Featured

ವಿಚ್ಛೇದಿತ ಮಹಿಳೆಯನ್ನ ಮದುವೆಯಾಗಿ ವಂಚನೆ :  ಚಿನ್ನಾಭರಣ ಸೇರಿ 36 ಲಕ್ಷ ರೂ. ಪಡೆದು ಎಸ್ಕೇಪ್‌ – vishwanews24

ವಿಚ್ಛೇದಿತ ಮಹಿಳೆಯನ್ನ ಮದುವೆಯಾಗಿ ವಂಚನೆ :  ಚಿನ್ನಾಭರಣ ಸೇರಿ 36 ಲಕ್ಷ ರೂ. ಪಡೆದು ಎಸ್ಕೇಪ್‌

ಬೆಂಗಳೂರು: ವಿಚ್ಛೇದಿತ ಮಹಿಳೆಯನ್ನ ಬಣ್ಣದ ಮಾತುಗಳಿಂದ ಯಾಮಾರಿಸಿ ಬಾಳು ಕೋಡೋದಾಗಿ ಮದುವೆಯಾಗಿದ್ದ ಮೋಹನ್ ರಾಜ್ ಎಂಬಾತನ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. ಚಿನ್ನಾಭರಣ ಸೇರಿ ಒಟ್ಟು 36 ಲಕ್ಷ ರೂ. ವಂಚನೆ ಮಾಡಿರುವ ಆರೋಪದ ಮೇಲೆ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಮೋಹನ್‌ ರಾಜ್‌ ಎಂಬಾತ ಮಹಿಳೆಗೆ ಬಾಳು ಕೊಡೋದಾಗಿ ಮದ್ವೆ ಆಗಿದ್ದ. ಮಗು ಕೂಡ ಆಗಿತ್ತು. ಆ ಬಳಿಕ ಹೊಸ ಮನೆ ಕಟ್ಟಿ ಹೊಸ ಜೀವನ ಶುರು ಮಾಡೋಣ ಅಂತಿದ್ದ ಮೋಹನ ಮಹಿಳೆಯಿಂದ ಹಣ ಪೀಕಿದ್ದ. ಚಿನ್ನಾಭರಣ ಸೇರಿ 36 ಲಕ್ಷ ಹಣ ಪಡೆದು ಎಸ್ಕೇಪ್‌ ಆಗಿದ್ದಾನೆ. ಇದೀಗ ನ್ಯಾಯಕ್ಕಾಗಿ ಮಹಿಳೆ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾಳೆ.

ಏನಿದು ಕೇಸ್‌?
ಮೋಹನ್ ರಾಜ್​ ಹಾಗೂ ಮಹಿಳೆ ಒಂದೇ ಏರಿಯಾದವರು. ಬನಶಂಕರಿಯಲ್ಲಿ ನೆಲೆಸಿದ್ದ ಮೋಹನ್​ಗೆ ಮಹಿಳೆ ಡಿವೋರ್ಸ್ ಕಥೆ ಗೊತ್ತಾಗಿದೆ. ಆಕೆಗೆ ಹಲವು ವರ್ಷಗಳಿಂದ ಪರಿಚಿತನಾಗಿದ್ದ ಈತ, ಇಬ್ಬರು ಮದುವೆಯಾಗೋಣ ಹೊಸ ಜೀವನ ನಡೆಸೋಣ ಅಂತ ಮಾತು ಕೊಟ್ಟು ತಾಳಿಕಟ್ಟಿದ್ದಾನೆ. ಬಳಿಕ ತನ್ನ ವರಸೆಯನ್ನೇ ಬದಲಿಸಿದ್ದಾನೆ. ಹೀಗಾಗಿ ಮಹಿಳೆ ಕಂಗಾಲಾಗಿದ್ದಾಳೆ.

ಮೋಹನ್‌ ರಾಜ್‌ ಮತ್ತು ಮಹಿಳೆ 10 ವರ್ಷಗಳಿಂದ ಪರಿಚಿತರು. 2022 ರಲ್ಲಿ ಮಹಿಳೆ ಜೊತೆಗೆ ಮೋಹನ್ ರಾಜ್ ವಿವಾಹ ನಡೆದಿದ್ದು. 2023 ರಲ್ಲಿ ದಂಪತಿಗೆ ಒಂದು ಹೆಣ್ಣು ಮಗು ಕೂಡ ಆಗಿತ್ತು. ಬಳಿಕ 2025 ರಲ್ಲಿ ಮನೆ ಬಿಟ್ಟು ಹೋದವನು ನಾಪತ್ತೆಯಾಗಿದ್ದಾನೆ. ಈ ಪ್ರಕರಣ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

9 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

10 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

10 hours ago