ಮಂಗಳೂರು, : ವಿಜಯಾ ಬ್ಯಾಂಕ್ ಅನ್ನು ಬ್ಯಾಂಕ್ ಆಫ್ ಬರೋಡಾ, ದೇನಾ ಬ್ಯಾಂಕ್ನೊಂದಿಗೆ ವಿಲೀನ ಮಾಡುವ ಕೇಂದ್ರ ಸರಕಾರದ ನಿರ್ಧಾರವನ್ನು ವಿರೋಧಿಸಿ ಜವನರಿ 9 ರಂದು ಮಂಗಳೂರು ಬಂದ್ಗೆ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಕರೆ ನೀಡಿದೆ.
ಜ.6ರ ಭಾನುವಾರ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ, ಕೇಂದ್ರ ಸರಕಾರದ ನಿರ್ಧಾರ ವಿರೋಧಿಸಿ ಜ.9ರಂದು ಬಂದ್ ನಡೆಸಲಾಗುವುದು ಎಂದರು.
ಲಾಭದಲ್ಲಿರುವ ಕರಾವಳಿ ಮೂಲದ ವಿಜಯಾ ಬ್ಯಾಂಕ್ ಅನ್ನು ನಷ್ಟದಲ್ಲಿರುವ ಗುಜರಾತ್ ಮೂಲದ ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆ ನಡೆಯುತ್ತಿದ್ದರೂ, ಸಂಸದ ನಳಿನ್ಕುಮಾರ್ ಕಟೀಲ್ ಮೌನ ವಹಿಸಿರುವುದು ಯಾಕೆ, ಪ್ರಧಾನಿಯವರಿಗೆ ಸಂಸದರು ಜಿಲ್ಲೆಯನ್ನು ಒತ್ತೆ ಇಟ್ಟಿದ್ದಾರೆಯೇ ಎಂದು’ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಈ ಪ್ರತಿಭಟನೆಗೆ ಸಂಸದರು ಕೂಡಾ ಬೆಂಬಲ ನೀಡಲಿ ಎಂದು ಒತ್ತಾಯಿಸಿದರು.
ವಿಜಯಾ ಬ್ಯಾಂಕ್ ವಿಲೀನ ವಿರೋಧಿಸಿ ಜನವರಿ 9 ರಂದು ಮಂಗಳೂರು ಬಂದ್ ಗೆ ಕರೆ ನೀಡುವುದಾಗಿ ತಿಳಿಸಿದ ಅವರು ಜನವರಿ 9ರಂದು ಬೆಳಗ್ಗೆ 6ರಿಂದ ಸಂಜೆ 4 ರವರೆಗೆ ಜಿಲ್ಲೆಯನ್ನು ಬಂದ್ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…