ಮಂಗಳೂರು, : ವಿಜಯಾ ಬ್ಯಾಂಕ್ ಅನ್ನು ಬ್ಯಾಂಕ್ ಆಫ್ ಬರೋಡಾ, ದೇನಾ ಬ್ಯಾಂಕ್ನೊಂದಿಗೆ ವಿಲೀನ ಮಾಡುವ ಕೇಂದ್ರ ಸರಕಾರದ ನಿರ್ಧಾರವನ್ನು ವಿರೋಧಿಸಿ ಜವನರಿ 9 ರಂದು ಮಂಗಳೂರು ಬಂದ್ಗೆ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಕರೆ ನೀಡಿದೆ.
ಜ.6ರ ಭಾನುವಾರ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ, ಕೇಂದ್ರ ಸರಕಾರದ ನಿರ್ಧಾರ ವಿರೋಧಿಸಿ ಜ.9ರಂದು ಬಂದ್ ನಡೆಸಲಾಗುವುದು ಎಂದರು.
ಲಾಭದಲ್ಲಿರುವ ಕರಾವಳಿ ಮೂಲದ ವಿಜಯಾ ಬ್ಯಾಂಕ್ ಅನ್ನು ನಷ್ಟದಲ್ಲಿರುವ ಗುಜರಾತ್ ಮೂಲದ ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆ ನಡೆಯುತ್ತಿದ್ದರೂ, ಸಂಸದ ನಳಿನ್ಕುಮಾರ್ ಕಟೀಲ್ ಮೌನ ವಹಿಸಿರುವುದು ಯಾಕೆ, ಪ್ರಧಾನಿಯವರಿಗೆ ಸಂಸದರು ಜಿಲ್ಲೆಯನ್ನು ಒತ್ತೆ ಇಟ್ಟಿದ್ದಾರೆಯೇ ಎಂದು’ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಈ ಪ್ರತಿಭಟನೆಗೆ ಸಂಸದರು ಕೂಡಾ ಬೆಂಬಲ ನೀಡಲಿ ಎಂದು ಒತ್ತಾಯಿಸಿದರು.
ವಿಜಯಾ ಬ್ಯಾಂಕ್ ವಿಲೀನ ವಿರೋಧಿಸಿ ಜನವರಿ 9 ರಂದು ಮಂಗಳೂರು ಬಂದ್ ಗೆ ಕರೆ ನೀಡುವುದಾಗಿ ತಿಳಿಸಿದ ಅವರು ಜನವರಿ 9ರಂದು ಬೆಳಗ್ಗೆ 6ರಿಂದ ಸಂಜೆ 4 ರವರೆಗೆ ಜಿಲ್ಲೆಯನ್ನು ಬಂದ್ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…