ನವದೆಹಲಿ : ಸೆ.12 ವಿಚಾರಣೆಗೆ ಬರುವಂತೆ ಇಡಿಯಿಂದ ಡಿ.ಕೆ ಶಿವಕುಮಾರ್ ಅವರ ಐಶ್ವರ್ಯ ಅವರಿಗೆ ಸಮನ್ಸ್ ನೀಡಿದೆ.
ಸೆ.12 ರಂದು ಬೆಳಗ್ಗೆ 11 ಗಂಟೆಗೆ ಇಡಿ ಕೇಂದ್ರ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲು ಐಶ್ವರ್ಯ ಅವರಿಗೆ ಸೂಚನೆ ನೀಡಲಾಗಿದೆ. ಡಿಕೆ ಶಿವಕುಮಾರ್ ಅವರ ಕಸ್ಟಡಿಯ ಅವಧಿ ಇದೇ 13 ರಂದು ಮುಕ್ತಾಯವಾಗುತ್ತಿರುವುದರಿಂದ 12 ರಂದೇ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿರುವುದು ವಿಶೇಷವಾಗಿದೆ.
2017ರ ನವೆಂಬರ್ ತಿಂಗಳಿನಲ್ಲಿ ಶಿವಕುಮಾರ್ ತಾಯಿ ಗೌರಮ್ಮ, ಪತ್ನಿ ಉಷಾ, ಪುತ್ರಿ ಐಶ್ವರ್ಯ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಆದಾಯ ತೆರಿಗೆ ಕಚೇರಿಯಲ್ಲಿ ಪ್ರತ್ಯೇಕವಾಗಿ ವಿಚಾರಣೆಗೆ ಹಾಜರಾಗಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ್ದರು. ಈಗ ಮತ್ತೆ ವಿಚಾರಣೆಗೆ ಬರುವಂತೆ ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಬರುವಂತೆ ಇಡಿ ಹೇಳಿದೆ.
ಈ ಹಿಂದೆ ಐಟಿ ವಿಚಾರಣೆ ವೇಳೆಯಲ್ಲಿ ನನ್ನ ಮಗಳು ಐಶ್ವರ್ಯ ಸ್ವತಂತ್ರವಾಗಿ ವ್ಯಾಪಾರ ಮಾಡುವ ಉದ್ದೇಶದಿಂದ ಸೋಲ್ ಸ್ಪೇಸ್ ಅರೇನಾದಲ್ಲಿ ಶೇ.50ರಷ್ಟು ಷೇರು ಖರೀದಿಗೆ ಒಪ್ಪಂದ ಮಾಡಿಕೊಂಡಿದ್ದಾಳೆ. ಇದಕ್ಕಾಗಿ ಆಕೆ, ರಿಯಲ್ ಎಸ್ಟೇಟ್ ಪ್ರಾಪರ್ಟಿಗಳಲ್ಲಿ ಷೇರು ಖರೀದಿಸಿ, ಪ್ರತ್ಯೇಕವಾಗಿ ರಿಯಲ್ ಎಸ್ಟೇಟ್ ಬಿಸಿನೆಸ್ ಆರಂಭಿಸಿದ್ದಾಳೆ. ಅದಕ್ಕೆ ಐಟಿ ರಿಟರ್ನ್ ಸಲ್ಲಿಸುತ್ತಿದ್ದಾಳೆ,’ ಎಂದು ಡಿ.ಕೆ ಶಿವಕುಮಾರ್ ಐಟಿ ಅಧಿಕಾರಿಗಳಿಗೆ ವಿವರಣೆ ನೀಡಿದ್ದರು. ಆದರೆ ಆದರೆ, ಮಗಳು ಕೋಟ್ಯಂತರ ರೂ. ಸಾಲ ಪಡೆದಿರುವುದಕ್ಕೆ ಪ್ರತಿಯಾಗಿ ಭದ್ರತೆ ರೂಪದಲ್ಲಿ ನೀಡಿರುವ ಸ್ವತ್ತು ಅಥವಾ ಗ್ಯಾರಂಟಿ ಕುರಿತು ಮಾಹಿತಿ ನೀಡಿಲ್ಲ ಹೀಗಾಗಿ ಈಗ ಇಡಿ ವಿಚಾರಣೆಗೆ ಬರುವಂತೆ ಹೇಳಿದೆ.
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…
ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ : ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…