ಕಲಬುರಗಿ: ಒಂದು ವೇಳೆ ಬಿ.ವೈ.ವಿಜಯೇಂದ್ರರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮರು ಆಯ್ಕೆ ಮಾಡಿದರೆ, ನಮ್ಮ ನಿರ್ಣಯ ತಿಳಿಸುತ್ತೇವೆ. ನಮ್ಮ ಹೋರಾಟವಂತೂ ಮುಂದುವರಿಯುತ್ತದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಪಕ್ಷದ ವರಿಷ್ಠರನ್ನು ಎಚ್ಚರಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಸೇಡಂ ಬಳಿಯ ಬೀರನಳ್ಳಿ ಕ್ರಾಸ್ನಲ್ಲಿ ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷನಾಗಿ ಮುಂದುವರಿಯುವುದಾಗಿ ವಿಜಯೇಂದ್ರರ ಹೇಳಿಕೆ ಬಗ್ಗೆ ಈ ರೀತಿ ಪ್ರತಿಕ್ರಿಯಿಸಿದರು.
ಚುನಾವಣೆ ನಡೆದು ವಿಜಯೇಂದ್ರ ಮತ್ತೊಮ್ಮೆ ರಾಜ್ಯಾಧ್ಯಕ್ಷ ಆಗಲಿ. ಬೇಡ ಅಂದವರಾರು.? ಅಲ್ಲಿವರೆಗೂ ನನಗೆ ಓಟ್ ಹಾಕಿ ನನಗೆ ಓಟ್ ಹಾಕಿ ಅಂತ ಕೈ ಮುಗಿದು ಅವರು ಓಡಾಡಬೇಕಲ್ವಾ.? ಕೆಲವರಿಗೆ ಕೈ ಮುಗಿಯೋದಾದರು ನಾವು ಕಲಿಸಿದ ಹಾಗೆ ಆಗುತ್ತದೆ ಎಂದು ಯತ್ನಾಳ್ ವ್ಯಂಗ್ಯವಾಡಿದರು
ಮಾಜಿ ಸಚಿವ ಶ್ರೀರಾಮುಲು ರಾಜ್ಯಾಧ್ಯಕ್ಷ ಆದರೆ ನಮ್ಮದೇನೂ ತಕರಾರಿಲ್ಲ. ಅವರೂ ನಮ್ಮವರೆ. ಅವರಾದರೆ, ನಮ್ಮ ಬೆಂಬಲ ಇರುತ್ತೆ. ರಾಜ್ಯದ ಎಲ್ಲಾ ಸಂಸದರು ನಮ್ಮ ಜೊತೆಗಿದ್ದಾರೆ. ವಿಜಯೇಂದ್ರ ಒಬ್ಬರನ್ನು ಬಿಟ್ಟು, ಯತ್ನಾಳ್ ರಾಜ್ಯಾಧ್ಯಕ್ಷ ಆಗಬೇಕು ಎಂಬ ಕೂಗಿದು, ಏನಾಗುತ್ತೋ ನೋಡೋಣ ಎಂದರು.
ನಮ್ಮ ಬಣದಿಂದ ಯಾರು ಸ್ಪರ್ಧೆ ಮಾಡುತ್ತಾರೆ ಎಂಬುದರ ಕುರಿತು ಚರ್ಚಿಸಿ ನಿರ್ಣಯ ತೆಗೆದುಕೊಳ್ಳುತ್ತೇವೆ. ನಮ್ಮ ಪಕ್ಷದ ಹೈಕಮಾಂಡ್ ಜಾತಿ ಲೆಕ್ಕಾಚಾರ ನೋಡಿಕೊಂಡು ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆ ಇದ್ದು, ಅದೇ ಜಾತಿಯವರನ್ನು ನಾವು ಕೂಡಾ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸುವುದು ಖಂಡಿತ ಎಂದು ಯತ್ನಾಳ್ ಹೇಳಿದರು.
ರಾಮಮಂದಿರ ವಿರೋಧಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ : ಯೋಗಿ ಆದಿತ್ಯನಾಥ್ ಲಖ್ನೋ(ಉ.ಪ್ರ) : ರಾಮಮಂದಿರ ನಿರ್ಮಾಣದ ವಿರುದ್ಧ ನ್ಯಾಯಾಲಯಕ್ಕೆ ಹೋದವರು…
ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ ಉಡುಪಿ: ಇತ್ತೀಚೆಗೆ ನ್ಯಾಯಯುತವಾದ…
ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್ಕಾರ್ಟ್ : ಭಾರಿ ದಂಡ ವಿಧಿಸಿದ ಮುಂಬೈನ ಗ್ರಾಹಕ ನ್ಯಾಯಾಲಯ ಮುಂಬೈ: ಆನ್ಲೈನ್ನಲ್ಲಿ ಲಕ್ಷಾಂತರ…
ಕೇಂದ್ರದ ಭರವಸೆಯ ಬಳಿಕ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ ನವದೆಹಲಿ: ಹೋರಾಟಗಾರ ಹಾಗೂ ಲಡಾಖ್ನ ಸಾಮಾಜಿಕ ಕಾರ್ಯಕರ್ತ…
ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಬೆಂಗಳೂರು: ತುಳುವೆರೆ ಚಾವಡಿಯ 28ನೇ ವರ್ಷದ "ಪರ್ಬದ…
ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಚಿರತೆ ಪ್ರತ್ಯಕ್ಷ ; ವಾಹನ ಸವಾರರಲ್ಲಿ ಆತಂಕ ಬೆಳ್ತಂಗಡಿ,: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು…