ವಿಜಯಪುರ : ಗಣಪತಿ ವಿಸರ್ಜನೆ ವೇಳೆ ಕರೆಂಟ್ ವೈಯರ್ ಅನ್ನು ಮೇಲೆ ಮಾಡಲು ಹೋಗಿ ಯುವಕನೊಬ್ಬ ಕರೆಂಟ್ ಶಾಕ್ ಗೆ ಸಾವನಪ್ಪಿದ ಘಟನೆ ವಿಜಯಪುರ ನಗರದ ಗಾಂಧಿಚೌಕ್ ವೃತ್ತದ ಟಾಂಗಾ ಸ್ಟ್ಯಾಂಡ್ ಬಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ಯುವಕರ ಸ್ಥಿತಿ ಚಿಂತಾಜನಕವಾಗಿದೆ.
ನಗರದ ಡೋಬಲೆ ಗಲ್ಲಿ ನಿವಾಸಿ ಶುಭಂ ಸಂಕಳ (21) ಮೃತ ದುರ್ದೈವಿ. ಸೋಲಾಪುರದ ಡಿಜೆ ಯುವಕ ಪ್ರಭಾಕರ್ ಜಂಗಲೆ (22), ಡೋಬಲೆ ಗಲ್ಲಿಯ ಲಖನ್ ಶ್ರೀಕಾಂತ್ ಚವ್ಹಾಣ್ (28) ಸ್ಥಿತಿ ಗಂಭೀರವಾಗಿದೆ.
7ನೇ ದಿನ ಗಣೇಶನ ವಿಸರ್ಜನೆಗೆ ಮೂರ್ತಿಯನ್ನು ಸಾಗಿಸುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಗಣೇಶ ಮೆರವಣಿಗೆ ವೇಳೆ ಯುವಕರು ಡಿಜೆ ಬಾಕ್ಸ್ ಮೇಲೆ ಕುಳಿತು ಕೋಲಿನಿಂದ ವಿದ್ಯುತ್ ತಂತಿಯನ್ನು ಎತ್ತಿದ್ದರು. ಈ ವೇಳೆ ವಿದ್ಯುತ್ ಪ್ರವಹಿಸಿ ಶುಭಂ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನುಳಿದ ಇಬ್ಬರು ಯುವಕರ ಸ್ಥಿತಿ ಚಿಂತಾಜನಕವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…