Featured

ವಿಜಯ್  ಅವರು ತಮ್ಮ ಜೀವನದಲ್ಲಿ ಸಂತೋಷವಾಗಿರಲಿ; ಉಳಿದದ್ದನ್ನು ಕಾಲಕ್ಕೂ ಕರ್ಮಕ್ಕೂ ಬಿಡುತ್ತೇನೆ : ನಾಗರತ್ನ ಪ್ರತಿಕ್ರಿಯೆ -vishwanews24

ವಿಜಯ್  ಅವರು ತಮ್ಮ ಜೀವನದಲ್ಲಿ ಸಂತೋಷವಾಗಿರಲಿ; ಉಳಿದದ್ದನ್ನು ಕಾಲಕ್ಕೂ ಕರ್ಮಕ್ಕೂ ಬಿಡುತ್ತೇನೆ : ನಾಗರತ್ನ ಪ್ರತಿಕ್ರಿಯೆ

ಬೆಂಗಳೂರು: ನಟ ದುನಿಯಾ ವಿಜಯ್‌ ಹಾಗೂ ಪತ್ನಿ ನಾಗರತ್ನ ಇವರಿಬ್ಬರ ನಡುವಿನ ದಶಕದ “ದಾಂಪತ್ಯ ಕಲಹ”ಕ್ಕೆ ಅಂತಿಮ ತೆರೆ ಬಿದ್ದಿದ್ದು, ದಂಪತಿ ನಡುವಿನ ವಿಚ್ಛೇದನ ಪ್ರಕರಣಕ್ಕೆ ಹೈಕೋರ್ಟ್‌ ಅಸ್ತು ಎಂದಿದೆ. ಈ ಬೆನ್ನಲ್ಲೇ ವಿಜಯ್ ಮತ್ತು ನಾಗರತ್ನ ಇಬ್ಬರೂ ಪ್ರತಿಕ್ರಿಯೆ ನೀಡಿದ್ದಾರೆ.

ನಾಗರತ್ನ ಪೋಸ್ಟ್ ವೊಂದನ್ನು ಬಿಡುಗಡೆ ಮಾಡಿದ್ದಾರೆ. ‘ಎಲ್ಲಾ ಪ್ರೀತಿಯ ಜನತೆಗೆ ಹಾಗೂ ಮಾಧ್ಯಮದವರಿಗೆ ನನ್ನ ನಮಸ್ಕಾರಗಳು. ಇಷ್ಟು ವರ್ಷಗಳ ಕಾಲ ನಾನು ನನ್ನ ಮಕ್ಕಳಿಗಾಗಿ ಹಾಗೂ ಅವರ ಭವಿಷ್ಯದ ಒಳಿತಿಗಾಗಿ ಎಲ್ಲವನ್ನೂ ಸಹಿಸಿಕೊಂಡು, ಈ ಮದುವೆಯನ್ನು ಉಳಿಸಿಕೊಳ್ಳುವ ಆಶಯದಿಂದ ವಿಚ್ಛೇದನವನ್ನು ವಿರೋಧಿಸುತ್ತಲೇ ಬಂದೆ. ಅದು ಸುಲಭವಾಗಿರಲಿಲ್ಲ. ಆದರೆ ಇಂದು, ನ್ಯಾಯಾಲಯವು ಅಂತಿಮವಾಗಿ ವಿಚ್ಛೇದನವನ್ನು ಮಂಜೂರು ಮಾಡಿದೆ.ಈ ದೀರ್ಘ ಹೋರಾಟದ ಉದ್ದೇಶ, ನಮ್ಮ ಮದುವೆಯ ಹೊರಗೆ ಆಯ್ಕೆ ಮಾಡಿಕೊಂಡ ಅನೈತಿಕ ಸಂಬಂಧವನ್ನು ಕಾನೂನುಬದ್ಧವಾಗಿ ಅಧಿಕೃತಗೊಳಿಸುವುದೇ ಆಗಿದ್ದರೆ, ಕೊನೆಗೂ ಆ ಉದ್ದೇಶ ಈಡೇರಿದೆ. ನಾನು ಅನುಭವಿಸಿದ NARCISSISTIC ABUSE ಹಾಗೂ ಅದರ ನೋವು ಮತ್ತು ಅದರಿಂದಾದ ಎಲ್ಲಾ ಪರಿಣಾಮಗಳನ್ನು ಸಹಿಸಿಕೊಂಡಿದ್ದೇನೆ’ ಎಂದು ಬರೆದಿದ್ದಾರೆ.

ಹೊರಗಿನಿಂದ ಯಾರಿಗೂ ಕಾಣದಂತಹ ಆಳವಾದ ಮಾನಸಿಕ ಹಾಗೂ ಭಾವನಾತ್ಮಕ ನೋವನ್ನು ಒಳಗೇ ಇಟ್ಟುಕೊಂಡು ಬದುಕುವುದು ಹೇಗಿರುತ್ತದೆ ಎಂಬುದು ನನಗೆ ಮಾತ್ರ ಗೊತ್ತು. ನನ್ನ ಅನುಭವವನ್ನು ಒಂದು ದಿನ ಖಂಡಿತವಾಗಿಯೂ ಹಂಚಿಕೊಳ್ಳಲು ಬಯಸುತ್ತೇನೆ. ಯಾರ ಮೇಲೂ ಆರೋಪ ಹೊರಿಸುವುದಕ್ಕಾಗಲಿ ಅಲ್ಲ. ಇಂತಹ ಪರಿಸ್ಥಿತಿಯಲ್ಲಿರುವ ಮಹಿಳೆಯರಿಗೆ ತಾವು ಒಂಟಿಯಲ್ಲ ಎಂಬ ಅರಿವು ಮೂಡಿಸುವುದೇ ನನ್ನ ಉದ್ದೇಶ.ನನ್ನ ಮಕ್ಕಳ ಭವಿಷ್ಯವೇ ಯಾವಾಗಲೂ ನನ್ನ ಮೊದಲ ಆದ್ಯತೆಯಾಗಿತ್ತು. ಇಂದಿಗೂ ಅದೇ ನನ್ನ ಮೊದಲ ಆದ್ಯತೆ. ಏಕೆಂದರೆ ಅವರ ಜೀವನದಲ್ಲಿ ಒಂದು ಹೊಸ ಅಧ್ಯಾಯ ಆರಂಭವಾಗುತ್ತಿರುವ ಈ ಸಂದರ್ಭದಲ್ಲಿ, ನನ್ನ ವೈಯಕ್ತಿಕ ನೋವುಗಳು ಅದರ ಮೇಲೆ ನೆರಳು ಬೀಳುವುದು ನನಗೆ ಇಷ್ಟವಿಲ್ಲ. ಆದ್ದರಿಂದ ಇಂದು ನಾನು ಮೌನವಾಗಿರಲು ಆಯ್ಕೆ ಮಾಡಿಕೊಳ್ಳುತ್ತಿದ್ದೇನೆ. ಎಲ್ಲದಕ್ಕೂ ಒಂದು ಸರಿಯಾದ ಸಮಯವಿದೆ ಎಂಬ ಕಾರಣಕ್ಕೆ. ಒಂದು ದಿನ ನನ್ನ ಅನುಭವವನ್ನು ನನ್ನದೇ ಮಾತುಗಳಲ್ಲಿ ಹಂಚಿಕೊಳ್ಳುತ್ತೇನೆ’ ಎಂದು ಬರೆದಿದ್ದಾರೆ.

”ನನ್ನ ಮಕ್ಕಳು ಯಾವಾಗಲೂ ನನ್ನ ಶಕ್ತಿಯಾಗಿ ನನ್ನ ಜತೆ ನಿಂತಿದ್ದಾರೆ. ನಿಮ್ಮೆಲ್ಲರ ಆಶೀರ್ವಾದ ನನ್ನ ಮೂವರು ಮಕ್ಕಳ ಮೇಲಿದ್ದರೆ, ನನಗೆ ಅಷ್ಟೇ ಸಾಕು. ವಿಜಯ್ ಕುಮಾರ್ ಅವರು ತಮ್ಮ ಜೀವನದಲ್ಲಿ ಸಂತೋಷವಾಗಿರಲಿ ಎಂದು ಹಾರೈಸುತ್ತೇನೆ. ಉಳಿದದ್ದನ್ನು ಕಾಲಕ್ಕೂ ಕರ್ಮಕ್ಕೂ ಬಿಡುತ್ತೇನೆ.’ ಎಂದು ಪೋಸ್ಟ್ ನಲ್ಲಿ ನಾಗರತ್ನ ಬರೆದಿದ್ದಾರೆ.

Vishwa News 24

Recent Posts

ಪಣಂಬೂರು: ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ: ಅದೃಷ್ಟವಶಾತ್  ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರು  -vishwanews24

ಪಣಂಬೂರು: ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ: ಅದೃಷ್ಟವಶಾತ್  ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರು  ಸುರತ್ಕಲ್: ಕಾರ್ಕಳದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್…

14 minutes ago

ಪಡುಬಿದ್ರಿ : ನಿಲ್ಲಿಸಿದ್ದ ಲಾರಿಯ ಹಿಂಭಾಗಕ್ಕೆ ಸ್ಕೂಟರ್ ಡಿಕ್ಕಿ ; ಸವಾರ ಸಾವು -vishwanews24

ಪಡುಬಿದ್ರಿ : ನಿಲ್ಲಿಸಿದ್ದ ಲಾರಿಯ ಹಿಂಭಾಗಕ್ಕೆ ಸ್ಕೂಟರ್ ಡಿಕ್ಕಿ ; ಸವಾರ ಸಾವು ಉಡುಪಿ: ನಂದಿಕೂರಿನ ಕಾರ್ಕಳ–ಪಡುಬಿದ್ರಿ ಬಸ್ ನಿಲ್ದಾಣದ…

52 minutes ago

ಸೆ. 5ರಂದು ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ಸಂಚಾರ -vishwanews24

ಸೆ. 5ರಂದು ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಮಂಗಳೂರು : ಬೆಂಗಳೂರು ಮತ್ತು ಮಂಗಳೂರು ಸೆಂಟ್ರಲ್ ನಡುವೆ…

3 hours ago

ಮಂಗಳೂರು: ಫಳ್ನೀರ್ ನಲ್ಲಿರುವ ಬ್ಲಿಂಕ್ ಇಟ್ ಮಳಿಗೆಗೆ ಅರೋಗ್ಯ ಇಲಾಖೆ ದಾಳಿ -vishwanews24

ಮಂಗಳೂರು: ಫಳ್ನೀರ್ ನಲ್ಲಿರುವ ಬ್ಲಿಂಕ್ ಇಟ್ ಮಳಿಗೆಗೆ ಅರೋಗ್ಯ ಇಲಾಖೆ ದಾಳಿ ಕೊಳೆತ ಮೊಟ್ಟೆ ಪತ್ತೆ, ಗೋದಾಮುಗೆ ಸೀಲ್‌ ಮಾಡಿದ…

4 hours ago

ಉಡುಪಿ : ಪಿ.ಒ.ಪಿ / ರಾಸಾಯನಿಕ ಬಳಸಿ ಗಣೇಶ ವಿಗ್ರಹಗಳ ತಯಾರಿ, ಮಾರಾಟ ನಿಷೇಧ -vishwanews24

ಉಡುಪಿ ಪಿ.ಒ.ಪಿ / ರಾಸಾಯನಿಕ ಬಳಸಿ ಗಣೇಶ ವಿಗ್ರಹಗಳ ತಯಾರಿ, ಮಾರಾಟ ನಿಷೇಧ ಉಡುಪಿ : ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ…

18 hours ago

ಇಲ್ಲಿಂದ ಹೊಸ ಬದುಕಿನ ಪ್ರಯಾಣದತ್ತ ಹೆಜ್ಜೆ  :ವಿಚ್ಛೇದನ ಬೆನ್ನಲ್ಲೇ ವಿಜಯ್‌ ಪೋಸ್ಟ್ -vishwanews24

ಇಲ್ಲಿಂದ ಹೊಸ ಬದುಕಿನ ಪ್ರಯಾಣದತ್ತ ಹೆಜ್ಜೆ  :ವಿಚ್ಛೇದನ ಬೆನ್ನಲ್ಲೇ ವಿಜಯ್‌ ಪೋಸ್ಟ್ ಬೆಂಗಳೂರು: ನಟ, ನಿರ್ದೇಶಕ ದುನಿಯಾ ವಿಜಯ್‌  ಮತ್ತು…

20 hours ago