Featured

ವಿಜಯಪುರ  : 53 ನಿಮಿಷಗಳ ಅಂತರದಲ್ಲಿ ಎರಡು ಬಾರಿ ಕಂಪಿಸಿದ ಭೂಮಿ ; ಜನರಲ್ಲಿ ಆತಂಕ – vishwanews24

ವಿಜಯಪುರ  : 53 ನಿಮಿಷಗಳ ಅಂತರದಲ್ಲಿ ಎರಡು ಬಾರಿ ಕಂಪಿಸಿದ ಭೂಮಿ ; ಜನರಲ್ಲಿ ಆತಂಕ

ವಿಜಯಪುರ: ವಿಜಯಪುರ ನಗರದ ಸುತ್ತಲೂ ಐದು ದಿನಗಳ ಅಂತರದಲ್ಲಿ ಭಾನುವಾರ ತಡರಾತ್ರಿ ಮತ್ತೆ ಎರಡು ಬಾರಿ ಲಘು ಭೂಕಂಪನ‌ಗಳು ಸಂಭವಿಸಿವೆ.

ಜಿಲ್ಲೆಯ ಮನಗೂಳಿ ಪರಿಸರದಲ್ಲಿ ಕೇಂದ್ರಿತವಾಗಿದ್ದ ಎರಡೂ ಭೂಕಂಪನಗಳು 2.6 ತೀವ್ರತೆ ಹೊಂದಿದ್ದವು. ಎರಡು ಬಾರಿ ಭೂಕಂಪನಗಳು ಸಂಭವಿಸಿದರೂ ಯಾವುದೇ ಅಪಾಯ ಸಂಭವಿಸಿಲ್ಲ.

53 ನಿಮಿಷಗಳ ಅಂತರದಲ್ಲಿ ಎರಡು ಬಾರಿ ಭೂಮಿ ಕಂಪಿಸಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ, ಯರನಾಳ ಗ್ರಾ.ಪಂ. ಪರಿಸರದ ಹತ್ತರಕಿಹಾಳ, ನಂದಿಹಾಳ, ವಿಜಯಪುರ ನಗರದ ವಿವಿಧ ಬಡಾವಣೆಗಳ ವ್ಯಾಪ್ತಿಯಲ್ಲಿ ಸರಣಿ ಭೂಕಂಪನಗಳು ಸಂಭವಿಸಿರುವುದು ದೃಢಪಟ್ಟಿದೆ.

ವಿಜಯಪುರ ನಗರದ ಜಲನಗರ, ಇಬ್ರಾಹಿಂಪುರ, ಗಣೇಶನಗರ, ಕೀರ್ತಿನಗರ, ಬಸವನಗರ, ವಜ್ರಹನುಮಾನ ಪ್ರದೇಶ ಹೀಗೆ ವಿವಿಧ ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ.

ಮೊದಲ ಭೂಕಂಪ ಭಾನುವಾರ ಮಧ್ಯರಾತ್ರಿ 12 ಗಂಟೆ 22ನಿಮಿಷ 52 ಸೆಕೆಂಡಿಗೆ ಸಂಭವಿಸಿದ್ದು, ಭೂಮಿಯ 5 ಕಿ.ಮೀ. ಆಳದಲ್ಲಿ ಕೇಂದ್ರೀಕೃತವಾಗಿತ್ತು.

ಇದಾದ 53 ನಿಮಿಷಕ್ಕೆ ಅಂದರೆ ಮಧ್ಯರಾತ್ರಿ 1 ಗಂಟೆ 15 ನಿಮಿಷ 14 ಸೆಕೆಂಡಿಗೆ ಸಂಭವಿಸಿದ ಎರಡನೇ ಭೂಕಂಪ ಭೂಮಿಯ 7 ಕಿ.ಮೀ. ಆಳದಲ್ಲಿ ಕೇಂದ್ರೀತ ವಾಗಿತ್ತು. ಎರಡೂ ಭೂಕಂಪನಗಳು 2.6 ತೀವ್ರತೆ ಹೊಂದಿದ್ದವು.

ಗಾಢ ನಿದ್ದೆಯಲ್ಲಿದ್ದ‌ ಜನರಿಗೆ ಭೂಮಿ ನಡುಗುವ ಅನುಭವ ಆಗುತ್ತಲೇ ಮನೆಗಳ ಗೋಡೆಗಳಿಗೆ ಹಾಕಿದ್ದ ಪಾತ್ರೆಗಳು ಸೇರಿದಂತೆ ಇತರೆ ವಸ್ತುಗಳು ಅಲುಗಾಡಿ ಸದ್ದು ಮಾಡಿವೆ.ಜನರು ಗಾಢ ನಿದ್ರೆಯಲ್ಲಿದ್ದರೂ ಎಚ್ಚರಗೊಂಡ ಹಲವರು ತಮ್ಮ ಮನೆಯವರನ್ನು ಎಬ್ಬಿಸಿಕೊಂಡು ಹೊರಗೆ ಓಡಿ ಬಂದಿದ್ದಾರೆ.

ಜಿಲ್ಲೆಯಲ್ಲಿ ಗುರುವಾರವಷ್ಟೇ ಲಘು ಭೂಕಂಪನ ಸಂಭವಿಸಿದ್ದು, ಇದೀಗ ಐದು ದಿನಗಳ ಅಂತರದಲ್ಲಿ ಮತ್ತೊಮ್ಮೆ ಸರಣಿ ಭೂಕಂಪ ಸಂಭವಿಸಿರುವುದು ಜನರಲ್ಲಿ ಆತಂಕ ಮೂಡುವಂತೆ ಮಾಡಿದೆ.

ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ ಆಗಿರುವುದನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ದೃಢೀಕರಿಸಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಲಘು ಭೂಕಂಪನ ಅಪಾಯ ರಹಿತವಾಗಿದ್ದು, ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ರಾಜ್ಯದ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮನವಿ ಮಾಡಿದೆ.

Vishwa News 24

Recent Posts

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

1 day ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

1 day ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

1 day ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

1 day ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

1 day ago

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ – vishwanews24

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…

1 day ago