್ಕಾರ ನೀಡುತ್ತಿಲ್ಲ. ಕೋವಿಡ್ ಬಂದಾಗ ಅವೈಜ್ಞಾನಿಕವಾಗಿ ಗಂಟೆ, ತಟ್ಟೆ ಬಾರಿಸಿದರೆ ಹೊರತು, ಅದನ್ನು ಯಾವ ರೀತಿ ಎದುರಿಸಬೇಕು ಎಂದು ಹೇಳುವ ಪ್ರಯತ್ನ ಮಾಡಲಿಲ್ಲ. ಆರೋಗ್ಯ ಸಚಿವರು ಇಂದು ನೀಡಿರುವ ಮಾಹಿತಿಯಲ್ಲಿ ಈ 100 ಕೋಟಿ ಲಸಿಕೆ ಕೊಟ್ಟಿರೋದು 1 ಲಸಿಕೆ ಮಾತ್ರ. ಅದಕ್ಕೆ ಇವರು ಸಂಭ್ರಮಿಸುತ್ತಿದ್ದಾರೆ. 70 ಕೋಟಿ ಜನರಿಗೆ ಒಂದು ಡೋಸ್, ಕೇವಲ 20-30 ಕೋಟಿ ಜನರಿಗೆ 2 ಡೋಸ್ ಲಸಿಕೆ ನೀಡಲಾಗಿದೆ. ಇಡೀ ವಿಶ್ವದಲ್ಲೇ ಲಸಿಕೆ ಉತ್ಪಾದನೆಯಲ್ಲಿ ಅಗ್ರಸ್ಥಾನ ಪಡೆದಿರುವ ಭಾರತದಲ್ಲಿ ಇಷ್ಟು ದಿನಗಳಲ್ಲಿ ಕೇವಲ ಒಂದು ಡೋಸ್ ಮಾತ್ರ ನೀಡುತ್ತಿರುವುದು ಸಂಭ್ರಮಿಸುವ ವಿಚಾರವೇ?’ ಬೇರೆ ರಾಷ್ಟ್ರಗಳಲ್ಲಿ ಈಗಾಗಲೇ ಎರಡು ಡೋಸ್ ಗಳ ಬಳಿಕ ಬೂಸ್ಟರ್ ಡೋಸ್ ನೀಡಲಾಗುತ್ತಿದೆ. ಆದರೆ ಈ ಬಗ್ಗೆ ಪ್ರಧಾನಮಂತ್ರಿಗಳು ಮಾತನಾಡುತ್ತಿಲ್ಲ. ಇಂತಹ ವಿಚಾರವಾಗಿ ಅವರು ಮಾತನಾಡಿ ಜನರಿಗೆ ಧೈರ್ಯ ತುಂಬಬೇಕಾಗಿದೆ ಎಂದು ಹರಿಪ್ರಸಾದ್ ಹೇಳಿದರು.

ವಿಕೃತ ಮನಸ್ಥಿತಿಯವರು ಮಾತ್ರ 100 ಲಸಿಕೆ ಕೊಟ್ಟಿದ್ದೇವೆ ಎಂದು ಸಂಭ್ರಮ ಪಟ್ಟು ಪ್ರಚಾರ ಪಡೆಯುತ್ತಾರೆ. ದೇಶದ ಜನರಿಗೆ ಇಷ್ಟು ದಿನವಾದರೂ 2 ಡೋಸ್ ನೀಡಲು ಆಗಿಲ್ಲ, ಜನರು ಕಷ್ಟ ಅನುಭವುಸಿದ್ದು, ಈಗ ಸಂಭ್ರಮಿಸುವ ಬದಲು ಕ್ಷಮೆ ಕೋರಲಿ ಎಂದು ಆಗ್ರಹಿಸಿದರು.

 

Vishwa News 24

Recent Posts

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

4 minutes ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

14 minutes ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

19 minutes ago

ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ – vishwanews24

ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ ಮೂಡುಬಿದಿರೆ: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಕಾಂತಾವರ ಕ್ರಾಸ್…

33 minutes ago

ಎಲ್ಲರ ಸಹಕಾರ ಮುಂದೆಯು ಹೀಗೆ ಇರಲಿ : ಮಂತ್ರಿಗಳಿಗೆ ಡಿಕೆಶಿ ಮನವಿ – vishwanews24

ಎಲ್ಲರ ಸಹಕಾರ ಮುಂದೆಯು ಹೀಗೆ ಇರಲಿ : ಮಂತ್ರಿಗಳಿಗೆ ಡಿಕೆಶಿ ಮನವಿ ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ …

51 minutes ago

ಮಂಗಳೂರು : ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ: ಪರಾರಿಯಾಗಿದ್ದ ಇಬ್ಬರು ಆರೋಪಿಗಳ ಬಂಧನ – vishwanews24

ಮಂಗಳೂರು : ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ: ಪರಾರಿಯಾಗಿದ್ದ ಇಬ್ಬರು ಆರೋಪಿಗಳ ಬಂಧನ ಮಂಗಳೂರು : ರಾತ್ರಿ…

1 hour ago